Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಬಿಜೆಪಿ ಸೋತ ಹತಾಶೆಯಲ್ಲಿ ಟಿವಿ ಒಡೆದು ಬೆಂಕಿ ಹಚ್ಚಿದ ಅಭಿಮಾನಿ..!
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಬಹುತೇಕ ಎನ್ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವುದು ಖಚಿತವಾಗಿದೆ. ಇದು ನಡೆದರೆ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿ ಹುದ್ದೆ ಅಲಂಕರಿಸಿದವರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಸಹ ಸೇರಿಕೊಳ್ಳಲಿದ್ದಾರೆ.
ಇನ್ನೊಂದೆಡೆ ಬಿಜೆಪಿ ಉತ್ತರ ಭಾಗದಲ್ಲಿ ಹೇಳಿಕೊಳ್ಳುವಷ್ಟು ಸಾಧನೆ ಮಾಡಿಲ್ಲ. ಕಳೆದ ಬಾರಿಗೆ ಹೋಲಿಸಿದರೆ 50ಕ್ಕಿಂತ ಕಡಿಮೆ ಸ್ಥಾನಗಳ ಗೆದ್ದು ಸುಲಭ ಬಹುಮತ ಪಡೆದು ನಿಟ್ಟುಸಿರು ಬಿಟ್ಟಿದೆ. ಆದರೆ ಈ ಬಾರಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಬದಲಿಗೆ ಎನ್ಡಿಎ ಒಕ್ಕೂಟದ ಮೂಲಕ ಸರ್ಕಾರ ರಚಿಸಲಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಎಸ್ಪಿ ಹಾಗೂ ಕಾಂಗ್ರೆಸ್ ಕಮಾಲ್ ಮಾಡಿವೆ. ಬಿಜೆಪಿ ಅಲ್ಲಿ ಕಡಿಮೆ ಸ್ಥಾನ ಗೆಲ್ಲುವ ಮೂಲಕ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಈ ನಡುವೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿ ಸೋಲು ಅನುಭವಿಸಿದ ಕಾರಣ ಆಗ್ರಾದಲ್ಲಿರುವ ಬಿಜೆಪಿ ಅಭಿಮಾನಿಯೊಬ್ಬರು ಟಿವಿಯನ್ನೇ ಒಡೆದು ಪುಡಿ ಮಾಡಿದ್ದಾರೆ.
ತಮ್ಮ ನೆಚ್ಚಿನ ನಾಯಕನ ಸೋಲು ಸಹಿಸಲಾಗದೆ ಅವರು ಟಿವಿಯನ್ನೇ ಒಡೆದು ಹಾಕಿದರು. ರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಗೋವಿಂದ್ ಪರಾಶರ್ ತಮ್ಮ ಕಚೇರಿಯಲ್ಲಿದ್ದ ಟಿವಿಯನ್ನು ಒಡೆದು ಆಕ್ರೋಶ ಹೊರಹಾಕಿದರು. ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲು ಸಾಧ್ಗವಿಲ್ಲ ಎಂದು ತಿಳಿದ ಅವರು ಕಚೇರಿಯಲ್ಲಿದ್ದ ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ.
