Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೀವನದಲ್ಲಿ ಒಳ್ಳೆಯದಾಗಬೇಕೆಂದರೆ ಹೀಗೆ ಮಾಡಿ ಎನ್ನುತ್ತೆ ಗರುಡ ಪುರಾಣ
ವಿಷ್ಣುವು ಗರುಡನಿಗೆ ಹೇಳುವ ಕಥೆಯೇ ಗರುಡ ಪುರಾಣದಲ್ಲಿ ಉಲ್ಲೇಖವಾಗಿದೆ. ಒಬ್ಬ ಸಾಮಾನ್ಯ ಮನುಷ್ಯನ ಜೀವನಕ್ಕೆ ಬೇಕಾಗುವ ಎಲ್ಲಾ ಜೀವನ ಪಾಠಗಳು ಇದರಲ್ಲಿದೆ. ಅಷ್ಟೇ ಯಾಕೆ ಗರುಡ ಪುರಾಣದಲ್ಲಿ ಸ್ವರ್ಗವೊಂದನ್ನು ಬಿಟ್ಟು ನರಕ, ಪಿತೃಲೋಕ, ಆತ್ಮದ ಎರಡನೇ ದೇಹದ ಜೊತೆಗೆ ಮಾತಾನಾಡುವ ಸಂಭಾಷಣೆಯೂ ಇದರಲ್ಲಿದೆ. ಗರುಡ ಪುರಾಣದ ಉದ್ದೇಶ ಸಾಮಾನ್ಯ ಮನುಷ್ಯರನ್ನು ಖುಷಿಯಾಗಿರಿಸುವುದು ಅಷ್ಟೇ.
ಗರುಡ ಪುರಾಣವು ಪುರುಷ ಹಾಗೂ ಮಹಿಳೆಯರನ್ನು ಉದ್ದೇಶಿಸಿ ಅದೊಂದು ಮಾತನ್ನು ಹೇಳುತ್ತೆ. ಅಷ್ಟಕ್ಕು ಗರುಡ ಪುರಾಣದ ಪ್ರಕಾರ ಪುರುಷ ಅಥವಾ ಮಹಿಳೆಯರು ಮಾಡಬೇಕಾದ ಕೆಲಸಗಳು ಯಾವುದು ಅನ್ನೋದನ್ನ ನೋಡೋಣ.

1. ಪ್ರತಿಯೊಬ್ಬರಿಗೂ ಗೌರವ ನೀಡುವುದು
ಗರುಡ ಪುರಾಣದ ಪ್ರಕಾರ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಒಬ್ಬರಿಗೆ ಗೌರವ ಕೊಡುವ ಗುಣಗಳನ್ನು ಬೆಳೆಸಿಕೊಂಡಿರಬೇಕು. ಒಬ್ಬ ವ್ಯಕ್ತಿಗೆ ಗೌರವ ಕೊಡುವುದು ತುಂಬಾನೇ ಮುಖ್ಯ. ನಾವು ಆಡುವ ಮಾತು ನಮ್ಮ ತನವನ್ನು ತೋರಿಸುತ್ತದೆ. ಹೀಗಾಗಿ ಯಾರಿಗೂ ಅವಾಚ್ಯ ಶಬ್ಧಗಳಿಂದ ನಿಂದಿಸಬಾರದು. ಬೇರೆಯವರ ಮುಂದೆ ಅವರನ್ನು ಅವಮಾನಿಸಬಾರದು. ಒಂದು ವೇಳೆ ನಾವು ಹೀಗೆ ನಡೆದುಕೊಂಡರೆ ಒಂದಲ್ಲ ಒಂದು ದಿನ ನಾವು ಅಂತಹದ್ದೇ ಪರಿಸ್ಥಿತಿಯನ್ನು ಎದುರಿಸುತ್ತೇವೆ. ಕರ್ಮ ಅನ್ನೋದು ತಿರುಗಿಸಿ ಹೊಡೆಯದೇ ಬಿಡೋದಿಲ್ಲ ಎಂದು ಗರುಡ ಪುರಾಣದಲ್ಲಿ ಉಲ್ಲೇಖವಾಗಿದೆ.
