Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನಟ, ರಾಜಕಾರಣಿ ಕೆ.ಶಿವರಾಂ ನಿಧನ..! ಅವರ ಸಿನಿಮಾ, ರಾಜಕೀಯ ಜೀವನ ಮಾಹಿತಿ ಇಲ್ಲಿದೆ.!
ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಕೆ. ಶಿವರಾಂ (70) ಇಂದು ವಿಧಿವಶರಾಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 20 ದಿನಗಳಿಂದ ಶಿವರಾಂ ಅವರು ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಸುತ್ತಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. ಕೆ ಶಿವರಾಮ್ ನಟನಾಗಿ ಅಷ್ಟೇ ಅಲ್ಲದೇ ಉತ್ತಮ ರಾಜಕಾರಣಿಯಾಗಿಯೂ ಜನಪ್ರಿಯತೆ ಪಡೆದಿದ್ದರು.

ಯಾರು ಈ ಕೆ.ಶಿವರಾಂ
ಕೆ ಶಿವರಾಂ 1953ರ ಏಪ್ರಿಲ್ 6ರಂದು ರಾಮನಹಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದ್ದರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿದ ಶಿವರಾಮ್, ನಂತರ 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಎಷ್ಟು ಸಿನಿಮಾದಲ್ಲಿ ನಟಿಸಿದ್ದರು?
90ರ ಕಾಲಘಟ್ಟದಲ್ಲಿ ಕನ್ನಡ ಸಿನಿಮಾ ಪ್ರೇಕ್ಷಕರ ಪಾಲಿನ ನೆಚ್ಚಿನ ಹೀರೋ ಆಗಿದ್ದರು. ಸರ್ಕಾರಿ ಹುದ್ದೆಯಲ್ಲಿದ್ದ ಅವರು ಕೆಲಸಕ್ಕೆ ರಾಜೀನಾಮೆ ನೀಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಕೆ.ಶಿವರಾಂ 'ಬಾನಲ್ಲೆ ಮಧುಚಂದ್ರಕ್ಕೆ', ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ 3, ಪ್ರತಿಭಟಬೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಚಿತ್ರದಲ್ಲಿ ನಟಿಸಿದ್ದರು. ಕನ್ನಡ ಸಿನಿಮಾ ಇಂಡಸ್ಟ್ರಿ ಪಾಲಿಗೆ ತುಂಬಾ ಲಕ್ಕಿ ಹೀರೋ ಅನ್ನಿಸಿಕೊಂಡಿದ್ದರು. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನ ಮಾಡಿದ್ದ ಬಾ ನಲ್ಲೆ ಮಧು ಚಂದ್ರಕೆ ಸಿನಿಮಾ ಹಿಟ್ ಆಗಿತ್ತು. ಅಲ್ಲದೆ ಹತ್ತಾರು ಸಿನಿಮಾದಲ್ಲಿ ಪೋಷಕ ನಟರಾಗಿಯೂ ಕಾಣಿಸಿಕೊಂಡಿದ್ದರು. ಅವರು ಕೊನೆಯದಾಗಿ 2017ರಲ್ಲಿ ಟೈಗರ್ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಬಿಟ್ಟರೆ ಮತ್ಯಾವ ಸಿನಿಮಾದಲ್ಲಿಯೂ ಬಣ್ಣ ಹಚ್ಚಲಿಲ್ಲ. ಇದಾಗಿ ಹಲವು ವರ್ಷ ಚಿತ್ರರಂಗದಿಂದ ದೂರ ಉಳಿದರು.
ರಾಜಕೀಯ ಎಂಟ್ರಿ
2013ರಲ್ಲಿ ನಿವೃತ್ತಿಯ ನಂತರ ಮೊದಲು ಅವರ ರಾಜಕೀಯ ಜೀವನ ಆರಂಭಗೊಂಡಿದ್ದು ಜೆಡಿಎಸ್ ಪಕ್ಷದ ಮೂಲಕ. 2014ರಲ್ಲಿ ಲೋಕಸಭೆ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ ಅದೇ ವರ್ಷ ದಲಿತರಿಗೆ ಸಿಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇದ್ದಾಗ ಬಿಜೆಪಿ ಸೇರಿದರು. ಕೊನೆಯ ವರೆಗೂ ಬಿಜೆಪಿಯಲ್ಲಿ ಉಳಿದರು. ಆದರೆ ಕೆಲವು ವರ್ಷದಿಂದ ರಾಜಕೀಯದಿಂದ ದೂರ ಉಳಿದಿದ್ದ ಅವರು, ಅನಾರೋಗ್ಯಕ್ಕೆ ಒಳಗಾಗಿದ್ದರು.



Click it and Unblock the Notifications












