Latest Updates
-
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ದೃಷ್ಟಿ ಇಲ್ಲದಿದ್ದರೂ ಶೇ.96 ಅಂಕ ಪಡೆದ ವಿಶೇಷ ಚೇತನ ಹುಡುಗಿ..! ಇದಲ್ಲವೇ ಸಾಧನೆ..!
ಸಾಧಿಸುವ ಚಲವಿದ್ದರೆ ಎಂತಹ ಕಠಿಣ ಗುರಿಯನ್ನು ತಲುಪಬಹುದು ಎಂದು ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಹಾಗೆ ಓದಿ ಸಾಧನೆ ಮಾಡಲು ಸಹ ಚಲ ಗುರಿ ಇರಬೇಕು. ನಿರ್ದಿಷ್ಟ ಗುರಿ, ಚಲ ಇದ್ದು ಹೋಗುವ ದಾರಿ ಸರಿಯಾಗಿದ್ದರೆ ಎಂತಹ ಕಠಿಣ ಸವಾಲನ್ನೂ ಲೀಲಾಜಾಲವಾಗಿ ಮುಟ್ಟಬಹುದು.
ಇನ್ನು ಇತ್ತೀಚಿಗೆ ಸಿಬಿಎಸ್ಇ ಬೋರ್ಡ್ ಫಲಿತಾಂಶ ಹೊರಬಿದ್ದು ಹಲವರು ಪ್ರಥಮ ಸ್ಥಾನಗಳ ಪಡೆದ ಸಾಧನೆ ಮಾಡಿದ್ದಾರೆ. ಆದ್ರೆ ಕೆಲವರು ಈ ಪರೀಕ್ಷಯಲ್ಲಿ ತಮ್ಮ ವೈಕಲ್ಯದ ನಡುವೆಯೂ ಸಾಧನೆ ಮಾಡಿದ್ದಾರೆ. ಅದರಲ್ಲಿ ಈ ವಂಶಿಕಾ ಎಂಬ ಹುಡುಗಿಯ ಹೋರಾಟದ ಕಥೆ ಈಗ ಎಲ್ಲರಿಗೂ ಸ್ಫೂರ್ತಿಯಾಗಿದೆ.

ವಂಶಿಕಾ ಕಣ್ಣಿನ ದೃಷ್ಟಿ ಇಲ್ಲದಿದ್ದರೂ ಪರೀಕ್ಷೆಯಲ್ಲಿ ಶೇ.96 ರಷ್ಟು ಅಂಕ ಪಡೆದು ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾಳೆ. ಆಕೆಯ ಈ ಸಾಧನೆಗೆ ವೈಲಕ್ಯ ಅಡ್ಡಿಯಾಗದೆ ಆಕೆಯ ಗುರಿ ತಲುಪಿದ್ದಾಳೆ. 15 ವರ್ಷದ ವಂಶಿಕಾ ತನ್ನ ವೈಲಕ್ಯ ಮೆಟ್ಟಿನಿಂತು ಪರೀಕ್ಷೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾಳೆ.
ವಂಶಿಕಾ ಚಂಡೀಗಢದ ಸೆಕ್ಟರ್ 26 ನಲ್ಲಿರುವ ಇನ್ಸ್ಟಿಟ್ಯೂಟ್ ಫಾರ್ ದಿ ಬ್ಲೈಂಡ್ಗೆ ಹಾಜರಾಗಿದ್ದಾರೆ. ಆಕೆಯ ತಂದೆ ಸೋನು ಪಾಲ್ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ. ಆರ್ಥಿಕ ಸವಾಲುಗಳ ನಡುವೆಯೂ ಆಕೆ ಕಠಿಣ ಅಭ್ಯಾಸ ನಡೆಸಿ ಈ ಸಾಧನೆ ಮಾಡಿರುವುದು ಪೋಷಕರಲ್ಲಿ ಸಂತಸ ಮೂಡಿಸಿದೆ. ಜೊತೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಆಕೆ ಸ್ಪೂರ್ತಿಯ ಚಿಲುಮೆಯಾಗಿದ್ದಾಳೆ.
