Latest Updates
-
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ
ಒಂದು ಪಾನಿಪುರಿಗಾಗಿ ಕಿರಿಕ್! ಒಂಭತ್ತು ಜನ ಅರೆಸ್ಟ್.. ಎಲ್ಲಿ, ಏನಿದು ಘಟನೆ?
'ಪಾನಿಪುರಿ' ಹೆಸರೇ ಬಾಯಲ್ಲಿ ನೀರೂರಿಸುತ್ತದೆ! ಪಾನಿಪುರಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಪಾನಿಪುರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೆಟ್ ಆಗಿದೆ. ಇದೇ ಪಾನಿಪುರಿ (Pani Puri) ಇದೀಗ ಕಿರಿಕ್ ತಂದಿಟ್ಟಿದೆ. ಒಂದು ಪಾನಿಪುರಿಗಾಗಿ ನಡೆದ ಜಗಳದಿಂದ ಒಂಭತ್ತು ಮಂದಿ ಅರೆಸ್ಟ್ ಆಗಿದ್ದಾರೆ. ಹೌದು, ಚಿಕ್ಕ ಮಕ್ಕಳಿಂದಿಡಿದು ದೊಡ್ಡವರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುವುದು ಪಾನಿಪುರಿ. ಕಡಿಮೆ ದುಡ್ಡಲ್ಲಿ ಸಿಗುವ ಮತ್ತು ನಾಲಿಗೆ ರುಚಿ ತಣಿಸುವ ಪಾನಿಪುರಿ ಬಹುತೇಕರ ಫೇವರಿಟ್. ಅದರಂತೆ, ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರು ಮತ್ತು ಅಂಗಡಿಯವರಿಗೂ ಒಂದು ಪಾನಿಪುರಿಗಾಗಿ ಕಿರಿಕ್ ಆಗಿದೆ. ಈ ವಿಚಿತ್ರ ಘಟನೆ ಉಡುಪಿಯ (udupi) ಮಲ್ಪೆ ಬೀಚ್ ಬಳಿ ನಡೆದಿದೆ.
ಹೌದು, ಅವರೆಲ್ಲರೂ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಿಂದ ಪ್ರವಾಸಿಗರು. ಮಂಗಳವಾರ (ಜೂನ್ 10) ರಾತ್ರಿ 8.30ರ ಸುಮಾರಿಗೆ ಉಡುಪಿಯ ಮಲ್ಪೆ ಬೀಚ್ (malpe beach) ಬಳಿ ಬಂದಿದ್ದರು. ಈ ವೇಳೆ ಪಾನಿಪುರಿ ತಿನ್ನವಬಯಕೆಯಾಗಿದೆ. ಹೀಗಾಗಿ, ಅಲ್ಲಿದ್ದ ಉತ್ತರ ಪ್ರದೇಶ ಮೂಲದವರ ಅಂಗಡಿಗೆ ತೆರಳಿದ್ದರು. ಈ ವೇಳೆ ಹೆಚ್ಚುವರಿಯಾಗಿ ಪಾನಿಪುರಿ ನೀಡುವ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ. ಬಳಿಕ ಇದು ತಾರಕಕ್ಕೇರಿದೆ. ಮಂಡ್ಯ ಜಿಲ್ಲೆಯ ಪ್ರವಾಸಿಗರು ಮತ್ತು ಪಾನಿಪುರಿ ಅಂಗಡಿಯವರ ಮಧ್ಯೆ ಶುರುವಾದ ಗಲಾಟೆ, ಎರಡೂ ಕಡೆಯಿಂದ ಹಲ್ಲೆಯ ಹಂತಕ್ಕೆ ತಲುಪಿದೆ. ಇದೀಗ, ಒಂಭತ್ತು ಜನ ಅರೆಸ್ಟ್ ಆಗಿದ್ದಾರೆ.

ಕೇಸ್ ಮತ್ತು ಕೌಂಟರ್ ಕೇಸ್
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡು ಪ್ರಕರಣಗಳು ಕೇಸ್ ಮತ್ತು ಕೌಂಟರ್ ಕೇಸ್ ಆಗಿವೆ. ಸುದೀಪ, ಸಂಪತ್, ಪುನೀತ, ಮಹೇಶ, ಕನ್ನ ವೈ.ಜಿ. ಮತ್ತು ಅರವಿಂದ ಎಂಬುವವರು ಮೊದಲ ಪ್ರಕರಣದ ಆರೋಪಿಗಳಾಗಿದ್ದಾರೆ. ರಮೇಶ, ಮೋನು, ವಿನೋದ್ ಎಂಬಾರು ಎರಡನೇ ಪ್ರಕರಣದ ಆರೋಪಿಗಳಾಗಿದ್ದಾರೆ. ಇದೀಗ ಇವರನ್ನು ಪೊಲೀಸರು ಅರೆಸ್ಟ್ (ದಸ್ತಗಿರಿ) ಮಾಡಿದ್ದಾರೆ.
ಯಾವ ಪ್ರಕರಣಗಳು ದಾಖಲು?
