Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಭಾರತದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನಟಿ ದೀಪಿಕಾ ಪಡುಕೋಣೆ ನೇಮಕ!
ವ್ಯಕ್ತಿಯೊಬ್ಬರಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯಓ ಹಾಗೆ ಮಾನಸಿಕ ಆರೋಗ್ಯ ಕೂಡ ಅಷ್ಟೇ ಮುಖ್ಯವಾಗುತ್ತದೆ. ಅದ್ರಲ್ಲೂ ಭಾರತದಲ್ಲಿ ಮಾನಸಿಕ ಆರೋಗ್ಯ ಕುರಿತಾದ ದೊಡ್ಡ ಆತಂಕವಿದೆ. ಭಾರತದ ಬಹುತೇಕರು ಒತ್ತಡ, ಆತಂಕ ಸೇರಿದಂತೆ ಹಲವು ರೀತಿಯ ಮಾನಸಿಕ ಸಮಸ್ಯೆಗಳ ಹೊಂದಿರುವುದು ನೋಡಬಹುದು.
ಸದ್ಯ ಈ ಮಾನಸಿಕ ಆರೋಗ್ಯ ಸುಧಾರಣೆ ಸಂಬಂಧವಾಗಿ ಆರೋಗ್ಯ ಇಲಾಖೆ ಹಲವು ರೀತಿಯ ಯೋಜನೆಗಳ ರೂಪಿಸುವುದು ನೋಡಬಹುದು. ಈಗ ಮಾನಸಿಕ ಆರೋಗ್ಯ ರಾಯಭಾರಿಯನ್ನಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ನೇಮಿಸಿದೆ. ದಿ ಲೈವ್ ಲವ್ ಲಾಫ್ ಎಂಬ ಫೌಂಡೇಶನ್ ನಡೆಸುತ್ತಿರುವ ದೀಪಿಕಾ ಪಡುಕೋಣೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ನೇಮಿಸಿದೆ.

ಭಾರತದ ಮಾನಸಿಕ ಆರೋಗ್ಯ ಬೆಂಬಲ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಯೋಗಕ್ಷೇಮದ ಕುರಿತಾಗಿ ಮುಕ್ತ ಮಾತುಕತೆಯ ಉತ್ತೇಜಿಸುವ ಸಲುವಾಗಿ ನಟಿಯನ್ನು ನೇಮಿಸಿರುವ ಹಿಂದಿನ ಗುರಿ ಹೊಂದಲಾಗಿದೆ. ಹಾಗೆ ಮುಂಬರುವ ಹಲವು ಮಾನಸಿಕ ಆರೋಗ್ಯ ಸುಧಾರಣೆ ಯೋಜನೆಗಳಲ್ಲಿ ದೀಪಿಕಾ ಪಡುಕೋಣೆ ಸಕ್ರೀಯವಾಗಿ ಭಾಗಿಯಾಗಲಿದ್ದಾರೆ.
ದೀಪಿಕಾ ಪಡುಕೋಣೆ ಅವರೊಂದಿಗಿನ ಪಾಲುದಾರಿಕೆಯು ಭಾರತದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು, ಕಳಂಕವನ್ನು ಕಡಿಮೆ ಮಾಡಲು ಚರ್ಚೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮಾನಸಿಕ ಆರೋಗ್ಯವನ್ನು ಸಾರ್ವಜನಿಕ ಆರೋಗ್ಯದ ಅವಿಭಾಜ್ಯ ಅಂಶವಾಗಿ ಎತ್ತಿ ತೋರಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಜೆ ಪಿ ನಡ್ಡಾ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸೇವೆ ಸಲ್ಲಿಸಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಭಾರತವು ಮಾನಸಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಈ ಕುರಿತಾದ ಸಾಧನೆಯನ್ನು ಹೆಚ್ಚಿಸಲು ಮತ್ತು ನಮ್ಮ ದೇಶದ ಮಾನಸಿಕ ಆರೋಗ್ಯ ಚೌಕಟ್ಟನ್ನು ಮತ್ತಷ್ಟು ಬಲಪಡಿಸಲು ಸಚಿವಾಲಯದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ನಟಿ ದೀಪಿಕಾ ಪಡುಕೋಣೆ ಕೂಡ ಸಂತಸ ಹಂಚಿಕೊಂಡಿದ್ದಾರೆ.
