Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಭಿಮಾನಿ ಪುತ್ರನ ದತ್ತು ಪಡೆದ ನಟ..! ಇಡೀ ಕುಟುಂಬದ ಜವಾಬ್ದಾರಿ ಹೊತ್ತ ಮಹೇಶ್ ಬಾಬು..!
ನಟರು ಅಂದ್ರೆ ಬರಿ ಸಿನಿಮಾ ಮಾಡೋದು ಹಣ ಮಾಡೋದು ಅಲ್ಲ. ಜೊತೆಗೆ ಒಂದಿಷ್ಟು ಒಳ್ಳೆಯ ಕೆಲಸವನ್ನು ಅವರು ಮಾಡುತ್ತಾರೆ. ಅಲ್ಲದೆ ಕೋಟಿ ಕೋಟಿ ಅಭಿಮಾನಿಗಳ ಹೊಂದಿರುತ್ತಾರೆ. ಭಾರತದಲ್ಲಂತು ಸಿನಿಮಾ ನಾಯಕರಿಗೆ ದೇವಾಲಯವನ್ನೇ ಕಟ್ಟುತ್ತಾರೆ. ನಾಯಕರು ಸಹ ಅವರಿಗೆ ಅಷ್ಟೇ ಪ್ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಅಭಿಮಾನಿಗಳ ಕಷ್ಟಕ್ಕೆ ಮಿಡಿಯುತ್ತಾರೆ.
ಈಗ ತೆಲುಗು ಸೂಪರ್ಸ್ಟಾರ್ ಮಹೇಶ್ ಬಾಬು ತಮ್ಮ ಅಭಿಮಾನಿಯೊಬ್ಬರ ಕಷ್ಟಕ್ಕೆ ಮಿಡಿದಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳಿಂದಲೇ ಮನೆ ಮಾತಾಗಿರುವ ಅವರು ಈಗ ಅಭಿಮಾನಿಯೊಬ್ಬರ ಬೆನ್ನಿಗೆ ನಿಂತಿದ್ದಾರೆ. ಆಪತ್ತಿನಲ್ಲಿದ್ದವರಿಗೆ ಸಹಾಯ ಮಾಡುವುದರಲ್ಲಿ ಮಹೇಶ್ ಬಾಬು ಮುಂದಿದ್ದಾರೆ.

ಸಹಾಯ ಎಂದು ಕೇಳಿಕೊಂಡು ಬರುವವರಿಗೆ ಯಾವಾಗಲು ಸ್ಪಂಧಿಸುತ್ತಾರೆ. ಈ ಮೊದಲು ಮಹೇಶ್ ಬಾಬು ಹಲವು ಮಕ್ಕಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿ ಮರುಜನ್ಮ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಹೃದ್ರೋಗದಿಂದ ಬಳಲುತ್ತಿದ್ದ ನೂರಾರು ಮಕ್ಕಳಿಗೆ ಸಹಾಯ ಮಾಡಿ ಹೊಸ ಬದುಕನ್ನು ಕಟ್ಟಿ ಕೊಟ್ಟಿದ್ದರು.
ತೆರೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಮಹೇಶ್ ಬಾಬು ರಿಯಲ್ ಸೂಪರ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದಾರೆ. ಇವರ ಹೆಸರಿನಲ್ಲಿ ಮಹೇಶ್ ಬಾಬು ಫೌಂಡೇಶನ್ ಎಂಬ ದತ್ತಿ ಸಂಸ್ಥೆಯನ್ನು ಸ್ಥಾಪಿಸಿ ಹಲವು ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ಅಭಿಮಾನಿಗಳಿಗೂ ಬೆಂಬಲ ನೀಡುತ್ತಿದ್ದಾರೆ. ಇತ್ತೀಚೆಗೆ, ಮಹೇಶ್ ಬಾಬು ತಮ್ಮ ನಾಯಕನಿಗೆ ಜೀವನದಲ್ಲಿ ಮರೆಯಲಾಗದ ಸಹಾಯ ಹಸ್ತ ನೀಡಿದ ಕೆಲಸ ಮಾಡಿದ್ದಾರೆ.
