Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
3.8 ಅಡಿ ಎತ್ತರ ಛೋಟಾ ಬಾಬಾ ಕುಂಭ ಮೇಳದ ಆಕರ್ಷಣೆ..! ಆತನ ಕಥೆ ಏನು ಗೊತ್ತಾ?
ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಸಮ್ಮೇಳನ ಎಂಬ ಕೀರ್ತಿ ಪಡೆದಿರುವ ಮಹಾಕುಂಭಮೇಳಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಇದೇ ಜನವರಿ 13ರಂದು ಕುಂಭ ಮೇಳ ಆರಂಭಗೊಂಡು ತಿಂಗಳ ಕಾಲ ನಡೆಯಲಿದೆ. ಹೀಗಾಗಿ ಇಡೀ ವಿಶ್ವದ ಗಮನ ಈಗ ಪ್ರಯಾಗ್ರಾಜ್ನತ್ತ ಇದೆ. ಇನ್ನು ಈ ಕುಂಭಮೇಳದಲ್ಲಿ ಭಾಗಿಯಾಗಲು ಈಗಾಗಲೇ ಸಾಧುಗಳು, ಸಂತರು, ಭಕ್ತರು ಆಗಮಸುತ್ತಿದ್ದಾರೆ.
ತಿಂಗಳಿಗೂ ಹೆಚ್ಚು ದಿನಗಳ ಕಾಲ ಪ್ರಯಾಗ್ರಾಜ್ನಲ್ಲಿ ಸಾಧುಗಳು ಕಂಡುಬರುತ್ತಾರೆ. ಹೀಗಾಗಿ ಅಲ್ಲಿಯೇ ಅವರು ತಾತ್ಕಾಲಿಕ ಟೆಂಟ್ಗಳ ರೂಪಿಸಿಕೊಂಡಿರುತ್ತಾರೆ. ಹಾಗೆ ಸರ್ಕಾರ ಅಲ್ಲಿ ಅತ್ಯಾಧುನಿಕ ಸೌಲಭ್ಯಗಳಿಂದ ಹಿಡಿದು ಎಲ್ಲಾ ಮೂಲಕ ಸೌಲಭ್ಯ ನೀಡುವ ಕಾರ್ಯ ಮಾಡುತ್ತದೆ. ಈಗಾಗಲೇ ಡೂಮ್ ಸಿಟಿಯ ಫೋಟೋಗಳು ವೈರಲ್ ಆಗಿದ್ದು ಎಲ್ಲರನ್ನು ಅಚ್ಚರಿಗೆ ತಳ್ಳುತ್ತಿದೆ.

ಇಂತಹ ಅಚ್ಚರಿಗಳ ನಡುವೆ ಇಲ್ಲೊಬ್ಬರು ಸಾಧುಗಳ ಎಲ್ಲರ ಗಮನ ಸೆಳೆದಿದ್ದಾರೆ. ಕುಂಭ ಮೇಳಕ್ಕೆ ಬರುವ ಲಕ್ಷಾಂತರ ಮಂದಿ ಸಾಧುಗಳ ಪೈಕಿ ಈ ಒಬ್ಬರು ಎಲ್ಲರ ಗಮನ ತಮ್ಮತ್ತ ಸೆಳೆಯುವಂತೆ ಮಾಡಿದ್ದಾರೆ. ಮಧ್ಯಪ್ರದೇಶದ ವಿದಿಶಾದ 57 ವರ್ಷದ ಸಾಧು ಗಂಗಾಪುರಿ ಮಹಾರಾಜ್ ಈಗ ಅಚ್ಚರಿಯ ಕೇಂದ್ರಬಿಂದು ಆಗಿದ್ದಾರೆ.
ಏಕೆಂದರೆ ಅವರ ಎತ್ತರ ಕೇವಲ 3.8 ಅಡಿ ಆಗಿದೆ. ಹೀಗಾಗಿ ಅವರ ಎತ್ತರದ ಕಾರಣದಿಂದ ಛೋಟು ಬಾಬಾ ಎಂಬುದಾಗಿ ಅವರು ಫೇಮಸ್ ಆಗಿದ್ದಾರೆ. ಅವರೀಗ ಪ್ರಯಾಗ್ರಾಜ್ನಲ್ಲಿ ತಮ್ಮ ಟೆಂಟ್ ಸ್ಥಾಪಿಸಿಕೊಂಡಿದ್ದು, ಒಂದಿಷ್ಟು ಜನ ಅವರನ್ನು ನೋಡಲು ಬರುತ್ತಿದ್ದಾರೆ. ಇಡೀ ಸಾಧುಗಳ ಗುಂಪಿನಲ್ಲಿ ಅವರು ವಿಶೇಷವಾಗಿ ಕಾಣಿಸುತ್ತಿದ್ದು, ಎಲ್ಲರ ಗಮನ ತಮ್ಮತ್ತ ಸೆಳೆದಿದ್ದಾರೆ.