ಈ ಗಲಾಟೆ ಸಂಬಂಧ ದೂರು ಮತ್ತು ಪ್ರತಿದೂರು ದಾಖಲಾಗಿದೆ. ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 71/2025 ಕಲಂ: 189(2), 191(2), 191(3), 115(2), 118(1), 352, 351 (2) 3 190 BNS 2 72/2025, ಕಲಂ: 189(2),191(2), 191(3), 115(2), 118(1), 352, 351 (2) ಜೊತೆಗೆ 190 BNS ರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ಒಂದು ಪಾನಿಪುರಿಗಾಗಿ ನಡೆದ ಕಿರಿಕ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಘಟನೆ ನಡೆದಿದ್ದು ಹೇಗೆ?
ಮಲ್ಪೆ ಬೀಚ್ಗೆ ಬಂದಿದ್ದ ಪ್ರವಾಸಿಗರು, ರಾತ್ರಿ 8.30ರ ಸುಮಾರಿಗೆ ಸ್ಥಳೀಯ ಪಾನಿಪುರಿ ಅಂಗಡಿಗೆ ತೆರಳಿದ್ದರು. ಸುದೀಪ, ಸಂಪತ್, ಪುನೀತ್, ಮಹೇಶ, ಕನ್ನ ವೈ.ಜಿ. ಮತ್ತು ಅರವಿಂದ ಎಂಬಾತರು 6 ಪಾನಿಪೂರಿ ತಿಂದರು. ಅದರ ದುಡ್ಡು ಕೊಡದೆ ಹೆಚ್ಚುವರಿ ಪಾನಿಪುರಿ ನೀಡುವಂತೆ ಕೇಳಿದರು. ಇದಕ್ಕೆ ಅಂಗಡಿಯವರು ಒಪ್ಪದಿದ್ದಾಗ, ಪ್ರವಾಸಿಗರು ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿದ್ದರು. 10 ನಿಮಿಷಗಳ ಬಳಿಕ ಪುನಃ ಬಂದ ಅವರಲ್ಲಿ ಬಳಿ ಅಂಗಡಿಯವರು ಹಣ ಕೊಡವಂತೆ ಕೇಳಿದ್ದರು. ಇದೇ ವೇಳೆ ಪಕ್ಕದಲ್ಲೇ ಅಂಗಡಿ ಇಟ್ಟುಕೊಂಡಿರುವ ರಮೇಶ್ ಮತ್ತು ವಿನೋದ್ ಎಂಬುವವರ ಮೇಲೆಯೂ ಈ ಪ್ರವಾಸಿಗರು ಹಲ್ಲೆ ಮಾಡಿದ್ದಾರೆ. ಈ ವೇಳೆ ಜನ ಸೇರುತ್ತಿರುವುದನ್ನು ಕಂಡು ವಾಪಸ್ ತೆರಳಿದ್ದಾರೆ ಎಂದು ಅಂಗಡಿ ಮಾಲೀಕ ಮೋನು ಸಾಹು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರವಾಸಿಗರ ಪ್ರತಿದೂರಿನಲ್ಲಿ ಏನಿದೆ?
ಪ್ರವಾಸಿಗರಾದ ಮಂಡ್ಯದ ಸುದೀಪ್ ಅವರು ಅಂಗಡಿ ಮಾಲೀಕರ ಮೇಲೆ ಪ್ರತಿದೂರು ನೀಡಿದ್ದಾರೆ. ನಾವು ಪಾನಿಪುರಿ (panipuri) ತಿಂದೆವು. ನಮ್ಮ ಜೊತೆ ಇದ್ದ ಸಂಪತ್, ಹೆಚ್ಚುವರಿಯಾಗಿ ಒಂದು ಪಾನಿಪುರಿಯನ್ನು ಕೇಳಿದಾಗ ಅಂಗಡಿಯಲ್ಲಿದ್ದ ವ್ಯಕ್ತಿ ಕೊಡಲು ಬರುವುದಿಲ್ಲ ಎಂದು ಹೇಳಿದರು. ಆಗ ಸಂಪತ್ ಮತ್ತು ಅಂಗಡಿಯವನಿಗೂ ಜಗಳವಾಗಯಿತು. ಅಲ್ಲಿಗೆ ಬಂದ ರಮೇಶ್ ಎಂಬ ವ್ಯಕ್ತಿ ಬ್ಯಾಟಿನಿಂದ ನಮ್ಮ ಜೊತೆಗಿದ್ದ ಅರವಿಂದನ ಎದೆ ಮತ್ತು ಬೆನ್ನಿಗೆ ಹೊಡೆದನು. ಬಿಡಿಸಲು ಹೋದ ನನ್ನ ಮೇಲೆಯೂ ಹಲ್ಲೆ ಮಾಡಿದ್ದಾನೆ. ನನ್ನ ತಲೆಗೆ ತೀವ್ರ ಗಾಯವಾದ ಕಾರಣ ಕೂಡಲೇ ಚಿಕಿತ್ಸೆ ಪಡೆಯಲಾಗಿತ್ತು. ಜಗಳದ ಸಮಯದಲ್ಲಿ ಹೊಡೆದವರು ಮತ್ತು ಬೈದವರು ಮೋನು, ರಮೇಶ ಮತ್ತು ವಿನೋದ ಎಂದು ಸುದೀಪ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಠಾಣೆಯಲ್ಲಿ ಈ ಎರಡು ಪ್ರಕರಣ ದಾಖಲಾಗಿದೆ.



Click it and Unblock the Notifications