Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಪ್ರಮಾಣ ವಚನ ಸ್ವೀಕಾರದ ನಡುವೆ ವಿಚಿತ್ರ ಪ್ರಾಣಿ ಪತ್ತೆ..! ವಿಡಿಯೋ ವೈರಲ್
ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದಲ್ಲದೆ ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೋದಿ ಕ್ಯಾಬಿನೆಟ್ ಸೇರುವ ಮಂತ್ರಿಗಳು ಪ್ರಮಾಣ ವಚನ ಸಹ ಸ್ವೀಕರಿಸಿದ್ದಾರೆ. ಈಗಾಗಲೇ ಎನ್ಡಿಎ ಮೈತ್ರಿಕೂಟದ ಜೊತೆ ಸೇರಿ ಸರ್ಕಾರ ರಚಿಸಿರುವ ಬಿಜೆಪಿ ಸತತ 3ನೇ ಬಾರಿ ಪ್ರಧಾನಿ ಪಟ್ಟ ಅಲಂಕರಿಸಿದೆ.
ಆದರೆ ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಈ ಪ್ರಮಾಣ ವಚನ ಕಾರ್ಯಕ್ರಮ ಅಚ್ಚರಿಗೆ ಕಾರಣವಾಗಿದೆ. ಈ ಕಾರ್ಯಕ್ರಮದ ನಡುವೆ ವಿಚಿತ್ರ ಪ್ರಾಣಿಯೊಂದು ಪತ್ತೆಯಾಗಿದ್ದು, ನೋಡುಗರು ಅಚ್ಚರಿಗೆ ಒಳಗಾಗಿದ್ದಾರೆ. ವಿದೇಶಿ ಮುಖ್ಯಸ್ಥರು ಮತ್ತು ಇತರ ಗಣ್ಯರು, ಕೈಗಾರಿಕೋದ್ಯಮಿಗಳು ಮತ್ತು ಚಲನಚಿತ್ರ ತಾರೆಯರು ಸೇರಿದಂತೆ 8,000 ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಆದರೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದರಲ್ಲು ವಿಚಿತ್ರ ರೀತಿಯ ಪ್ರಾಣಿಯೊಂದು ಪತ್ತೆಯಾಗಿದ್ದು, ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಬಿಜೆಪಿ ಸಂಸದ ದುರ್ಗಾ ದಾಸ್ ಪ್ರಮಾಣ ವಚನೆ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿಕ ಎದ್ದು ಬಂದಾಗ ಅವರ ಹಿಂದೆ ವಿಚಿತ್ರ ಪ್ರಾಣಿಯೊಂದು ತೆರಳುತ್ತಿರುವುದು ನೋಡಬಹುದು.
ಆದರೆ ಅಲ್ಲಿದ್ದವರಿಗೆ ಇದರ ಮೇಲೆ ಅಷ್ಟೊಂದು ಗಮನ ಹರಿದಿಲ್ಲ. ಆದರೆ ವಿಡಿಯೋ ನೀಡಿದ ವೀಕ್ಷಕರ ನಿಖರವಾಗಿ ಅದನ್ನು ಗುರುತಿಸುವಂತಿದೆ. ಒಂದು ಕಬ್ಬದ ಅಡ್ಡಲಾಗಿ ಆ ವಿಚಿತ್ರ ಪ್ರಾಣಿ ಸಾಗಿದ್ದು, ಯಾವ ಪ್ರಾಣಿ ಎಂಬುದು ಅಸ್ಪಷ್ಟವಾಗಿದೆ. ಆದ್ರೆ ಕೆಲವರು ಇದನ್ನು ಬೆಕ್ಕು ಎಂದು ಪತ್ತೆ ಕೆಲವರು ಚಿರತೆ ಆಗಿರಬಹುದು ಎಂದು ಶಂಕಿಸಿದ್ದಾರೆ.