ಈ ಮೂಲಕ ದೇಶದ ನಾಗರಿಕರಿಗೆ ಮಾನಸಿಕ ಆರೋಗ್ಯ ಕುರಿತಾದ ಮಾಹಿತಿ ನೀಡುವುದು, ಶಿಕ್ಷಣ, ಯೋಜನೆಗಳು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲ್ಲಿದ್ದಾರೆ. ಸರ್ಕಾರಿ ಬೆಂಬಲಿತ ಕಾರ್ಯಕ್ರಮಗಳ ಜೊತೆ ಕೈ ಜೋಡಿಸಲಿದ್ದಾರೆ. ಹಾಗೆ ದೇಶದ ಕೊನೆಯ ವ್ಯಕ್ತಿಗೂ ಈ ಜಾಗೃತಿ ಅಭಿಯಾನಗಳ ಮಾಹಿತಿ ಸಿಗುವಂತೆ ನೋಡಿಕೊಳ್ಳಲಿದ್ದಾರೆ.
ಹತ್ತು ವರ್ಷದ ಹಿಂದೆ ಅಂದರೆ 2015ರಲ್ಲಿ ದಿ ಲೈವ್ ಲವ್ ಲಾಫ್ ಎಂಬ ಸಂಸ್ಥೆಯನ್ನು ಅವರು ಆರಂಭಿಸಿದ್ದರು. ಈ ಮೂಲಕ ಮಾನಸಿಕ ಆರೋಗ್ಯ ಸುಧಾರಣೆಗಾಗಿ ಹಲವು ರೀತಿಯ ಪ್ರಯತ್ನಗಳ ಮಾಡಿದ್ದರು. ಭಾರತದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಯ ಭವಿಷ್ಯವು ಯೋಗ ಮತ್ತು ಧ್ಯಾನದಂತಹ ಭಾರತೀಯ ಸಂಪ್ರದಾಯಗಳೊಂದಿಗೆ ವಿಜ್ಞಾನವನ್ನು ಮಿಶ್ರಣ ಮಾಡುವುದರಲ್ಲಿ ಮತ್ತು ಮಾನಸಿಕ ಆರೋಗ್ಯ ಸಂಭಾಷಣೆಗಳನ್ನು ದೈನಂದಿನ ಜೀವನದ ಸಾಮಾನ್ಯ ಭಾಗವನ್ನಾಗಿ ಮಾಡುವುದರಲ್ಲಿದೆ ಎಂದು ದೀಪಿಕಾ ಪಡುಕೋಣೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.
2017ರಲ್ಲಿ ದಿ ಲ್ಯಾನ್ಸೆಟ್ ಅಂದಾಜಿನ ಪ್ರಕಾರ ಸುಮಾರು 197 ಮಿಲಿಯನ್ ಭಾರತೀಯರು ಮಾನಸಿಕ ಅಸ್ವಸ್ಥತೆಗಳನ್ನು ಹೊಂದಿದ್ದಾರೆ, ಅವರಲ್ಲಿ 45 ಮಿಲಿಯನ್ಗಿಂತಲೂ ಹೆಚ್ಚು ಜನರು ಖಿನ್ನತೆಯಂತಹ ಸಮಸ್ಯೆಗಳ ಹೊಂದಿದ್ದಾರೆ. ಇತ್ತೀಚಿನ ಅಧ್ಯಯನಗಳು 10.5ರಷ್ಟು ಭಾರತೀಯರು ರೋಗನಿರ್ಣಯ ಮಾಡಬಹುದಾದ ಮಾನಸಿಕ ಅಸ್ವಸ್ಥತೆಯ ಹೊಂದಿದ್ದಾರೆ ಎಂದು ಅದರಲ್ಲಿ ಬಹುತೇಕರು ಚಿಕಿತ್ಸೆ ಪಡೆಯುವ ಕಡೆ ಗಮನವಿಡುವುದಿಲ್ಲ ಎಂದು ಸಹ ತಿಳಿದುಬಂದಿದೆ.



Click it and Unblock the Notifications