Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
6 ಬಾರಿ ಹಾವು ಕಚ್ಚಿದರೂ ಬದುಕುಳಿದ ಮಹಿಳೆ..! ಹಾವು ಕಚ್ಚಿದಾಗ ಆಕೆ ಮಾಡಿದ್ದೇನು?
ಭೂಮಿ ಮೇಲೆ ಅತ್ಯಂತ ವಿಷಕಾರಿ ಪ್ರಾಣಿ ಯಾವುದು ಅಂದ್ರೆ ಥಟ್ ಅಂತ ನೆನಪಿಗೆ ಬರೋದು ಹಾವುಗಳು. ಹೀಗಾಗಿಯೇ ಹಾವುಗಳಂದ್ರೆ ಎಂತವರ ಎದೆಯಲ್ಲೂ ನಡುಕ ಹುಟ್ಟಿಸುತ್ತೆ. ಕೆಲವರಂತು ಹಾವುಗಳ ನೋಡಿದ ತಕ್ಷಣ ಅಲ್ಲಿಂದ ಜಾಗ ಖಾಲಿ ಮಾಡುತ್ತಾರೆ. ಆದರೆ ಹಾವಿನ ಸಂಗದಲ್ಲೇ ಬದುಕುವವರೂ ಇದ್ದಾರೆ.
ಹಾವುಗಳನ್ನು ಹಿಡಿಯುವುದು ರಕ್ಷಿಸುವುದು ಅವರ ಕಾರ್ಯವಾಗಿರುತ್ತೆ. ಇನ್ನು ಹಾವುಗಳಲ್ಲಿ ಕೆಲವು ಜಾತಿ ಹಾವುಗಳು ವಿಷಕಾರಿ ಅಲ್ಲ. ಆದ್ರೆ ಕೆಲವು ವಿಷಕಾರಿ ಹಾವುಗಳು ಕಚ್ಚಿದ ಕ್ಷಣದಲ್ಲೇ ನಮಗೆ ಸಾವು ಸಂಭವಿಸಬಹುದು. ಇನ್ನು ಹಾವು ಕಡಿತಕ್ಕೆ ಸೂಕ್ತ ಚಿಕಿತ್ಸೆ ಇಲ್ಲದೆಯೇ ಸಾವಿಗೀಡಾಗುವವರ ಸಂಖ್ಯೆ ಕಡಿಮೆ ಏನಿಲ್ಲ.

ದೇಶದಲ್ಲಿ ಹಾವಿ ಕಡಿತದಿಂದ ಸಾವಿಗೀಡಾಗುವವರ ಸಂಖ್ಯೆ ಲಕ್ಷಕ್ಕೂ ಅಧಿಕ ಅಂದರೆ ಹಾವಿನ ಕುರಿತ ಭಯ ಮತ್ತಷ್ಟು ಹೆಚ್ಚಾಗುತ್ತದೆ. ಆದ್ರೆ ಇಲ್ಲೊಂದು ಘಟನೆಯಲ್ಲಿ ಮಹಿಳೆಯೊಬ್ಬರು ಅಚ್ಚರಿ ಎಂಬಂತೆ ಹಾವು ಕಡಿತದಿಂದ ಪಾರಾಗಿದ್ದಾರೆ. ಅದು ಒಂದೆರಡು ಬಾರಿಯಲ್ಲ ಬರೋಬ್ಬರಿ 6 ಬಾರಿ ಹಾವು ಕಡಿದರೂ ಬದುಕುಳಿದಿದ್ದಾರೆ.
ಈ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಬಹೋರಿಬಂದ್ ತಹಸಿಲ್ನ ಗುಣ ಬಾಚಯ್ಯ ಗ್ರಾಮದ ನಿವಾಸಿ ಪೂಜಾ ವ್ಯಾಸ್ ಆರು ವರ್ಷಗಳಲ್ಲಿ ಆರು ಬಾರಿ ಹಾವಿನಿಂದ ಕಚ್ಚಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಆದಷ್ಟು ಬೇಗ ಚಿಕಿತ್ಸೆ ಪಡೆಯುವುದೊಂದೇ ದಾರಿ. ಭಾರತದ ಕೆಲವು ದೂರದ ಪ್ರದೇಶಗಳಲ್ಲಿ ಆ ಸೌಲಭ್ಯವೂ ಇಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದರೆ, ಹಾವು ಕಡಿತದಿಂದ ಬದುಕುಳಿಯುವುದು ಸುಲಭ.
