Latest Updates
-
ಕ್ಯಾಂಪಸ್ ಪ್ರೇಮಿಗಳೇ ಎಚ್ಚರ! ರ್ಯಾಗಿಂಗ್ನಿಂದ ಪಾರಾಗಲು ಮತ್ತು ಸುರಕ್ಷಿತವಾಗಿರಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ಮುಂಬೈ ಭೂಕುಸಿತದ ಎಚ್ಚರಿಕೆ: ಮಳೆಗಾಲದಲ್ಲಿ ನಿಮ್ಮ ಅಪಾರ್ಟ್ಮೆಂಟ್ ಸುರಕ್ಷಿತವಾಗಿಡಲು ಈ ಕ್ರಮಗಳನ್ನು ಪಾಲಿಸಿ -
ಮುಂಬೈ ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಪ್ರವಾಹದಿಂದ ರಕ್ಷಿಸಲು ಇಂದೇ ಈ 30 ನಿಮಿಷಗಳ ಚೆಕ್ಲಿಸ್ಟ್ ಪಾಲಿಸಿ! -
ಸ್ವಾತಂತ್ರ್ಯ ದಿನದ ಸಂಭ್ರಮ: ಕಡಿಮೆ ಬಜೆಟ್ನಲ್ಲಿ ಆರೋಗ್ಯಕರ 'ತ್ರಿವರ್ಣ' ಉಪಾಹಾರ ತಯಾರಿಸುವುದು ಹೇಗೆ? -
ಸ್ವಾತಂತ್ರ್ಯ ದಿನಾಚರಣೆಯ ಲಾಂಗ್ ವೀಕೆಂಡ್: ₹3,000 ಬಜೆಟ್ನಲ್ಲಿ ಸುರಕ್ಷಿತ ಪ್ರವಾಸಕ್ಕೆ ಬೆಸ್ಟ್ ತಾಣಗಳು! -
ಸ್ವಾತಂತ್ರ್ಯ ದಿನಾಚರಣೆ: ಮಳೆಗಾಲದಲ್ಲೂ ಸ್ಟೈಲಿಶ್ ಆಗಿ ಕಾಣಲು ₹999 ರೊಳಗೆ ಬೆಸ್ಟ್ ಟಿಪ್ಸ್! -
ಹಾಸ್ಟೆಲ್ನಲ್ಲಿದ್ದೀರಾ? ಜಿಮ್ ಇಲ್ಲದೆ ಫಿಟ್ ಆಗಿರಲು ಈ ಸಿಂಪಲ್ 'ಕ್ಯಾಂಪಸ್ ಫಿಟ್' ಟಿಪ್ಸ್ ಫಾಲೋ ಮಾಡಿ! -
ಸಾವಿನ ನಂತರವೂ ಜೀವದಾನ: ದಂಪತಿಗಳೇ, ಈ ಒಂದು ನಿರ್ಧಾರ 8 ಜನರ ಪ್ರಾಣ ಉಳಿಸಬಹುದು! -
ಹರ್ ಘರ್ ತಿರಂಗಾ: ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಧ್ವಜ ಹಾರಿಸುವಾಗ ಈ ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಬೆಲೆ ಏರಿಕೆಯ ಬಿಸಿ: ಕೇವಲ ₹99 ಬಜೆಟ್ನಲ್ಲಿ ಸಿಗುವ ಪೌಷ್ಟಿಕಾಂಶಯುಕ್ತ ಹೈ-ಪ್ರೊಟೀನ್ ಊಟದ ಪ್ಲಾನ್!
