Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸಂಭಾವ್ಯ ರೈಲು ದುರಂತ ತಪ್ಪಿಸಿದ 12 ವರ್ಷದ ಬಾಲಕ..! ಹೇಗೆ ಗೊತ್ತಾ?
ರೈಲು ಅಪಘಾತಗಳು ಎಷ್ಟು ಭೀಕರವಾಗಿರುತ್ತವೆ ಎಂಬುದು ನಮಗೆಲ್ಲಾ ತಿಳಿದ ವಿಚಾರ. ಒಮ್ಮೆ ಈ ರೈಲು ಅಪಘಾತ ಸಂಭವಿಸಿದರೆ ನೂರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಾರೆ. ಇನ್ನು ಹಲವಾರು ಮಂದಿ ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗಬೇಕಾಗುತ್ತದೆ. ಇಂತಹ ಹಲವು ಅಪಘಾತಗಳು ನಡೆದಿವೆ ಕೂಡ.
ರೈಲು ಅಪಘಾತ ಸಂಭವಿಸಲು ಪ್ರಮುಖವಾಗಿ ರೈಲು ಹಳಿ ತಪ್ಪುವುದು, ಸಿಗ್ನಲಿಂಗ್ ಸಮಸ್ಯೆ, ತಾಂತ್ರಿಕ ಸಮಸ್ಯೆ ಹಾಗೂ ಕೆಲವು ಬಾರಿ ಮಾನವ ನಿರ್ಮಿತ ಸಮಸ್ಯೆಯೂ ಆಗಿರಲಿದೆ. ಹಳಿಯಲ್ಲಿ ಏನಾದರು ಸಮಸ್ಯೆ ಎದುರಾಗಿ ರೈಲು ಅಪಘಾತ ಸಂಭವಿಸುವುದೇ ಹೆಚ್ಚು. ಈಗ ಇಲ್ಲೊಂದು ಕಡೆ ಇದೇ ರೀತಿ ರೈಲ್ವೆ ಹಳಿ ಸಮಸ್ಯೆಯಿಂದ ಸಂಭವಿಸಬಹುದಾದ ಬಹುದೊಡ್ಡ ರೈಲು ಅಪಘಾತ ನಿಂತಿದೆ.

ಈ ರೈಲು ಅಪಘಾತವನ್ನು 12 ವರ್ಷದ ಬಾಲಕನೊಬ್ಬ ತಡೆದಿದ್ದಾನೆ. ಹೌದು ಬಿಹಾರದಲ್ಲಿ ಇತ್ತೀಚಿಗೆ 12 ವರ್ಷದ ಬಾಲಕ ಸಂಭಾವ್ಯ ರೈಲು ಅಪಘಾತ ತಡದು ಸುದ್ದಿಯಾಗಿದ್ದಾನೆ. ಮುಜಾಫರ್ಪುರ ರೈಲು ಮಾರ್ಗದ ಭೋಲಾ ಟಾಕೀಸ್ ಗುಮ್ಟಿ ಬಳಿ ರೈಲ್ವೆ ಹಳಿಯಲ್ಲಿ ಉಂಟಾದ ಸಮಸ್ಯೆ ಗುರುತಿಸಿದ 12 ವರ್ಷದ ಮೊಹಮ್ಮದ್ ಶಹಬಾಜ್ ರೈಲು ತಡೆದು ಮುಂದಾಗಬಹುದಾದ ಸಂಭಾವ್ಯ ದುರಂತ ತಡೆದಿದ್ದಾನೆ.
ಶಹಬಾಜ್ ಮನೆಯ ಬಳಿ ನಡೆದುಕೊಂಡು ಹೋಗುವಾಗ ಅಲ್ಲಿಯೇ ಹಾದು ಹೋಗುವ ರೈಲು ಕಂಬಿ ನೋಡಿ ಅದರಲ್ಲಿ ಬಿರುಕು ಬಂದಿರುವುದನ್ನು ಆತ ಗಮನಿಸಿದ್ದಾನೆ. ಅದೇ ಮಾರ್ಗದಲ್ಲಿ ಹೌರಾ-ಕೊತ್ಗೊಡಮ್ ಎಕ್ಸ್ಪ್ರೆಸ್ ಬರುತ್ತಿತ್ತು. ಈ ವೇಳೆ ಸಮಯ ಪ್ರಜ್ಞೆ ಮೆರೆದ ಆತ ತನ್ನ ಬಳಿ ಇದ್ದ ಕೆಂಪು ಟವೆಲ್ ಅನ್ನು ರೈಲಿನ ಮುಂದೆ ಪ್ರದರ್ಶಿಸಿದ್ದಾನೆ.