ಅದೇ ರೀತಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 6 ಬಾರಿ ಹಾವು ಕಡಿದಿದೆ. ಆದರೆ ಆಕೆ ಪವಾಡ ವೆಂಬಂತೆ ಬದುಕುಳಿದಿದ್ದಾರೆ. ಅದು ಸಹ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ತೆರಳಿದ ಕಾರಣದಿಂದಾಗಿ ಆಕೆ ಬದುಕುಳಿದಿರುವುದಾಗಿ ತಿಳಿದುಬಂದಿದೆ.
ಮೇ 10ರಂದು ಹಾವು ಕಚ್ಚಿದ್ದರಿಂದ ಪೂಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಮನೆ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಆಕೆಯ ಮನೆಯವರು ತಕ್ಷಣ ಕ್ರಮ ಕೈಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಆಕೆಯನ್ನು ಬಹೋರಿಬಂದ್ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹಾವು ಕಚ್ಚಿದಾಗ ಯಾವ ಪ್ರಥಮ ಚಿಕಿತ್ಸೆಯನ್ನೂ ಮಾಡದೆ ಜೊತೆಗೆ ಸಮಯ ವ್ಯರ್ಥ ಮಾಡದೆ ಆಕೆಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆ ತಲುಪಿದ್ದರಿಂದ ವೈದ್ಯರು ರಕ್ಷಿಸುವಲ್ಲಿ ಯಶಸ್ವಿಯಾದರು.
ಆಕೆ ಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಆಕೆಯ ಹೇಳಿದ ಪ್ರಕಾರ ಸುಮಾರು ಆರು ಬಾರು ಹಾವು ಕಚ್ಚಿದೆಯಂತೆ. ಕಳೆದ ಆರು ವರ್ಷಗಳಲ್ಲಿ ಸರಣಿಯಾಗಿ ಹಾವು ಕಡಿದಿದೆ.
ಇದೇ ರೀತಿಯ ಘಟನೆಯಲ್ಲಿ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯ ಮಹಿಳೆಯೊಬ್ಬರು ಒಂದು ವರ್ಷದಲ್ಲಿ 13 ಬಾರಿ ಹಾವಿನಿಂದ ಕಚ್ಚಿಸಿಕೊಂಡು ಬದುಕುಳಿದಿದ್ದ ಘಟನೆ ನಡೆದಿತ್ತು.
6 ಬಾರಿಯೂ ಆಕೆ ಬದುಕುಳಿದಿದ್ದು ಹೇಗೆ?
ಅಚ್ಚರಿಯ ವಿಚಾರ ಎಂದರೆ ಹಾವು ಕಡಿತಕ್ಕೆ ಒಳಗಾದಗೆಲ್ಲಾ ಆಕೆ ತಕ್ಷಣ ಆಸ್ಪತ್ರೆಗೆ ಬಂದಿದ್ದಳಂತೆ. ಎಲ್ಲಿಯೂ ಸಮಯ ವ್ಯರ್ಥ ಮಾಡದೆ. ಯಾವ ಪ್ರಥಮ ಚಿಕಿತ್ಸೆಯೂ ಮಾಡದೆ ಆಸ್ಪತ್ರೆಗೆ ಬಂದಿದ್ದಳಂತೆ. ಆಸ್ಪತ್ರೆ ಸಹ ಆಕೆಯ ಮನೆಯಿಂದ ಸ್ವಲ್ಪವೇ ದೂರದಲ್ಲಿತ್ತು. ಇದರ ಜೊತೆ ಹಾವು ಕಚ್ಚಿದಾಗ ಹೆಚ್ಚು ಆತಂಕಕ್ಕೆ ಆಕೆ ಒಳಗಾಗದೆ ಆಸ್ಪತ್ರೆಗೆ ಬಂದಿರುವುದು ಆಕೆ ಜೀವ ಉಳಿಯುವಲ್ಲಿ ಪ್ರಮುಖ ಕಾರಣವಾಗಿದೆ ಎಂದು ವೈದ್ಯರು ಸಹ ಹೇಳಿದ್ದಾರೆ.
ಆಕೆಯ ಈ ಕಥೆ ಕೇಳಿದ ಸ್ಥಳೀಯರು ನಿಜಕ್ಕೂ ಅಚ್ಚರಿಗೆ ಒಳಗಾಗಿದ್ದಾರೆ 6 ಬಾರಿ ಹಾವು ಕಡಿತದಿಂದ ಆಕೆ ಬದುಕುಳಿದಿರುವುದು ನಿಜಕ್ಕೂ ಪವಾಡ ಎನ್ನುತ್ತಿದ್ದಾರೆ.



Click it and Unblock the Notifications