Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮಳೆ ಸುರಿಸುವಂತೆ ಕೋರಿ ಇಂದ್ರ ದೇವನಿಗೆ ಪತ್ರ ಬರೆದ ವಕೀಲ..!
ದೇಶದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ಆರಂಭಗೊಂಡಿದೆ. ಆದರೆ ಉತ್ತರ ಭಾರತದಲ್ಲಿ ಮಾತ್ರ ತಾಪಮಾನ ಏರಿಕೆಯಾಗಿದ್ದು, ಅಲ್ಲಿನ ಜನರು ಬಿಸಿಲಿನ ಝಳಕ್ಕೆ ತತ್ತರಿಸಿ ಹೋಗಿದ್ದಾರೆ. ವಿಪರೀತ ತಾಪಮಾನ ಏರಿಕೆ ಅಲ್ಲಿನ ಜನರ ಜೀವ ಹಿಂಡುತ್ತಿದೆ. ಅಲ್ಲದೆ ಮನೆಯಿಂದ ಅವರು ಹೊರ ಬರಲು ಆಗದ ಸ್ಥಿತಿಗೆ ತಲುಪಿದ್ದಾರೆ.
ದೆಹಲಿ, ಉತ್ತರ ಪ್ರದೇಶದಲ್ಲಿ ಮಳೆ ಬಂದರೆ ಸಾಕಪ್ಪ ಎಂದು ಜನರು ದೇವರ ಪ್ರಾರ್ಥಿಸುತ್ತಿದ್ದಾರೆ. ಏಕೆಂದರೆ ಬಿಸಿಲಿನಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅಲ್ಲದೆ ಬಿಸಿಲಿನಿಂದ ಜನರು ಕುಸಿದು ಬೀಳುತ್ತಿರುವ ಪ್ರಕರಣಗಳು ಸಹ ವರದಿಯಾಗುತ್ತಿವೆ.

ಇತ್ತ ಸಕಾಲಕ್ಕೆ ಮಳೆ ಬಾರದೆ ಇದ್ದರೆ ಜನರು ಮಳೆಗಾಗಿ ಕಪ್ಪೆಗಳ ಮದುವೆ ಮಾಡುವುದು ಇಲ್ಲದೆ ಕತ್ತೆಗಳ ಮದುವೆ ಹೀಗೆ ನೂರಾರು ಸಂಪ್ರದಾಯ ಆಚರಿಸಿಕೊಂಡು ಬಂದಿದ್ದಾರೆ. ಅದರಲ್ಲೂ ಹಳ್ಳಿಗಳಲ್ಲಿ ಇಂತವ ವಾಡಿಕೆ ಇದೆ. ಈ ರೀತಿ ಮಾಡುವುದರಿಂದ ಮಳೆಯಾಗಲಿದೆ ಎಂಬುದು ಅವರ ನಂಬಿಕೆಯಾಗಿದೆ.
ಆದರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಮಳೆಯಾಗಲಿ ಎಂದು ಮಾಡಿದ ಕಾರ್ಯ ಈಗ ಸಿಕ್ಕಾಪಟ್ಟೆ ಸುದ್ದಿಯಾಗುವ ಜೊತೆಗೆ ಅಚ್ಚರಿಗೂ ಕಾರಣವಾಗಿದೆ. ಆತ ಬಿಸಿಲಿನ ಝಲ ತಾಳಲಾಗದೆ ಮಳೆಯಾಗಲಿ ಎಂದು ದೇವರನ್ನು ಪಾರ್ಥಿಸಿ ಇಂದ್ರ ದೇವನಿಗೆ ಪತ್ರ ಬರೆದಿದ್ದಾನೆ.
ಉತ್ತರ ಪ್ರದೇಶ ಕಾನ್ಪುರದ ಬಿಲ್ಹೌರ್ನ ವಕೀಲ ಅತುಲ್ ಸನ್ವಾರೆ ಎಂಬುವವರು ಭಗವಾನ್ ಇಂದ್ರನಿಗೆ ಪತ್ರ ಬರೆದಿದ್ದಾರೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಭಗವಾನ್ ಇಂದ್ರ ಹಿಂದೂ ಧರ್ಮದಲ್ಲಿ ಮಳೆ ಮತ್ತು ಗಾಳಿಯ ತರುವಂತಹ ದೇವರಂತೆ.
ಕಾನ್ಪುರಕ್ಕೆ ಶಾಖದಿಂದ ಬಿಡುವು ನೀಡುವಂತೆ ವಕೀಲರು ಪತ್ರದಲ್ಲಿ ದೇವರನ್ನು ಕೋರಿದ್ದಾರೆ. ಕಳೆದ ಹಲವು ದಿನಗಳಿಂದ ಕಾನ್ಪುರ ಬಿಸಿಲಿನ ತಾಪವನ್ನು ಅನುಭವಿಸುತ್ತಿದೆ, ಇದರಿಂದಾಗಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅತುಲ್ ಬರೆದಿದ್ದಾರೆ.