ಈ ಸೂಚನೆ ಗಮನಿಸಿದ ಲೋಕೋ ಪೈಲೆಟ್ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲುವಂತೆ ಮಾಡಿದ್ದಾನೆ. ಆದರೆ ಈ ವೇಳೆ ಚಾಲಕ ಹಾಗೂ ಒಳಗಿದ್ದ ಪ್ರಯಾಣಿಕರಿಗೆ ಏನು ನಡೆಯುತ್ತಿದೆ ಎಂದು ತಿಳಿಯಲಿಲ್ಲ. ಆದರೆ ಲೋಕೋ ಪೈಲಟ್ ಕೆಳಗಿಳಿದು ಬಂದು ಬಾಲಕನ ಪ್ರಶ್ನಿಸಿದಾಗ ಆತ ಕಂಬಿಗಳಲ್ಲಿ ಬಿರುಕು ಮೂಡಿರುವುದನ್ನು ತೋರಿಸಿದ್ದಾನೆ.
ಬಳಿಕ ಲೋಕೋ ಪೈಲಟ್ ರೈಲ್ವೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾನೆ. ಈ ವೇಳೆ ಆ ಮಾರ್ಗದಲ್ಲಿ ಬರುತ್ತಿದ್ದ ಎಲ್ಲಾ ರೈಲುಗಳ ತಡೆದು ಹಳಿಯಲ್ಲಿ ಉಂಟಾಗಿದ್ದ ಸಮಸ್ಯೆ ಬಗೆಹರಿಸಲು ಮುಂದಾಗಲಾಗಿದೆ. 12 ವರ್ಷದ ಈ ಬಾಲಕ ತೋರಿಸ ಜಾಣ್ಮೆ ಹಾಗೂ ಧೈರ್ಯದ ಕಾರಣದಿಂದ 1500ಕ್ಕೂ ಹೆಚ್ಚು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆತನ ಕಾರ್ಯಕ್ಕೆ ಭಾರೀ ಮೆಚ್ಚುಗೆ ಕೇಳಿಬಂದಿತ್ತು.
ಘಟನೆಯ ನಂತರ, ಶಹಬಾಜ್ ಅವರ ಧೈರ್ಯಕ್ಕಾಗಿ ಎಲ್ಲೆಡೆಯಿಂದ ಮೆಚ್ಚುಗೆ ಕೇಳಿಬಂದಿದೆ. ಅಲ್ಲದೆ ಬಾಲಕನ ಕಾರ್ಯ ಮೆಚ್ಚಿ ಡಿಆರ್ಎಂ ಅಭಿನಂದಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಇದರ ಜೊತೆ ಆತನ ಕಾರ್ಯಕ್ಕೆ ಭಾರೀ ಮೆಚ್ಚುಗೆ ಕೇಳಿಬಂದಿದ್ದು, ಇಂತಹ ಮಕ್ಕಳ ಅಗತ್ಯವಾಗಿ ಇಂದಿನ ದಿನಕ್ಕೆ ಪ್ರಸ್ತುತವಾಗಿ ಬೇಕಾಗಿದೆ. ಇಂತಹ ಕೆಲಸ ಮಾಡಿದಾಗ ಅವರನ್ನು ಹುರಿದುಂಬಿಸುವ ಕಾರ್ಯವಾಗಬೇಕಿದೆ ಎಂದು ಜನ ಅಭಿಪ್ರಾಯ ಹೊರಹಾಕಿದ್ದಾರೆ. ಸದ್ಯ ಆತನಿಗೆ ಹಲವು ಸಂಸ್ಥೆಗಳು, ಇಲಾಖೆಗಳ ವತಿಯಿಂದ ಸನ್ಮಾನ, ಗೌರವ ನೀಡಲಾಗಿದೆ.
ಇತ್ತ ಈ ರೈಲಿನಲ್ಲಿ ಸುಮಾರು 1500ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ ಈಗ ಈ ಮಾರ್ಗದ ರೈಲ್ವೆ ಹಳಿ ದುರಸ್ಥಿ ಕಾರ್ಯ ಸಂಪೂರ್ಣವಾಗಿದ್ದು, ರೈಲು ಸಂಚಾರ ಎಂದಿನಂತಾಗಿದೆ. ಬಾಲಕನ ಸಮಯ ಪ್ರಜ್ಞೆಯಿಂದಾಗಿ ಒಂದಿಷ್ಟು ಜೀವವಂತು ಉಳಿದಿದೆ. ಅದೇ ರೀತಿ ರೈಲ್ವೆ ಸಿಬ್ಬಂದಿ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆಯೂ ಇದೆ



Click it and Unblock the Notifications