ಸಾವಿನಂಚಿನಲ್ಲಿರುವ ತಮ್ಮ ಅಭಿಮಾನಿಯೊಬ್ಬರ ಇಡೀ ಕುಟುಂಬದ ಜವಾಬ್ದಾರಿ ಹೊತ್ತಿರುವುದಲ್ಲದೆ ಪುತ್ರನ ದತ್ತು ಪಡೆದಿದ್ದಾರೆ. ಆಂಧ್ರಪ್ರದೇಶದ ಮೋಪಿದೇವಿ ಮತ್ತು ಪೆದಪ್ರೋಲು ಮೂಲದ ಕಾಕರ್ಲಮುಡಿ ರಾಜೇಶ್ ಎಂಬ ವ್ಯಕ್ತಿ ಕೃಷ್ಣ ನಟ ಮಹೇಶ್ ಬಾಬು ಅವರ ಕಟ್ಟಾ ಅಭಿಮಾನಿಯಾಗಿದ್ದಾರೆ. ಅವರಿಗೆ ಮೂವರು ಗಂಡು ಮಕ್ಕಳಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ರಾಜೇಶ್ ತಮ್ಮ ಮೂವರು ಪುತ್ರರಿಗೆ ಮಹೇಶ್ ಬಾಬು ಸಿನಿಮಾಗಳ ಹೆಸರನ್ನೇ ಇಟ್ಟಿದ್ದಾರೆ.
ಅವರ ಮಕ್ಕಳು ಹುಟ್ಟಿದಾಗ.. ಮಹೇಶ್ ಬಾಬು ಅವರ ಸಿನಿಮಾಗಳು ಬಿಡುಗಡೆಯಾದವು. ಅವರ ಹೆಸರನ್ನೇ ತಮ್ಮ ಮಗನಿಗೆ ಇಟ್ಟರು. ಆದ್ದರಿಂದ ಮಹೇಶ್ ತನ್ನ ಮೊದಲ ಮಗನಿಗೆ ಅರ್ಜುನ್, ಎರಡನೇ ಮಗನಿಗೆ ಅತಿಥಿ ಮತ್ತು ಮೂರನೇ ಮಗನಿಗೆ ಆಗಡು ಎಂದು ಹೆಸರಿಟ್ಟಿದ್ದಾರೆ.
ಈ ನಡುವೆ ರಾಜೇಶ್ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ಕಿಡ್ನಿ ವೈಫಲ್ಯಕ್ಕೆ ತುತ್ತಾಗಿದ್ದರು. ತಂದೆ ಆಸ್ಪತ್ರೆ ಸೇರಿದ್ದರಿಂದ ಮಕ್ಕಳು ಓದು ನಿಲ್ಲಿಸಿದರು. ಜೊತೆಗೆ ಹಿರಿಯ ಮಗ ಕೆಲಸಕ್ಕೆ ಸೇರಿಕೊಂಡ, ಚಪ್ಪಲಿ ಅಂಗಡಿಯಲ್ಲಿ ದುಡಿದು ಮನೆ ನೋಡಿಕೊಳ್ಳುತ್ತಿದ್ದಾನೆ. ಈ ಪರಿಸ್ಥಿತಿ ನಟ ಮಹೇಶ್ ಬಾಬುಗೆ ತಿಳಿದುಬಂದಿದೆ. ತಕ್ಷಣ ಅವರು ಈ ಕಷ್ಟಕ್ಕೆ ಸ್ಪಂಧಿಸುವ ಕೆಲಸ ಮಾಡಿದ್ದಾರೆ.
ಈ ಸುದ್ದಿ ತಿಳಿದ ಮಹೇಶ್ ಬಾಬು ತಕ್ಷಣ ಪ್ರತಿಕ್ರಿಯಿಸಿದ್ದಾರೆ. ಅವರ ಮನೆಗೆ ತಮ್ಮ ತಂಡವನ್ನು ಕಳುಹಿಸಿ ರಾಜೇಶ್ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರ ಜೊತೆಯೂ ಮಾತುಕತೆ ನಡೆಸಿ ಅವರ ಶುಲ್ಕ ಪಾವತಿಗೆ ಮುಂದಾದರು. ಇಡೀ ಕುಟುಂವನ್ನು ದತ್ತು ಪಡೆಯುವುದಾಗಿ ಹೇಳಿದರು. ಮೂವರ ಮಕ್ಕಳ ಶೈಕ್ಷಣಿಕ ವೆಚ್ಚು ಭರಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಅವರ ಈ ಕಾರ್ಯಕ್ಕೆ ಎಲ್ಲೆಡೆ ಈಗ ಮೆಚ್ಚುಗೆ ಕೇಳಿಬರುತ್ತಿದೆ. ಇಂತಹ ಕಾರ್ಯಗಳ ಮಾಡುವ ಮೂಲಕ ನೂರಾರು ಕುಟುಂಬಗಳಿಗೆ ಜೀವದಾನ ಮಾಡುವ ಪುಣ್ಯದ ಕೆಲಸದಲ್ಲಿ ತೊಡಗಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.



Click it and Unblock the Notifications