ಬಿಗ್ ಬಾಸ್ ವಿನ್ನರ್ಗೆ ಬಹುಮಾನ ಘೋಷಿಸಿದ್ದ ನಟ ಸುದೀಪ್; ಗಿಲ್ಲಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
ಬಿಗ್ ಬಾಸ್ ಸೀಸನ್ 12ರ ವಿನ್ನರ್ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ವೀಕ್ಷಕರ ನಿರೀಕ್ಷೆಯಂತೆ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಆರಂಭದಿಂದಲೂ ಗಿಲ್ಲಿ ನಟ ಈ ಬಾರಿಯ ಬಿಗ್ ಬಾಸ್ ವಿನ್ ಆಗಲಿದ್ದಾರೆ ಎಂಬ ಮಾತುಗಳು ಕೇಳುತ್ತಲೇ ಇದ್ದವು. ಅದರಂತೆ ಗಿಲ್ಲಿಗೆ ದಾಖಲೆ ಪ್ರಮಾಣದಲ್ಲಿ ಓಟ್ಗಳು ಬಂದಿದ್ದವು. ಬಳಿಕ ವೇದಿಕೆಯಲ್ಲಿ ಕಿಚ್ಚ ಸುದೀಪ್ ಗಿಲ್ಲಿ ಅವರನ್ನು ವಿಜೇತರೆಂದು ಘೋಷಿಸಿದರು. ಹಾಗೆ ರಕ್ಷಿತಾ ರನ್ನರ್ ಅಪ್ ಆಗಿದ್ದಾರೆ.
ಬಿಗ್ ಬಾಸ್ ಅಂದ್ರೆ ವ್ಯಕ್ತಿತ್ವದ ಆಟ. ಅಲ್ಲಿ ಪ್ರತಿಭೆಯೊಂದಿಗೆ ಮಾತು ಬಹಳ ಮುಖ್ಯ. ಗಿಲ್ಲಿ ನಟನ ಕಾಮಿಡಿ ಟೈಮಿಂಗ್, ಹಾಗೆ ಟಾಸ್ಕ್ ಸೇರಿ ಆತನ ಮಾತುಗಳಿಗೆ ವೀಕ್ಷಕರು ಮನಸೋತಿದ್ದರು. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ತಿಳಿ ಹಾಸ್ಯದ ಮೂಲಕ ಗಿಲ್ಲಿ ಹೆಸರು ಪಡೆದರು. ಹಾಗೆ ಎಲ್ಲರಿಗೂ ಆತನನ್ನೇ ಗೆಲ್ಲಿಸಬೇಕು ಎಂಬ ಹಠದ ಮೂಲಕ ಓಟ್ ಮಾಡಿರುವುದು ನೋಡಬಹುದು.

ಸದ್ಯ ಗಿಲ್ಲಿಗೆ 50 ಲಕ್ಷ ರೂಪಾಯಿ ನಗದು ರೂಪದ ಬಹುಮಾನ ಹಾಗೆ ಟ್ರೋಫಿ ಒಲಿದು ಬಂದಿದೆ. ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಪ್ರಾಯೋಜಕರ ಕಡೆಯಿಂದ 50 ಲಕ್ಷ ರೂಪಾಯಿ ಬಹುಮಾನ ಹಣ ಲಭಿಸಿದೆ. ಹಾಗೆ ಮಾರುತಿ ಸುಜುಕಿಯ ಹೊಸ ವಿಕ್ಟೋರಿಯಸ್ ಕಾರು ಸಹ ಬಹುಮಾನವಾಗಿ ನೀಡಲಾಗುತ್ತದೆ. ಇದರ ಜೊತೆಗೆ ಹಲವರು ಬಹುಮಾನ ಘೋಷಿಸಿದ್ದು ವಿಶೇಷವಾಗಿತ್ತು.
ಗಿಲ್ಲಿ ಪಡೆದ ಬಹುಮಾನದ ಮೊತ್ತ ಎಷ್ಟು?