ಕಾನ್ಪುರದಲ್ಲಿ ಬರೋಬ್ಬರಿ 45 ಡಿಗ್ರಿ ಸೆಲ್ಸಿಯಸ್ಗಿಂತಲೂ ಅಧಿಕ ತಾಮಪಾನ ದಾಖಲಾಗುತ್ತದೆ. ಹೀಗಾಗಿ ತಾಪಮಾನದಿಂದ ಮನುಷ್ಯರನ್ನು ರಕ್ಷಿಸು ಎಂದು ಇಂದ್ರನಿಗೆ ಪತ್ರ ಬರೆಯಲಾಗಿದೆ.
ಸ್ವರ್ಗದ ಅಧಿಪತಿ ಎಂದು ಪರಿಗಣಿಸಲ್ಪಟ್ಟಿರುವ ಇಂದ್ರದೇವ ಮಹಾರಾಜ್ ಅವರ ಹೆಸರಿನಲ್ಲಿ ವಂದನೆಯೊಂದಿಗೆ ಪತ್ರವು ಪ್ರಾರಂಭವಾಗುತ್ತವೆ. ಜೂನ್ನ ಉರಿಯುತ್ತಿರುವ ಶಾಖವು ಜೀವಿಗಳಿಗೆ ಆಘಾತವನ್ನುಂಟು ಮಾಡಿದೆ ಮತ್ತು ಅವುಗಳು ತಮ್ಮ ಪ್ರಾಣವನ್ನೂ ಕಳೆದುಕೊಳ್ಳುತ್ತಿವೆ, ಹೀಗಾಗಿ ಬೇಗನೆ ಮಳೆ ಸುರಿಸು.
ಪ್ರಾಣಿಗಳು ಮತ್ತು ಮನುಷ್ಯರನ್ನು ರಕ್ಷಿಸಲು ಭಾರೀ ಮಳೆಯು ಬಹಳ ಮುಖ್ಯ ಎಂದು ನಿಮಗೆ ವಿನಮ್ರ ವಿನಂತಿ ಎಂದು ಅತುಲ್ ಪತ್ರದಲ್ಲಿ ಬರೆದಿದ್ದಾರೆ. ಜೊತೆಗೆ ಬಾರೀ ಮಳೆಯಾಗುವಾಗ ಆಲಿಕಲ್ಲು ಬೀಳಬಾರದು ಎಂದು ಮನವಿ ಮಾಡಿದ್ದಾರೆ.
ಸದ್ಯ ಅವರು ಬರೆದಿರುವ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜೊತೆಗೆ ಹಲವರು ಹಲವು ರೀತಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಪತ್ರ ಬರೆದಿರುವ ವಕೀಲರ ಕುರಿತು ಹಲವು ರೀತಿ ಕಾಮೆಂಟ್ ಹರಿದುಬಂದಿದೆ.
ನೀವು ಪತ್ರ ಬರೆಯುವಾಗ ಯಾವ ಅಡ್ರೆಸ್ ಬರೆದಿದ್ದೀರಿ ತೋರಿಸಿ, ಸರಿ ಅಡ್ರೆಸ್ ಬರೆದರೆ ಖಂಡಿತ ಮಳೆ ಬರುತ್ತದೆ ಎಂದು ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ. ಈ ರೀತಿ ಪತ್ರ ಬರೆಯುವ ಬದಲು ಮರ ನೆಡುವ ಆಲೋಚನೆ ಮಾಡಿದ್ದರೆ ತಾನಾಗಿಯೇ ಮಳೆ ಬರುತ್ತಿತ್ತು ಎಂದಿದ್ದಾರೆ.
ಅಲ್ಲದೆ ಈ ಪತ್ರ ಇಂದ್ರನಿಗೆ ತಲುಪಿಲಿದೆ ಎಂದು ನಂಬುವುದು ಹೇಗೆ? ಮಳೆ ಬಂದರೆ ಇಂದ್ರನಿಂದ ಬಂದಿದೆ ಎಂದು ನಾವು ತಿಳಿಯಬೇಕು ಬಾರದೆ ಇದ್ದರೆ ಈ ಪತ್ರ ದೇವಲೋಕ ತಲುಪಿಲ್ಲ ಎಂದರ್ಥ ಎಂದು ಮತ್ತೊಬ್ಬ ಬಳಕೆದಾರರು ಬರೆದುಕೊಂಡಿದ್ದಾರೆ.



Click it and Unblock the Notifications