2. ಬೇರೆಯವರ ಮನೆಯಲ್ಲಿ ಶಾಶ್ವತವಾಗಿ ವಾಸ ಮಾಡಬೇಡಿ
ಗರುಡ ಪುರಾಣದ ಪ್ರಕಾರ ಮಹಿಳೆಯರಾಗಲಿ-ಪುರುಷರಾಗಲಿ ತಮ್ಮ ತಮ್ಮ ಮನೆಯಲ್ಲಿ ವಾಸ್ತವ್ಯ ಹೂಡಬೇಕೇ ವಿನಹ ಬೇರೆಯವರ ಮನೆಯಲ್ಲಿ ನೆಲೆಸೋದು ಒಳ್ಳೆಯದಲ್ಲ. ಅದು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ. ನೀವು ಬೇರೆಯವರಿಂದ ನಿಂದನೆಗೂ ಒಳಗಾಗಬೇಕಾಗುತ್ತದೆ. ಹೀಗಾಗಿ ಸಂಬಂಧಿಕರು, ಸ್ನೇಹಿತರ ಮನೆಗೆ ಹೋದರೂ ಕೂಡ ಅಲ್ಲಿ ಹೆಚ್ಚು ದಿನ ಉಳಿದುಕೊಳ್ಳಬೇಡಿ. ಇನ್ನೂ ಮಹಿಳೆಯರಿಗೆ ಬೇರೆಯವರ ಮನೆ ಸುರಕ್ಷಿತ ಸ್ಥಳವು ಅಲ್ಲ ಅನ್ನುತ್ತೆ ಗರುಡ ಪುರಾಣ.
3. ಗಂಡ-ಹೆಂಡತಿ ಜೊತೆಯಲ್ಲಿ ಬಾಳಬೇಕು
ಮೂರು ಗಂಟು ಬೆಸೆದು ಮದುವೆಯಾದ ಮೇಲೆ ಗಂಡ-ಗೆಂಡತಿ ಒಟ್ಟಾಗಿ ಬಾಳಬೇಕು. ಕೆಲವೊಂದು ಸಾರಿ ಕೆಲಸದ ವಿಚಾರಕ್ಕೆ ಗಂಡ ದೂರದ ಊರಿಗೆ ಹೋಗಬೇಕಾಗಿ ಬರುತ್ತದೆ. ಇಂತಹ ಸಂದರ್ಭದಲ್ಲಿ ಪರವಾಗಿಲ್ಲ. ಅದನ್ನು ಬಿಟ್ಟು ಬೇರೆ ಯಾವ ಕಾರಣಕ್ಕೂ ಗಂಡ-ಹೆಂಡತಿ ಬೇರೆ ಬೇರೆಯಾಗಿ ವಾಸಿಸಲೇ ಬಾರದು ಅಂತಾರೆ ಚಾಣಕ್ಯ. ದೂರ ದೂರ ಇದ್ದಾಗ ಮನಸ್ಥಾಪ ಹೆಚ್ಚಾಗುತ್ತದೆ. ಹೀಗಾಗಿ ದಂಪತಿಗಳು ಒಟ್ಟಾಗಿ ಇರಬೇಕು ಅನ್ನುತ್ತೆ ಗರುಡ ಪುರಾಣ.
4. ಚಾರಿತ್ರ್ಯ ಚೆನ್ನಾಗಿರಲಿ
ಗರುಡ ಪುರಾಣದ ಪ್ರಕಾರ ಗಂಡಾಗಲಿ-ಹೆಣ್ಣಾಗಲಿ ಇಬ್ಬರಿಗೂ ಚಾರಿತ್ರ್ಯ ತುಂಬಾನೇ ಮುಖ್ಯವಾಗುತ್ತದೆ. ಯಾವ ಕಾರಣಕ್ಕೂ ನಿಮ್ಮ ಚಾರಿತ್ರ್ಯ ಹಾಳು ಮಾಡಕೊಳ್ಳಬೇಡಿ. ಜೀವನದಲ್ಲಿ ಎಂತಹ ಪರಿಸ್ಥಿತಿ ಎದುರಾದ್ರು ಕೂಡ ರಾಜಿ ಮಾಡಿಕೊಳ್ಳಲೇಬೇಡಿ. ನಿಮ್ಮ ತನವನ್ನು ನೀವು ಕಾಪಾಡಿಕೊಂಡರೆ ಸಮಾಜದಲ್ಲಿ ತಲೆಎತ್ತಿ ನಡೆಯೋದಕ್ಕೆ ಸಾಧ್ಯವಾಗುತ್ತೆ.
ಗರುಡ ಪುರಾಣದ ಈ ತಪ್ಪುಗಳನ್ನು ಮಾಡಲೇಬೇಡಿ. ಒಂದು ವೇಳೆ ತಪ್ಪು ಮಾಡಿದ್ದೇ ಆದರೆ ನಿಮ್ಮ ಗೌರವ, ಮರ್ಯಾದೆಯನ್ನು ನಿಮ್ಮ ಕೈಯಾರೆ ನೀವೆ ಹಾಳು ಮಾಡಿಕೊಂಡಂತೆ.



Click it and Unblock the Notifications


