Latest Updates
-
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು
70ನೇ ಚಲನ ಚಿತ್ರೋತ್ಸವ ಪ್ರಶಸ್ತಿ: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ಕಾಂತಾರಾ ಅತ್ಯುತ್ತಮ ಮನರಂಜನಾ ಚಿತ್ರ
70ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ದೆಹಲಿಯಲ್ಲಿ ಘೋಷಣೆಯಾಗಿದೆ. 2022 ಜನವರಿ 1ರಿಂದ ಡಿಸೆಂಬರ್ 31ರವರೆಎಗೆ ಸೆನ್ಸಾರ್ ಪ್ರಮಾಣ ಪತ್ರ ಪಡೆದುಕೊಂಡ ಸಿನಿಮಾಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ
ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ಚಿತ್ರ : ಆಟ್ಟಂ
ಅತ್ಯುತ್ತಮ ನಟಿ: ಮಾನ್ಸಿ ಪರಾಖ್
ಅತ್ಯುತ್ತಮ ನಟಿ: ನಿತ್ಯ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)
ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ(ತಮಿಳು)
ರಾಷ್ಟ್ರ ಪ್ರಶಸ್ತಿ ಪಡೆದ ನಾಲ್ಕನೇ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ
70ನೇ ಚಲನ ಚಿತ್ರೋತ್ಸವ ಕನ್ನಡಿಗರ ಪಾಲಿಗೆ ತುಂಬಾನೇ ವಿಶೇಷವಾಗಿದೆ, ಬಾಲಿವುಡ್, ಟಾಲಿವುಡ್, ಕಾಲಿವುಡ್ ಹೀಗೆ ಇತರ ಭಾಷೆಯ ಚಿತ್ರಗಳ ನಡುವೆ ನಮ್ಮ ಕನ್ನಡ ಚಿತ್ರಕ್ಕೆ ಪ್ರಶಸ್ತಿ ಲಭವಿಸಿದೆ, ಅದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಎರಡು ಚಿತ್ರಗಳಿಗೆ ಎಂಬುವುದು ಇನ್ನೂ ವಿಶೇಷ. ಇ್ನು ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಬ್ ಅವರಅದ್ಭುತ ನಟನೆಗೆ ದೊರೆತಿದೆ.
ಕಾಂತರ ಚಿತ್ರ ಮಾಡಿದ ಮೋಡಿ ಎಂಥದ್ದು ಎಂಬುವುದು ಎಲ್ಲರಿಗೂ ಗೊತ್ತು, ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ಇಡೀ ಭಾರತದಲ್ಲಿ ಗಮನ ಸೆಳೆದ ಚಿ್ರ ಕಾಂತರ. ಕರ್ನಾಟಕದ ತುಳುನಾಡಿನ ದೈವಾರಾಧನೆ ಕುರಿತ ಕತೆಯೊಂದು ಅಷ್ಟು ದೊಡ್ಡ ಮೆಟ್ಟದಲ್ಲಿ ಗಮನ ಸೆಳೆಯಿತು. ಕಾಂತರದಲ್ಲಿ ರಿಷಬ್ಶೆಟ್ಟಿ ನಟನೆ ನೋಡಿದರೆ ಎಂಥ ನಾಸ್ತಿಕನಿಗೂ ಮೈ ಜುಮ್ ಅನ್ನುತ್ತೆ, ಹಾಗಿದೆ ನಟನೆ. ಈಗ ಅವರ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಕೂಡ ಲಭಿಸಿದೆ.
ರಾಷ್ಟ್ರ-ಪ್ರಶಸ್ತಿ ಪಡೆದ ಕನ್ನಡದ ನಾಲ್ಕು ನಟರು
ಚೋಮನುಡಿ ಚಿತ್ರಕ್ಕೆ ವಾಸುದೇವ್ ರಾವ್, ತಬರನ ಕಥೆ ಚಿತ್ರಕ್ಕೆ ಚಾರು ಹಾಸನ್ ಅವರಿಗೆ, ನಾನು ಅವನ್ನಲ್ಲ ಅವಳು ಚಿತ್ರಕ್ಕೆ ಸಂಚಾರಿ ವಿಜಯ್, ಕಾಂತರ ಚಿತ್ರಕ್ಕೆ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.
ಚಿತ್ರಗಡೆ ಬಿಡುಗಡೆಯಾದಾಗಲೂ ಕಾಂತಾರ ಕೆಜಿಎಫ್ 2 ತುಂಬಾೇ ಸದ್ದು ಮಾಡಿತ್ತು ಇದೀಗ70ನೇ ಚಲನ ಚಿತ್ರೋತ್ಸವ ಪ್ರಶಸ್ತಿ ಸಮಾರಂಭ ಕೂಡ ಕನ್ನಡಿಗರಿಗೆ ತುಂಬಾನೇ ವಿಶೇಷವಾಗಿದೆ.



Click it and Unblock the Notifications