ಅದು ಚಿರತೆಯೇ? ಸಾಮಾನ್ಯ ಬೆಕ್ಕು? ಅಥವಾ ನಾಯಿ? ರಾಷ್ಟ್ರಪತಿ ಭವನದಲ್ಲಿ ಯಾವ ಪ್ರಾಣಿಯು ಸಾಂದರ್ಭಿಕವಾಗಿ ಅಡ್ಡಾಡುತ್ತಿರುವುದನ್ನು ಕಂಡು ಜನರು ಒಂದೊಂದು ರೀತಿ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಪ್ರಾಣಿ ಸಂಚರಿಸಲು ಸಾಧ್ಯವೇ ಇಲ್ಲ ಎನ್ನುವುದು ಹಲವರ ವಾದವಾಗಿದೆ. ಅದು ಸತ್ಯವೂ ಹೌದು. ಏಕೆಂದರೆ ಹೊರಗಿನಿಂದ ಯಾರಾದರು ಒಳ ಬರಬೇಕು ಎಂದರೆ ಮುಖ್ಯ ದ್ವಾರ ದಾಡಿಕೊಂಡೇ ಬರಬೇಕು. ಆದರೆ ಮುಖ್ಯ ದ್ವಾರದಲ್ಲಿ ಸೆಕ್ಯೂರಿಟಿ ತುಂಬಾನಿ ಸ್ಟ್ರಾಂಗ್ ಆಗಿರಲಿದೆ. ಹೀಗಾಗಿ ಅಲ್ಲಿಂದ ಬರಲು ಸಾಧ್ಯವೇ ಇಲ್ಲ ಎನ್ನುತ್ತಿದ್ದಾರೆ.
ಮತ್ತೆ ಕೆಲವರು ಇದೊಂದು ಎಡಿಟ್ ಮಾಡಲಾದ ವಿಡಿಯೋ ಎನ್ನುತ್ತಿದ್ದಾರೆ. ಆ ಪ್ರಾಣಿ ಓಡಾಡುವುದು ಕ್ಯಮರಾ ಕಣ್ಣಿಗೆ ಮಾತ್ರ ಬೀಳಲು ಸಾಧ್ಯವಿಲ್ಲ. ಏಕೆಂದರೆ ಅಲ್ಲಿ ಸಾವಿರಾರು ಮಂದಿ ಸೇರಿದ್ದರು ಒಬ್ಬರಲ್ಲ ಒಬ್ಬರಿಗೆ ಅದು ಯಾವ ಪ್ರಾಣಿ ಎಂಬುದು ತಿಳಿಯಲೇಬೇಕಿತ್ತು ಎಂದಿದ್ದಾರೆ. ಮತ್ತೆ ಕೆಲವರು ಇದು ದೊಡ್ಡ ಗಾತ್ರದ ಬೆಕ್ಕು ರಾಜಭವನದ ಪ್ರಾಣಿ ಆಗಿರಬಹುದು ಎಂದು ಶಂಕಿಸಿದ್ದಾರೆ. ಅಲ್ಲದೆ ಪ್ರಮಾಣ ವಚನದಲ್ಲಿ ಭಾಗಿಯಾದರೆ ಒಂದು ಖಾತೆ ಸಿಗಬಹುದು ಎಂಬ ಆಲೋಚನೆಯಲ್ಲಿ ಬಂದಿರಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಆದರೆ ಈ ವಿಡಿಯೋ ಕುರಿತಂತೆ ರಾಜ ಭವನ ಸಿಬ್ಬಂದಿ ಯಾವ ಸ್ಪಷ್ಟನೆಯನ್ನೂ ಈವರೆಗೆ ನೀಡಿಲ್ಲ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, 30 ಕ್ಯಾಬಿನೆಟ್ ಮಂತ್ರಿಗಳು, 36 ರಾಜ್ಯ ಸಚಿವರು (MoS) ಮತ್ತು ಸ್ವತಂತ್ರ ಉಸ್ತುವಾರಿ ಹೊಂದಿರುವ ಐದು MoS ಸೇರಿದಂತೆ 72-ಸದಸ್ಯರ ಮಂತ್ರಿ ಮಂಡಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್, ಹೆಚ್.ಡಿ ಕುಮಾರಸ್ವಾಮಿ ಅವರಂತಹ ಪ್ರಮುಖರು ಸಂಪುಟ ಸಚಿವರಾಗಿ ಮುಂದುವರಿದಿದ್ದಾರೆ. ಆದರೆ ಅವರಿಗೆ ಖಾತೆ ಹಂಚಿಕೆ ಇನ್ನೂ ನಡೆಯಬೇಕಿದೆ.



Click it and Unblock the Notifications