ಇದೇ ಮೊದಲ ಬಾರಿಗೆ ಅವರು ಈ ಮಹಾ ಕುಂಭಮೇಳದಲ್ಲಿ ಭಾಗಿಯಾಗುತ್ತಿದ್ದಾರಂತೆ, ಕಳೆದ 32 ವರ್ಷದಿಂದ ಕುಂಭ ಮೇಳದಲ್ಲಿ ಭಾಗಿಯಾಗುವ ಆಸೆ ಹೊಂದಿದ್ದರಂತೆ. ಹಾಗಾಗಿ 32 ವರ್ಷದಿಂದಲೂ ಸ್ನಾನವನ್ನೇ ಮಾಡಿಲ್ಲವಂತೆ. 32 ವರ್ಷದಿಂದ ಅವರ ಬಯಕೆಯೊಂದು ಈಡೇರದ ಕಾರಣ ಸ್ನಾನ ಮಾಡುವುದನ್ನೇ ನಿಲ್ಲಿಸಿದ್ದಾರಂತೆ. ಆ ಬಯಕೆ ಈಡೇರದ ಹೊರತು ಗಂಗಾ ನದಿಯಲ್ಲಿ ಮುಳುಗುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅವರನ್ನು ಪ್ರಯಾಗ್ರಾಜ್ನಲ್ಲಿ ನೋಡಿದ ಮಂದಿ ಅವರ ಬಳಿ ಮಾತನಾಡಲು ಆಗಮಿಸುತ್ತಿದ್ದಾರಂತೆ. ಹೀಗಾಗಿ ಈ ವರ್ಷದ ಕುಂಭಮೇಳದಲ್ಲಿ ಇವರು ಪ್ರಮುಖ ಆಕರ್ಷಣೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಕುಂಭಮೇಳಕ್ಕೆ ಬಂತು ಡೂಮ್ ಸಿಟಿ ರೂಪ!
ಕುಂಭಮೇಳದಲ್ಲಿ ಭಾಗಿಯಾಗುವವರಿಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಅತ್ಯಂತ ಸೌಲಭ್ಯಯುಕ್ತ ಟೆಂಟ್ಗಳ ನಿರ್ಮಾಣಗೊಂಡಿದೆ. ಹಾಗೆ ಇಡೀ ಪಟ್ಟಣ ಈಗ ಸಿದ್ಧಗೊಂಡಿದೆ. ಯಾತ್ರಿಕರು ಉಳಿಯುವ ಉದ್ದೇಶದಿಂದ ಶಿಬಿರಗಳು ತಲೆ ಎತ್ತಿದೆ. ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ಈ ಶಿಬಿರದಲ್ಲಿ ಸೈಟ್ ಸೂಪರ್ ಪ್ರೀಮಿಯಂ ಸೂಟ್ಗಳು, ಪ್ರೀಮಿಯಂ ಸೂಟ್ಗಳು, ಡೀಲಕ್ಸ್ ಸೂಟ್ಗಳು ಮತ್ತು ಸ್ಟ್ಯಾಂಡರ್ಡ್ ಕ್ಯಾಂಪ್ಗಳನ್ನು ಒಳಗೊಂಡಿರುತ್ತದೆ, ಪ್ರತಿಯೊಂದೂ ರೂಂಗಳನ್ನು ಶಾಂತಿಯುತ ಮತ್ತು ಆರಾಮದಾಯಕವಾಗಿರುವಂತೆ ವಿನ್ಯಾಸಗೊಳಿಸಲಾಗಿದೆ.
ಈ ಆಧುನಿಕ ವಸತಿ ಸಂಕೀರ್ಣವು ಕುಂಭಮೇಳದ ಸೌಕರ್ಯ, ಭದ್ರತೆ ಮತ್ತು ವಿಹಂಗಮ ನೋಟಗಳನ್ನು ನೀಡುತ್ತದೆ. ಡೋಮ್ ಸಿಟಿಯು 44 ಅತ್ಯಾಧುನಿಕ ಗುಮ್ಮಟಗಳನ್ನು ಹೊಂದಿರುತ್ತದೆ, ಪ್ರತಿಯೊಂದೂ 32x32 ಅಡಿಗಳಷ್ಟು ವ್ಯಾಪಿಸಿರಲಿದೆ. 15ರಿಂದ 18 ಅಡಿ ಎತ್ತರವಾಗಿರಲಿದೆ. ಹಾಗೆ 360 ಡಿಗ್ರಿಯ ನೋಟವನ್ನು ಅದರ ಒಳಗಿಂದ ಸವಿಯಬಹುದು. ಇದು ಅತ್ಯಾಧುನಿಕತೆಗೆ ಹಿಡಿದ ಕೈಗನ್ನಡಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯ ಇರಲಿದೆ.



Click it and Unblock the Notifications