Latest Updates
-
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
3.8 ಅಡಿ ಎತ್ತರ ಛೋಟಾ ಬಾಬಾ ಕುಂಭ ಮೇಳದ ಆಕರ್ಷಣೆ..! ಆತನ ಕಥೆ ಏನು ಗೊತ್ತಾ?
ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಸಮ್ಮೇಳನ ಎಂಬ ಕೀರ್ತಿ ಪಡೆದಿರುವ ಮಹಾಕುಂಭಮೇಳಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಇದೇ ಜನವರಿ 13ರಂದು ಕುಂಭ ಮೇಳ ಆರಂಭಗೊಂಡು ತಿಂಗಳ ಕಾಲ ನಡೆಯಲಿದೆ. ಹೀಗಾಗಿ ಇಡೀ ವಿಶ್ವದ ಗಮನ ಈಗ ಪ್ರಯಾಗ್ರಾಜ್ನತ್ತ ಇದೆ. ಇನ್ನು ಈ ಕುಂಭಮೇಳದಲ್ಲಿ ಭಾಗಿಯಾಗಲು ಈಗಾಗಲೇ ಸಾಧುಗಳು, ಸಂತರು, ಭಕ್ತರು ಆಗಮಸುತ್ತಿದ್ದಾರೆ.
ತಿಂಗಳಿಗೂ ಹೆಚ್ಚು ದಿನಗಳ ಕಾಲ ಪ್ರಯಾಗ್ರಾಜ್ನಲ್ಲಿ ಸಾಧುಗಳು ಕಂಡುಬರುತ್ತಾರೆ. ಹೀಗಾಗಿ ಅಲ್ಲಿಯೇ ಅವರು ತಾತ್ಕಾಲಿಕ ಟೆಂಟ್ಗಳ ರೂಪಿಸಿಕೊಂಡಿರುತ್ತಾರೆ. ಹಾಗೆ ಸರ್ಕಾರ ಅಲ್ಲಿ ಅತ್ಯಾಧುನಿಕ ಸೌಲಭ್ಯಗಳಿಂದ ಹಿಡಿದು ಎಲ್ಲಾ ಮೂಲಕ ಸೌಲಭ್ಯ ನೀಡುವ ಕಾರ್ಯ ಮಾಡುತ್ತದೆ. ಈಗಾಗಲೇ ಡೂಮ್ ಸಿಟಿಯ ಫೋಟೋಗಳು ವೈರಲ್ ಆಗಿದ್ದು ಎಲ್ಲರನ್ನು ಅಚ್ಚರಿಗೆ ತಳ್ಳುತ್ತಿದೆ.

ಇಂತಹ ಅಚ್ಚರಿಗಳ ನಡುವೆ ಇಲ್ಲೊಬ್ಬರು ಸಾಧುಗಳ ಎಲ್ಲರ ಗಮನ ಸೆಳೆದಿದ್ದಾರೆ. ಕುಂಭ ಮೇಳಕ್ಕೆ ಬರುವ ಲಕ್ಷಾಂತರ ಮಂದಿ ಸಾಧುಗಳ ಪೈಕಿ ಈ ಒಬ್ಬರು ಎಲ್ಲರ ಗಮನ ತಮ್ಮತ್ತ ಸೆಳೆಯುವಂತೆ ಮಾಡಿದ್ದಾರೆ. ಮಧ್ಯಪ್ರದೇಶದ ವಿದಿಶಾದ 57 ವರ್ಷದ ಸಾಧು ಗಂಗಾಪುರಿ ಮಹಾರಾಜ್ ಈಗ ಅಚ್ಚರಿಯ ಕೇಂದ್ರಬಿಂದು ಆಗಿದ್ದಾರೆ.
ಏಕೆಂದರೆ ಅವರ ಎತ್ತರ ಕೇವಲ 3.8 ಅಡಿ ಆಗಿದೆ. ಹೀಗಾಗಿ ಅವರ ಎತ್ತರದ ಕಾರಣದಿಂದ ಛೋಟು ಬಾಬಾ ಎಂಬುದಾಗಿ ಅವರು ಫೇಮಸ್ ಆಗಿದ್ದಾರೆ. ಅವರೀಗ ಪ್ರಯಾಗ್ರಾಜ್ನಲ್ಲಿ ತಮ್ಮ ಟೆಂಟ್ ಸ್ಥಾಪಿಸಿಕೊಂಡಿದ್ದು, ಒಂದಿಷ್ಟು ಜನ ಅವರನ್ನು ನೋಡಲು ಬರುತ್ತಿದ್ದಾರೆ. ಇಡೀ ಸಾಧುಗಳ ಗುಂಪಿನಲ್ಲಿ ಅವರು ವಿಶೇಷವಾಗಿ ಕಾಣಿಸುತ್ತಿದ್ದು, ಎಲ್ಲರ ಗಮನ ತಮ್ಮತ್ತ ಸೆಳೆದಿದ್ದಾರೆ.
