Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಬಿಜೆಪಿ ಸೋತ ಹತಾಶೆಯಲ್ಲಿ ಟಿವಿ ಒಡೆದು ಬೆಂಕಿ ಹಚ್ಚಿದ ಅಭಿಮಾನಿ..!
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಬಹುತೇಕ ಎನ್ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದು ನಡೆದರೆ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದವರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಸಹ ಸೇರಿಕೊಳ್ಳಲಿದ್ದಾರೆ.
ಇನ್ನೊಂದೆಡೆ ಬಿಜೆಪಿ ಉತ್ತರ ಭಾಗದಲ್ಲಿ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಕಳೆದ ಬಾರಿಗೆ ಹೋಲಿಸಿದರೆ 50ಕ್ಕಿಂತ ಕಡಿಮೆ ಸ್ಥಾನಗಳ ಗೆದ್ದು ಸುಲಭ ಬಹುಮತ ಪಡೆದು ನಿಟ್ಟುಸಿರು ಬಿಟ್ಟಿದೆ. ಆದರೆ ಈ ಬಾರಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಬದಲಿಗೆ ಎನ್ಡಿಎ ಒಕ್ಕೂಟದ ಮೂಲಕ ಸರ್ಕಾರ ರಚಿಸಲಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಎಸ್ಪಿ ಹಾಗೂ ಕಾಂಗ್ರೆಸ್ ಕಮಾಲ್ ಮಾಡಿವೆ. ಬಿಜೆಪಿ ಅಲ್ಲಿ ಕಡಿಮೆ ಸ್ಥಾನ ಗೆಲ್ಲುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಈ ನಡುವೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿ ಸೋಲು ಅನುಭವಿಸಿದ ಕಾರಣ ಆಗ್ರಾದಲ್ಲಿರುವ ಬಿಜೆಪಿ ಅಭಿಮಾನಿಯೊಬ್ಬರು ಟಿವಿಯನ್ನೇ ಒಡೆದು ಪುಡಿ ಮಾಡಿದ್ದಾರೆ.
ತಮ್ಮ ನೆಚ್ಚಿನ ನಾಯಕನ ಸೋಲು ಸಹಿಸಲಾಗದೆ ಅವರು ಟಿವಿಯನ್ನೇ ಒಡೆದು ಹಾಕಿದರು. ರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಗೋವಿಂದ್ ಪರಾಶರ್ ತಮ್ಮ ಕಚೇರಿಯಲ್ಲಿದ್ದ ಟಿವಿಯನ್ನು ಒಡೆದು ಆಕ್ರೋಶ ಹೊರಹಾಕಿದರು. ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಗವಿಲ್ಲ ಎಂದು ತಿಳಿದ ಅವರು ಕಚೇರಿಯಲ್ಲಿದ್ದ ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ.
RHP ರಾಷ್ಟ್ರೀಯ ಅಧ್ಯಕ್ಷ ಮತ ಏಣಿಕೆ ಕಾರ್ಯ ನಡೆಯುತ್ತಿರುವುದನ್ನು ಟಿವಿಯಲ್ಲಿ ತೋರಿಸುತ್ತಿರುವುದನ್ನು ನೋಡುತ್ತಿದ್ದಾರೆ. ಈ ವೇಳೆ ಬಿಜೆಪಿ ಬಹುಮತ ಪಡೆಯುವಲ್ಲಿ ಹಿನ್ನಡೆ ಅನುಭವಿಸಿರುವುದನ್ನು ಟಿವಿಯಲ್ಲಿ ತೋರಿಸುತ್ತಿದ್ದಂತೆ ಆಕ್ರೋಶಗೊಂಡ ಅವರು ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅವರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಿಂಬದಿಯಲ್ಲಿರುವುದನ್ನು ಗಮನಿಸಬಹುದು. ಟಿವಿಯನ್ನು ಎರಡು ಮೂರು ಎತ್ತಿ ಎಸೆದ ಬಳಿಕ ಕಾಲಿನಿಂದ ತುಳಿಯುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಅಷ್ಟಕ್ಕೆ ಅವರ ಹತಾಶೆ ಕಡಿಮೆಯಾಗಲಿಲ್ಲ ಬಳಿಕೆ ಟಿವಿಗೆ ಬೆಂಕಿ ಹಚ್ಚಿ ಸುಡಲು ಮುಂದಾಗಿದ್ದಾರೆ. ಅವರು ಟಿವಿಯ ಮೇಲೆ ಯಾವುದೋ ದ್ರವವನ್ನು ಸುರಿಯುತ್ತಾರೆ. ಬಳಿಕ ಬೆಂಕಿ ಕಡ್ಡಿಯನ್ನು ಹಚ್ಚಲು ಮುಂದಾಗುತ್ತಾರೆ.
ಅವರ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ಅವರ ಹತಾಶೆಗೆ ಮತ್ತಷ್ಟು ಎಣ್ಣೆ ಸುರಿಯುವ ಯತ್ನ ಮಾಡಿದ್ದಾರೆ. ನಾವು ಈ ರೀತಿ ವರ್ತನೆ ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳಲ್ಲಿ ಮಾತ್ರ ನೋಡಿದ್ದೇವು. ಭಾರತದ ಮೇಲೆ ಸೋತಾಗಲೆಲ್ಲ ಅವರು ಮನೆಯಲ್ಲಿ ಟಿವಿಗಳು ಒಡೆಯುತ್ತಿದ್ದವು, ಇಲ್ಲಿಯೂ I.N.D.I.A ಗೆದ್ದಿದೆ ಹೀಗಾಗಿ ಟಿವಿಗಳನ್ನು ಒಡೆಯಲಾಗುತ್ತಿದೆ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಅಲ್ಲದೆ ಇವರು ಬಿಜೆಪಿ ಸೋತಿದ್ದಕ್ಕೆ ಟಿವಿ ಒಡೆಯುತ್ತಿದ್ದಾರೆ ಎಂದು ಕಾಣಿಸುತ್ತಿಲ್ಲ ಬದಲಿಗೆ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಿದೆ ಎಂಬ ಕೋಪದಲ್ಲಿ ಹೀಗೆ ಮಾಡಿದ್ದಾರೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಮತ್ತೆ ಕೆಲವರು ಟಿವಿ ಒಡೆದು ಅದಕ್ಕೆ ಬೆಂಕಿ ಹಚ್ಚುವ ಬದಲು ಇಡಿ ಕಚೇರಿಗೆ ಒಂದೇ ಬಾರಿಗೆ ಇಡಬಹುದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಸದ್ಯ ಚುನಾವಣೆ ಫಲಿತಾಂಶ ಹೊರಬಿದ್ದು, ಸರ್ಕಾರ ರಚನೆಯ ಕಾದಾಟ ಆರಂಭವಾಗಿದೆ. ದೆಹಲಿ ನಾಯಕರು ಈಗ ಸರ್ಕಾರ ರಚನೆ ಕಾರ್ಯದಲ್ಲಿ ತೊಡಗಿದ್ದು, ಇನ್ನೆರಡು ದಿನದಲ್ಲಿ ಪೂರ್ಣ ಚಿತ್ರಣ ಸಿಗಲಿದೆ.



Click it and Unblock the Notifications