ಗಿಲ್ಲಿಗೆ ಪ್ರಾಯೋಜಕರ ಕಡೆಯಿಂದ 50 ಲಕ್ಷ ರೂಪಾಯಿ ಸಿಕ್ಕಿದೆ. ಅದರಂತೆ ಗಿಲ್ಲಿ ಬಿಗ್ ಬಾಸ್ ವಿನ್ ಆದರೆ 20 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಮೊದಲೇ ಜೆಡಿಎಸ್ ಎಂಎಲ್ಸಿ, ಸಾಯಿ ಗೋಲ್ಡ್ ಪ್ಯಾಲೆಸ್ನ ಮಾಲಿಕರಾದ ಶರವಣ ಅವರು ಘೋಷಿಸಿದ್ದರು. ಗಿಲ್ಲಿಗೆ ಪ್ರಾಯೋಜನಕರ ಬಹುಮಾನದ ಜೊತೆಗೆ ಈ ಹಣ ಕೂಡ ಸಿಗಲಿದೆ. ಹಾಗೆ ನಟ ಕಿಚ್ಚ ಸುದೀಪ್ ಕಡೆಯಿಂದಲೂ ಗಿಲ್ಲಿ ನಟನಿಗೆ ಬಹುಮಾನ ಹಣ ಲಭಿಸಿದೆ. ಕಿಚ್ಚ ಸುದೀಪ್ ಮನಗೆದ್ದಿರುವ ಗಿಲ್ಲಿಗೆ ತಮ್ಮ ವೈಯಕ್ತಿವಾಗಿ ಬಹುಮಾನ ನೀಡುವುದಾಗಿ ಘೋಷಿಸಿದರು. ನಾವು ಕೂಡ ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಪ್ರೀತಿಯಿಂದ 10 ಲಕ್ಷ ರೂಪಾಯಿ ನೀಡುವುದಾಗಿ ಸುದೀಪ್ ವೇದಿಕೆಯಲ್ಲಿ ಘೋಷಿಸಿದರು.
ಹೀಗೆ ಒಟ್ಟಾರೆ ಗಿಲ್ಲಿ 80 ಲಕ್ಷ ರೂಪಾಯಿ ಬಹುಮಾನದ ರೂಪದಲ್ಲಿ ಕೈಸೇರಿದೆ. ಅದರ ಜೊತೆಗೆ ಹತ್ತು ಹಲವು ಕೂಪನ್ಗಳು, ಬಹುಮಾನಗಳು, ಸನ್ಮಾನಗಳು ಇನ್ನೂ ಬರುವ ನಿರೀಕ್ಷೆಗಳಿವೆ.
ಯಾರು ಈ ಗಿಲ್ಲಿ ನಟ?
ಗಿಲ್ಲಿ ನಟನ ನಿಜವಾದ ಹೆಸರು ನಟರಾಜ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಡದಪುರದ ರೈತ ಕುಟುಂಬದಿಂದ ಬಂದಿರುವ ವ್ಯಕ್ತಿ. ಐಟಿಐ ಕೋರ್ಸ್ ಮುಗಿಸಿ ಬೆಂಗಳೂರು ಕಡೆ ಪ್ರಯಾಣ ಮಾಡಿದ್ದ ಅವರು, ಆರಂಭದಲ್ಲಿ ಸಿನಿಮಾ ನಿರ್ದೇಶಕರ ಬಳಿ ಕೆಲಸಕ್ಕೆ ಅಲೆದಾಡಿದ್ದಾರೆ. ಇದಾದ ಬಳಿಕ ಅವರು ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಒಂದರಲ್ಲಿ ಕಾಣಿಸಿಕೊಂಡ ಬಳಿಕ ಗಿಲ್ಲಿ ನಟ ಎಂಬುದಾಗಿ ಫೇಮಸ್ ಆದರು. ಹಾಗೆ ಇತ್ತೀಚಿಗೆ ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾದಲ್ಲಿ ಚಿಕ್ಕ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಇಷ್ಟೇ ಅಲ್ಲ ಗಿಲ್ಲಿ ಸುಮಾರು 5ಕ್ಕೂ ಹೆಚ್ಚು ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆದ್ರೆ ಯಾವುದೇ ಶೋನಲ್ಲಿ ವಿನ್ನರ್ ಆಗಿರಲಿಲ್ಲ. ನಂತರ ಬಿಗ್ ಬಾಸ್ ವೇದಿಕೆಯಲ್ಲೂ ಅವರು ಸೈ ಎನಿಸಿಕೊಂಡರು.



Click it and Unblock the Notifications