ಆಕೆ ಅಧ್ಯಯನ ಮಾಡುವಾಗ ಯಾರ ಸಹಾಯವನ್ನು ಪಡೆಯುತ್ತಿರಲಿಲ್ಲವಂತೆ. ಪ್ರತಿದಿನ ಸಂಜೆ 5 ರಿಂದ 8 ರವರೆಗೆ ಸ್ವಯಂ ಅಧ್ಯಯನಕ್ಕಾಗಿ ಮೂರು ಗಂಟೆಗಳ ಕಾಲ ಮೀಸಲಿಡುತ್ತಿದ್ದಳು. ಪರೀಕ್ಷೆಯ ಸಮಯದಲ್ಲಿ ಅವಳು ತನ್ನ ಅಧ್ಯಯನದ ಸಮಯವನ್ನು ರಾತ್ರಿ 11 ರವರೆಗೆ ವಿಸ್ತರಿಸಿದ್ದಳು. ಆಕೆಗೆ ಯುಪಿಎಸ್ಸಿ ಸಿವಿಲ್ ಸರ್ವೀಸ್ ಪರೀಕ್ಷೆ ಬರೆದು ಐಎಎಸ್ ಆಗಿ ದೇಶ ಸೇವೆಗೆ ಮುಂದಾಗಬೇಕು ಎಂಬ ಮಹದಾಸೆಯಿದೆ.
ಸೆಕ್ಟರ್ 26 ರಲ್ಲಿನ ಇನ್ಸ್ಟಿಟ್ಯೂಟ್ ಫಾರ್ ಬ್ಲೈಂಡ್ನಿಂದ, ಒಟ್ಟು ಒಂಬತ್ತು ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗೆ ಕುಳಿತಿದ್ದರು. ಜೊತೆಗೆ 10ನೇ ತರಗತಿ ಪರೀಕ್ಷೆಗೆ 16 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. 12 ನೇ ತರಗತಿ ವಿಭಾಗದಲ್ಲಿ, ರಾಜೀವ್ ಶೇ. 88.6 ನೊಂದಿಗೆ ಟಾಪರ್ ಆಗಿ ಹೊರಹೊಮ್ಮಿದರು, 10 ನೇ ತರಗತಿಯ ವಿದ್ಯಾರ್ಥಿಗಳಲ್ಲಿ, ವಂಶಿಕಾ ಶೇ. 96 ರಷ್ಟು ಅಂಕ ಪಡೆದು ಮೊದಲ ಸ್ಥಾನ ಪಡೆದರು.
ವಂಶಿಕಾಳ ಈ ಸಾಧನೆಗೆ ಶಾಲೆ ಹಾಗೂ ಪೋಷಕರ ಸಂತಸ ಇಮ್ಮಡಿಯಾಗಿದೆ. ಆಕೆಯ ಕಠಿಣ ಶ್ರಮದ ಫಲ ಈಗ ಎಲ್ಲರ ಸಂತಸಕ್ಕೆ ಕಾರಣವಾಗಿದೆ. ದೃಷ್ಟಿ ಇಲ್ಲದಿದ್ದರೂ ಶೈಕ್ಷಣಿಕವಾಗಿ ಆಕೆಯ ಸಾಧನೆ ಕಂಡು ಜನರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು 12ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಲಗೈ ಕಳೆದುಕೊಂಡಿದ್ದರೂ ಎಡಗೈನಲ್ಲಿ ಪರೀಕ್ಷೆ ಬರೆದು ಉತ್ತೀರ್ಣಳಾಗಿದ್ದಳು, ಮುಂಬೈನ ಗೋರೆಗಾಂವ್ ವೆಸ್ಟ್ನ ನಿವಾಸಿ ಅನಮ್ತಾ ಅಹ್ಮದ್ 9ನೇ ತರಗತಿಯಲ್ಲಿದ್ದಾಗ ನಡೆದಿದ್ದ ಒಂದು ದುರಂತ ಆಕೆ ಜೀವನ ಬದಲಾಯಿಸಿತ್ತು. ಈ ಅಪಘಾತದಲ್ಲಿ ಆಕೆಯ ಬಲಗೈ ಕಳೆದುಕೊಳ್ಳಬೇಕಾಯಿತು.
ಆದರೆ 10ನೇ ತರಗತಿಯ ಪರೀಕ್ಷೆಯನ್ನ ಆಕೆ ಎಡಗೈನಲ್ಲಿ ಬರೆದು ಇದರಲ್ಲಿ ಶೇ.92ರಷ್ಟು ಅಂಕಗಳಿಸಿ ಉತ್ತೀರ್ಣಳಾದಳು. ಹಿಂದಿಯಲ್ಲಿ ಶೇ.98 ರಷ್ಟು ಅಂಕಗಳಿಸಿ ಶಾಲೆಗೆ ಪ್ರಥಮ ಬಂದಳು. ಈ ಉದಾಹರಣೆಗಳು ಸಾವಿರಾರು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿವೆ. ಜೊತೆಗೆ ಎಲ್ಲಾ ಸೌಲಭ್ಯವಿದ್ದೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇವರು ಮಾರ್ಗದರ್ಶಿಗಳಾಗಿದ್ದಾರೆ.



Click it and Unblock the Notifications