Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
70ನೇ ಚಲನ ಚಿತ್ರೋತ್ಸವ ಪ್ರಶಸ್ತಿ: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ಕಾಂತಾರಾ ಅತ್ಯುತ್ತಮ ಮನರಂಜನಾ ಚಿತ್ರ
70ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ದೆಹಲಿಯಲ್ಲಿ ಘೋಷಣೆಯಾಗಿದೆ. 2022 ಜನವರಿ 1ರಿಂದ ಡಿಸೆಂಬರ್ 31ರವರೆಎಗೆ ಸೆನ್ಸಾರ್ ಪ್ರಮಾಣ ಪತ್ರ ಪಡೆದುಕೊಂಡ ಸಿನಿಮಾಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ
ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ಚಿತ್ರ : ಆಟ್ಟಂ
ಅತ್ಯುತ್ತಮ ನಟಿ: ಮಾನ್ಸಿ ಪರಾಖ್
ಅತ್ಯುತ್ತಮ ನಟಿ: ನಿತ್ಯ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)
ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ(ತಮಿಳು)
ರಾಷ್ಟ್ರ ಪ್ರಶಸ್ತಿ ಪಡೆದ ನಾಲ್ಕನೇ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ
70ನೇ ಚಲನ ಚಿತ್ರೋತ್ಸವ ಕನ್ನಡಿಗರ ಪಾಲಿಗೆ ತುಂಬಾನೇ ವಿಶೇಷವಾಗಿದೆ, ಬಾಲಿವುಡ್, ಟಾಲಿವುಡ್, ಕಾಲಿವುಡ್ ಹೀಗೆ ಇತರ ಭಾಷೆಯ ಚಿತ್ರಗಳ ನಡುವೆ ನಮ್ಮ ಕನ್ನಡ ಚಿತ್ರಕ್ಕೆ ಪ್ರಶಸ್ತಿ ಲಭವಿಸಿದೆ, ಅದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಎರಡು ಚಿತ್ರಗಳಿಗೆ ಎಂಬುವುದು ಇನ್ನೂ ವಿಶೇಷ. ಇ್ನು ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಬ್ ಅವರಅದ್ಭುತ ನಟನೆಗೆ ದೊರೆತಿದೆ.
ಕಾಂತರ ಚಿತ್ರ ಮಾಡಿದ ಮೋಡಿ ಎಂಥದ್ದು ಎಂಬುವುದು ಎಲ್ಲರಿಗೂ ಗೊತ್ತು, ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ಇಡೀ ಭಾರತದಲ್ಲಿ ಗಮನ ಸೆಳೆದ ಚಿ್ರ ಕಾಂತರ. ಕರ್ನಾಟಕದ ತುಳುನಾಡಿನ ದೈವಾರಾಧನೆ ಕುರಿತ ಕತೆಯೊಂದು ಅಷ್ಟು ದೊಡ್ಡ ಮೆಟ್ಟದಲ್ಲಿ ಗಮನ ಸೆಳೆಯಿತು. ಕಾಂತರದಲ್ಲಿ ರಿಷಬ್ಶೆಟ್ಟಿ ನಟನೆ ನೋಡಿದರೆ ಎಂಥ ನಾಸ್ತಿಕನಿಗೂ ಮೈ ಜುಮ್ ಅನ್ನುತ್ತೆ, ಹಾಗಿದೆ ನಟನೆ. ಈಗ ಅವರ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಕೂಡ ಲಭಿಸಿದೆ.
ರಾಷ್ಟ್ರ-ಪ್ರಶಸ್ತಿ ಪಡೆದ ಕನ್ನಡದ ನಾಲ್ಕು ನಟರು
ಚೋಮನುಡಿ ಚಿತ್ರಕ್ಕೆ ವಾಸುದೇವ್ ರಾವ್, ತಬರನ ಕಥೆ ಚಿತ್ರಕ್ಕೆ ಚಾರು ಹಾಸನ್ ಅವರಿಗೆ, ನಾನು ಅವನ್ನಲ್ಲ ಅವಳು ಚಿತ್ರಕ್ಕೆ ಸಂಚಾರಿ ವಿಜಯ್, ಕಾಂತರ ಚಿತ್ರಕ್ಕೆ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.
ಚಿತ್ರಗಡೆ ಬಿಡುಗಡೆಯಾದಾಗಲೂ ಕಾಂತಾರ ಕೆಜಿಎಫ್ 2 ತುಂಬಾೇ ಸದ್ದು ಮಾಡಿತ್ತು ಇದೀಗ70ನೇ ಚಲನ ಚಿತ್ರೋತ್ಸವ ಪ್ರಶಸ್ತಿ ಸಮಾರಂಭ ಕೂಡ ಕನ್ನಡಿಗರಿಗೆ ತುಂಬಾನೇ ವಿಶೇಷವಾಗಿದೆ.



Click it and Unblock the Notifications