ಇದೇ ಮೊದಲ ಬಾರಿಗೆ ಅವರು ಈ ಮಹಾ ಕುಂಭಮೇಳದಲ್ಲಿ ಭಾಗಿಯಾಗುತ್ತಿದ್ದಾರಂತೆ, ಕಳೆದ 32 ವರ್ಷದಿಂದ ಕುಂಭ ಮೇಳದಲ್ಲಿ ಭಾಗಿಯಾಗುವ ಆಸೆ ಹೊಂದಿದ್ದರಂತೆ. ಹಾಗಾಗಿ 32 ವರ್ಷದಿಂದಲೂ ಸ್ನಾನವನ್ನೇ ಮಾಡಿಲ್ಲವಂತೆ. 32 ವರ್ಷದಿಂದ ಅವರ ಬಯಕೆಯೊಂದು ಈಡೇರದ ಕಾರಣ ಸ್ನಾನ ಮಾಡುವುದನ್ನೇ ನಿಲ್ಲಿಸಿದ್ದಾರಂತೆ. ಆ ಬಯಕೆ ಈಡೇರದ ಹೊರತು ಗಂಗಾ ನದಿಯಲ್ಲಿ ಮುಳುಗುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅವರನ್ನು ಪ್ರಯಾಗ್ರಾಜ್ನಲ್ಲಿ ನೋಡಿದ ಮಂದಿ ಅವರ ಬಳಿ ಮಾತನಾಡಲು ಆಗಮಿಸುತ್ತಿದ್ದಾರಂತೆ. ಹೀಗಾಗಿ ಈ ವರ್ಷದ ಕುಂಭಮೇಳದಲ್ಲಿ ಇವರು ಪ್ರಮುಖ ಆಕರ್ಷಣೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಕುಂಭಮೇಳಕ್ಕೆ ಬಂತು ಡೂಮ್ ಸಿಟಿ ರೂಪ!
ಕುಂಭಮೇಳದಲ್ಲಿ ಭಾಗಿಯಾಗುವವರಿಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಅತ್ಯಂತ ಸೌಲಭ್ಯಯುಕ್ತ ಟೆಂಟ್ಗಳ ನಿರ್ಮಾಣಗೊಂಡಿದೆ. ಹಾಗೆ ಇಡೀ ಪಟ್ಟಣ ಈಗ ಸಿದ್ಧಗೊಂಡಿದೆ. ಯಾತ್ರಿಕರು ಉಳಿಯುವ ಉದ್ದೇಶದಿಂದ ಶಿಬಿರಗಳು ತಲೆ ಎತ್ತಿದೆ. ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ಈ ಶಿಬಿರದಲ್ಲಿ ಸೈಟ್ ಸೂಪರ್ ಪ್ರೀಮಿಯಂ ಸೂಟ್ಗಳು, ಪ್ರೀಮಿಯಂ ಸೂಟ್ಗಳು, ಡೀಲಕ್ಸ್ ಸೂಟ್ಗಳು ಮತ್ತು ಸ್ಟ್ಯಾಂಡರ್ಡ್ ಕ್ಯಾಂಪ್ಗಳನ್ನು ಒಳಗೊಂಡಿರುತ್ತದೆ, ಪ್ರತಿಯೊಂದೂ ರೂಂಗಳನ್ನು ಶಾಂತಿಯುತ ಮತ್ತು ಆರಾಮದಾಯಕವಾಗಿರುವಂತೆ ವಿನ್ಯಾಸಗೊಳಿಸಲಾಗಿದೆ.
ಈ ಆಧುನಿಕ ವಸತಿ ಸಂಕೀರ್ಣವು ಕುಂಭಮೇಳದ ಸೌಕರ್ಯ, ಭದ್ರತೆ ಮತ್ತು ವಿಹಂಗಮ ನೋಟಗಳನ್ನು ನೀಡುತ್ತದೆ. ಡೋಮ್ ಸಿಟಿಯು 44 ಅತ್ಯಾಧುನಿಕ ಗುಮ್ಮಟಗಳನ್ನು ಹೊಂದಿರುತ್ತದೆ, ಪ್ರತಿಯೊಂದೂ 32x32 ಅಡಿಗಳಷ್ಟು ವ್ಯಾಪಿಸಿರಲಿದೆ. 15ರಿಂದ 18 ಅಡಿ ಎತ್ತರವಾಗಿರಲಿದೆ. ಹಾಗೆ 360 ಡಿಗ್ರಿಯ ನೋಟವನ್ನು ಅದರ ಒಳಗಿಂದ ಸವಿಯಬಹುದು. ಇದು ಅತ್ಯಾಧುನಿಕತೆಗೆ ಹಿಡಿದ ಕೈಗನ್ನಡಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯ ಇರಲಿದೆ.



Click it and Unblock the Notifications











