Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
70ನೇ ಚಲನ ಚಿತ್ರೋತ್ಸವ ಪ್ರಶಸ್ತಿ: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ಕಾಂತಾರಾ ಅತ್ಯುತ್ತಮ ಮನರಂಜನಾ ಚಿತ್ರ
70ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ದೆಹಲಿಯಲ್ಲಿ ಘೋಷಣೆಯಾಗಿದೆ. 2022 ಜನವರಿ 1ರಿಂದ ಡಿಸೆಂಬರ್ 31ರವರೆಎಗೆ ಸೆನ್ಸಾರ್ ಪ್ರಮಾಣ ಪತ್ರ ಪಡೆದುಕೊಂಡ ಸಿನಿಮಾಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ಮನರಂಜನಾ ಚಿತ್ರ: ಕಾಂತಾರ
ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ)
ಅತ್ಯುತ್ತಮ ಚಿತ್ರ : ಆಟ್ಟಂ
ಅತ್ಯುತ್ತಮ ನಟಿ: ಮಾನ್ಸಿ ಪರಾಖ್
ಅತ್ಯುತ್ತಮ ನಟಿ: ನಿತ್ಯ ಮೆನನ್ (ತಮಿಳು: ತಿರುಚಿತ್ರಂಬಲಂ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ (ತಮಿಳು)
ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ
ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಬ್ರಹ್ಮಾಸ್ತ್ರ)
ಅತ್ಯುತ್ತಮ ಛಾಯಾಗ್ರಹಣ: ರವಿ ವರ್ಮನ್ (ಪೊನ್ನಿಯನ್ ಸೆಲ್ವನ್ 1)
ಅತ್ಯುತ್ತಮ ಸಂಗೀತ ನಿರ್ದೇಶನ: ಪ್ರೀತಂ (ಬ್ರಹ್ಮಾಸ್ತ್ರ)
ಅತ್ಯುತ್ತಮ ನೃತ್ಯ ನಿರ್ದೇಶನ: ತಿರುಚಿತ್ರಂಬಲಂ(ತಮಿಳು)
ರಾಷ್ಟ್ರ ಪ್ರಶಸ್ತಿ ಪಡೆದ ನಾಲ್ಕನೇ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ
70ನೇ ಚಲನ ಚಿತ್ರೋತ್ಸವ ಕನ್ನಡಿಗರ ಪಾಲಿಗೆ ತುಂಬಾನೇ ವಿಶೇಷವಾಗಿದೆ, ಬಾಲಿವುಡ್, ಟಾಲಿವುಡ್, ಕಾಲಿವುಡ್ ಹೀಗೆ ಇತರ ಭಾಷೆಯ ಚಿತ್ರಗಳ ನಡುವೆ ನಮ್ಮ ಕನ್ನಡ ಚಿತ್ರಕ್ಕೆ ಪ್ರಶಸ್ತಿ ಲಭವಿಸಿದೆ, ಅದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ಎರಡು ಚಿತ್ರಗಳಿಗೆ ಎಂಬುವುದು ಇನ್ನೂ ವಿಶೇಷ. ಇ್ನು ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಬ್ ಅವರಅದ್ಭುತ ನಟನೆಗೆ ದೊರೆತಿದೆ.
ಕಾಂತರ ಚಿತ್ರ ಮಾಡಿದ ಮೋಡಿ ಎಂಥದ್ದು ಎಂಬುವುದು ಎಲ್ಲರಿಗೂ ಗೊತ್ತು, ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ಇಡೀ ಭಾರತದಲ್ಲಿ ಗಮನ ಸೆಳೆದ ಚಿ್ರ ಕಾಂತರ. ಕರ್ನಾಟಕದ ತುಳುನಾಡಿನ ದೈವಾರಾಧನೆ ಕುರಿತ ಕತೆಯೊಂದು ಅಷ್ಟು ದೊಡ್ಡ ಮೆಟ್ಟದಲ್ಲಿ ಗಮನ ಸೆಳೆಯಿತು. ಕಾಂತರದಲ್ಲಿ ರಿಷಬ್ಶೆಟ್ಟಿ ನಟನೆ ನೋಡಿದರೆ ಎಂಥ ನಾಸ್ತಿಕನಿಗೂ ಮೈ ಜುಮ್ ಅನ್ನುತ್ತೆ, ಹಾಗಿದೆ ನಟನೆ. ಈಗ ಅವರ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಕೂಡ ಲಭಿಸಿದೆ.
ರಾಷ್ಟ್ರ-ಪ್ರಶಸ್ತಿ ಪಡೆದ ಕನ್ನಡದ ನಾಲ್ಕು ನಟರು
ಚೋಮನುಡಿ ಚಿತ್ರಕ್ಕೆ ವಾಸುದೇವ್ ರಾವ್, ತಬರನ ಕಥೆ ಚಿತ್ರಕ್ಕೆ ಚಾರು ಹಾಸನ್ ಅವರಿಗೆ, ನಾನು ಅವನ್ನಲ್ಲ ಅವಳು ಚಿತ್ರಕ್ಕೆ ಸಂಚಾರಿ ವಿಜಯ್, ಕಾಂತರ ಚಿತ್ರಕ್ಕೆ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.
ಚಿತ್ರಗಡೆ ಬಿಡುಗಡೆಯಾದಾಗಲೂ ಕಾಂತಾರ ಕೆಜಿಎಫ್ 2 ತುಂಬಾೇ ಸದ್ದು ಮಾಡಿತ್ತು ಇದೀಗ70ನೇ ಚಲನ ಚಿತ್ರೋತ್ಸವ ಪ್ರಶಸ್ತಿ ಸಮಾರಂಭ ಕೂಡ ಕನ್ನಡಿಗರಿಗೆ ತುಂಬಾನೇ ವಿಶೇಷವಾಗಿದೆ.



Click it and Unblock the Notifications