RHP ರಾಷ್ಟ್ರೀಯ ಅಧ್ಯಕ್ಷ ಮತ ಏಣಿಕೆ ಕಾರ್ಯ ನಡೆಯುತ್ತಿರುವುದನ್ನು ಟಿವಿಯಲ್ಲಿ ತೋರಿಸುತ್ತಿರುವುದನ್ನು ನೋಡುತ್ತಿದ್ದಾರೆ. ಈ ವೇಳೆ ಬಿಜೆಪಿ ಬಹುಮತ ಪಡೆಯುವಲ್ಲಿ ಹಿನ್ನಡೆ ಅನುಭವಿಸಿರುವುದನ್ನು ಟಿವಿಯಲ್ಲಿ ತೋರಿಸುತ್ತಿದ್ದಂತೆ ಆಕ್ರೋಶಗೊಂಡ ಅವರು ಟಿವಿಯನ್ನು ಕಿತ್ತು ನೆಲಕ್ಕೆ ಎಸೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅವರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಿಂಬದಿಯಲ್ಲಿರುವುದನ್ನು ಗಮನಿಸಬಹುದು. ಟಿವಿಯನ್ನು ಎರಡು ಮೂರು ಎತ್ತಿ ಎಸೆದ ಬಳಿಕ ಕಾಲಿನಿಂದ ತುಳಿಯುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಅಷ್ಟಕ್ಕೆ ಅವರ ಹತಾಶೆ ಕಡಿಮೆಯಾಗಲಿಲ್ಲ ಬಳಿಕೆ ಟಿವಿಗೆ ಬೆಂಕಿ ಹಚ್ಚಿ ಸುಡಲು ಮುಂದಾಗಿದ್ದಾರೆ. ಅವರು ಟಿವಿಯ ಮೇಲೆ ಯಾವುದೋ ದ್ರವವನ್ನು ಸುರಿಯುತ್ತಾರೆ. ಬಳಿಕ ಬೆಂಕಿ ಕಡ್ಡಿಯನ್ನು ಹಚ್ಚಲು ಮುಂದಾಗುತ್ತಾರೆ.
ಅವರ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ಅವರ ಹತಾಶೆಗೆ ಮತ್ತಷ್ಟು ಎಣ್ಣೆ ಸುರಿಯುವ ಯತ್ನ ಮಾಡಿದ್ದಾರೆ. ನಾವು ಈ ರೀತಿ ವರ್ತನೆ ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳಲ್ಲಿ ಮಾತ್ರ ನೋಡಿದ್ದೇವು. ಭಾರತದ ಮೇಲೆ ಸೋತಾಗಲೆಲ್ಲ ಅವರು ಮನೆಯಲ್ಲಿ ಟಿವಿಗಳು ಒಡೆಯುತ್ತಿದ್ದವು, ಇಲ್ಲಿಯೂ I.N.D.I.A ಗೆದ್ದಿದೆ ಹೀಗಾಗಿ ಟಿವಿಗಳನ್ನು ಒಡೆಯಲಾಗುತ್ತಿದೆ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಅಲ್ಲದೆ ಇವರು ಬಿಜೆಪಿ ಸೋತಿದ್ದಕ್ಕೆ ಟಿವಿ ಒಡೆಯುತ್ತಿದ್ದಾರೆ ಎಂದು ಕಾಣಿಸುತ್ತಿಲ್ಲ ಬದಲಿಗೆ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಿದೆ ಎಂಬ ಕೋಪದಲ್ಲಿ ಹೀಗೆ ಮಾಡಿದ್ದಾರೆ ಎಂದು ಮತ್ತೊಬ್ಬರು ಬರೆದಿದ್ದಾರೆ. ಮತ್ತೆ ಕೆಲವರು ಟಿವಿ ಒಡೆದು ಅದಕ್ಕೆ ಬೆಂಕಿ ಹಚ್ಚುವ ಬದಲು ಇಡಿ ಕಚೇರಿಗೆ ಒಂದೇ ಬಾರಿಗೆ ಇಡಬಹುದಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಸದ್ಯ ಚುನಾವಣೆ ಫಲಿತಾಂಶ ಹೊರಬಿದ್ದು, ಸರ್ಕಾರ ರಚನೆಯ ಕಾದಾಟ ಆರಂಭವಾಗಿದೆ. ದೆಹಲಿ ನಾಯಕರು ಈಗ ಸರ್ಕಾರ ರಚನೆ ಕಾರ್ಯದಲ್ಲಿ ತೊಡಗಿದ್ದು, ಇನ್ನೆರಡು ದಿನದಲ್ಲಿ ಪೂರ್ಣ ಚಿತ್ರಣ ಸಿಗಲಿದೆ.



Click it and Unblock the Notifications