Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಿಜೆಪಿ ಸೋತ ಹತಾಶೆಯಲ್ಲಿ ಟಿವಿ ಒಡೆದು ಬೆಂಕಿ ಹಚ್ಚಿದ ಅಭಿಮಾನಿ..!
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಬಹುತೇಕ ಎನ್ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದು ನಡೆದರೆ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದವರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಸಹ ಸೇರಿಕೊಳ್ಳಲಿದ್ದಾರೆ.
ಇನ್ನೊಂದೆಡೆ ಬಿಜೆಪಿ ಉತ್ತರ ಭಾಗದಲ್ಲಿ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಕಳೆದ ಬಾರಿಗೆ ಹೋಲಿಸಿದರೆ 50ಕ್ಕಿಂತ ಕಡಿಮೆ ಸ್ಥಾನಗಳ ಗೆದ್ದು ಸುಲಭ ಬಹುಮತ ಪಡೆದು ನಿಟ್ಟುಸಿರು ಬಿಟ್ಟಿದೆ. ಆದರೆ ಈ ಬಾರಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಬದಲಿಗೆ ಎನ್ಡಿಎ ಒಕ್ಕೂಟದ ಮೂಲಕ ಸರ್ಕಾರ ರಚಿಸಲಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಎಸ್ಪಿ ಹಾಗೂ ಕಾಂಗ್ರೆಸ್ ಕಮಾಲ್ ಮಾಡಿವೆ. ಬಿಜೆಪಿ ಅಲ್ಲಿ ಕಡಿಮೆ ಸ್ಥಾನ ಗೆಲ್ಲುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಈ ನಡುವೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿ ಸೋಲು ಅನುಭವಿಸಿದ ಕಾರಣ ಆಗ್ರಾದಲ್ಲಿರುವ ಬಿಜೆಪಿ ಅಭಿಮಾನಿಯೊಬ್ಬರು ಟಿವಿಯನ್ನೇ ಒಡೆದು ಪುಡಿ ಮಾಡಿದ್ದಾರೆ.
ತಮ್ಮ ನೆಚ್ಚಿನ ನಾಯಕನ ಸೋಲು ಸಹಿಸಲಾಗದೆ ಅವರು ಟಿವಿಯನ್ನೇ ಒಡೆದು ಹಾಕಿದರು. ರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಗೋವಿಂದ್ ಪರಾಶರ್ ತಮ್ಮ ಕಚೇರಿಯಲ್ಲಿದ್ದ ಟಿವಿಯನ್ನು ಒಡೆದು ಆಕ್ರೋಶ ಹೊರಹಾಕಿದರು. ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಗವಿಲ್ಲ ಎಂದು ತಿಳಿದ ಅವರು ಕಚೇರಿಯಲ್ಲಿದ್ದ ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ.
RHP ರಾಷ್ಟ್ರೀಯ ಅಧ್ಯಕ್ಷ ಮತ ಏಣಿಕೆ ಕಾರ್ಯ ನಡೆಯುತ್ತಿರುವುದನ್ನು ಟಿವಿಯಲ್ಲಿ ತೋರಿಸುತ್ತಿರುವುದನ್ನು ನೋಡುತ್ತಿದ್ದಾರೆ. ಈ ವೇಳೆ ಬಿಜೆಪಿ ಬಹುಮತ ಪಡೆಯುವಲ್ಲಿ ಹಿನ್ನಡೆ ಅನುಭವಿಸಿರುವುದನ್ನು ಟಿವಿಯಲ್ಲಿ ತೋರಿಸುತ್ತಿದ್ದಂತೆ ಆಕ್ರೋಶಗೊಂಡ ಅವರು ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅವರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಿಂಬದಿಯಲ್ಲಿರುವುದನ್ನು ಗಮನಿಸಬಹುದು. ಟಿವಿಯನ್ನು ಎರಡು ಮೂರು ಎತ್ತಿ ಎಸೆದ ಬಳಿಕ ಕಾಲಿನಿಂದ ತುಳಿಯುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಅಷ್ಟಕ್ಕೆ ಅವರ ಹತಾಶೆ ಕಡಿಮೆಯಾಗಲಿಲ್ಲ ಬಳಿಕೆ ಟಿವಿಗೆ ಬೆಂಕಿ ಹಚ್ಚಿ ಸುಡಲು ಮುಂದಾಗಿದ್ದಾರೆ. ಅವರು ಟಿವಿಯ ಮೇಲೆ ಯಾವುದೋ ದ್ರವವನ್ನು ಸುರಿಯುತ್ತಾರೆ. ಬಳಿಕ ಬೆಂಕಿ ಕಡ್ಡಿಯನ್ನು ಹಚ್ಚಲು ಮುಂದಾಗುತ್ತಾರೆ.
ಅವರ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ಅವರ ಹತಾಶೆಗೆ ಮತ್ತಷ್ಟು ಎಣ್ಣೆ ಸುರಿಯುವ ಯತ್ನ ಮಾಡಿದ್ದಾರೆ. ನಾವು ಈ ರೀತಿ ವರ್ತನೆ ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳಲ್ಲಿ ಮಾತ್ರ ನೋಡಿದ್ದೇವು. ಭಾರತದ ಮೇಲೆ ಸೋತಾಗಲೆಲ್ಲ ಅವರು ಮನೆಯಲ್ಲಿ ಟಿವಿಗಳು ಒಡೆಯುತ್ತಿದ್ದವು, ಇಲ್ಲಿಯೂ I.N.D.I.A ಗೆದ್ದಿದೆ ಹೀಗಾಗಿ ಟಿವಿಗಳನ್ನು ಒಡೆಯಲಾಗುತ್ತಿದೆ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಅಲ್ಲದೆ ಇವರು ಬಿಜೆಪಿ ಸೋತಿದ್ದಕ್ಕೆ ಟಿವಿ ಒಡೆಯುತ್ತಿದ್ದಾರೆ ಎಂದು ಕಾಣಿಸುತ್ತಿಲ್ಲ ಬದಲಿಗೆ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಿದೆ ಎಂಬ ಕೋಪದಲ್ಲಿ ಹೀಗೆ ಮಾಡಿದ್ದಾರೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಮತ್ತೆ ಕೆಲವರು ಟಿವಿ ಒಡೆದು ಅದಕ್ಕೆ ಬೆಂಕಿ ಹಚ್ಚುವ ಬದಲು ಇಡಿ ಕಚೇರಿಗೆ ಒಂದೇ ಬಾರಿಗೆ ಇಡಬಹುದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಸದ್ಯ ಚುನಾವಣೆ ಫಲಿತಾಂಶ ಹೊರಬಿದ್ದು, ಸರ್ಕಾರ ರಚನೆಯ ಕಾದಾಟ ಆರಂಭವಾಗಿದೆ. ದೆಹಲಿ ನಾಯಕರು ಈಗ ಸರ್ಕಾರ ರಚನೆ ಕಾರ್ಯದಲ್ಲಿ ತೊಡಗಿದ್ದು, ಇನ್ನೆರಡು ದಿನದಲ್ಲಿ ಪೂರ್ಣ ಚಿತ್ರಣ ಸಿಗಲಿದೆ.



Click it and Unblock the Notifications