Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಅಕ್ಷಯ ತೃತೀಯಯಂದು ಸಂಪತ್ತು ವೃದ್ಧಿಗೆ ಚಿನ್ನದ ಬದಲಿಗೆ ಈ ಆಹಾರ ವಸ್ತುಗಳನ್ನು ಖರೀದಿಸಬಹುದು
ಏಪ್ರಿಲ್ 22ಕ್ಕೆ ಅಕ್ಷಯ ತೃತೀಯ. ಈ ಶುಭ ದಿನಕ್ಕಾಗಿ ತುಂಬಾ ಜನ ಕಾಯುತ್ತಿರುತ್ತಾರೆ. ಏಕೆಂದರೆ ಈ ದಿನ ಶುಭ ದಿನದಂದು ಚಿನ್ನ, ಆಸ್ತಿ, ಮನೆ ಖರೀದಿಗೆ ತುಂಬಾನೇ ಶ್ರೇಷ್ಠವಾಗಿದೆ. ಈ ದಿನ ಈ ವಸ್ತುಗಳನ್ನು ಖರೀದಿಸಿದರೆ ನಮ್ಮ ಸಂಪತ್ತು ವೃದ್ಧಿಸುವುದು ಎಂಬ ನಂಬಿಕೆ.
ಅಕ್ಷಯ ಪಾತ್ರದಂತೆ ನಮ್ಮ ಸಂಪತ್ತು ವೃದ್ಧಿಸಲಿ ಎಂದು ಅಕ್ಷಯ ತೃತೀಯ ಶುಭ ದಿನದಂದು ಒಂದು ಗ್ರಾಂ ಚಿನ್ನವನ್ನು ಖರೀದಿಸೋಣ ಎಂದು ಜನರು ಯೋಚಿಸುತ್ತಾರೆ. ಆದರೆ ಈಗ ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಒಂದು ಗ್ರಾಂ ಚಿನ್ನ ಖರೀದಿಸಲು ಮಧ್ಯಮವರ್ಗದವರು ಯೋಚಿಸಬೇಕಾಗಿದೆ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ ತೊಂದರೆಯಿಲ್ಲ ನೀವು ಕೆಲವೊಂದು ಆಹಾರ ವಸ್ತುಗಳನ್ನು ಖರೀದಿಸಿದರೂ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.

ಅಕ್ಷಯ ತೃತೀಯ ದಿನದಂದು ಧಾನ್ಯಗಳನ್ನು ಖರೀದಿಸಿ:
ಈ ದಿನ ಧಾನ್ಯಗಳನ್ನು ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಸಂಪತ್ತು ವೃದ್ಧಿಸುವುದು, ಇದರಿಂದ ಮನೆಯ ಆರ್ಥಿಕ ಸುಧಾರಣೆಯಾಗುವುದು ಎಂಬ ನಂಬಿಕೆ ಇದೆ.
ಸೊಪ್ಪು
ಈ ದಿನ ಮನೆಗೆ ಹಸಿರು ಸೊಪ್ಪು ತರುವುದು ಶುಭ, ಹಸಿರು ಶುಭದ ಸಂಕೇತ, ಈ ದಿನ ಸೊಪ್ಪು, ಹಸಿರು ತರಕಾರಿ, ಹಸಿರು ಬಣ್ಣದ ಕಾಳುಗಳನ್ನು ತನ್ನಿ.
ಅಕ್ಕಿ, ರಾಗಿ, ನವಣೆ ಖರೀದಿಸಿ
ಅಕ್ಷಯ ತೃತೀಯದಂದು ಮನೆಯ ಅಡುಗೆ ಮನೆಯಲ್ಲಿ ಯಾವ ವಸ್ತುವಿಗೂ ಕೊರತೆ ಇಲ್ಲದಂತೆ ನೋಡಿಕೊಳ್ಳಿ. ಈ ದಿನ ಮನೆ ಅಕ್ಕಿ, ರಾಗಿ, ನವಣೆ, ಬೇಳೆ-ಕಾಳುಗಳನ್ನು ತನ್ನಿ.
ತುಪ್ಪ
ಹಿಂದೂ ನಂಬಿಕೆ ಪ್ರಕಾರ ತುಪ್ಪ ದುಷ್ಟ ಶಕ್ತಿ, ನಕಾರಾತ್ಮಕ ಶಕ್ತಿ ಹೊರಗಿಡುತ್ತದೆ ಎಂದು ನಂಬಲಾಗಿದೆ. ಈ ದಿನ ಮನೆಗೆ ತುಪ್ಪ ತನ್ನ ಅಲ್ಲದೆ ಈ ದಿನ ತುಪ್ಪದ ದೀಪ ಹಚ್ಚಿ ಶ್ರೀ ವಿಷ್ಣು ಹಾಗೂ ಲಕ್ಷ್ಮಿಯನ್ನು ಆರಾಧಿಸಿ.
ಇವುಗಳನ್ನು ದಾನ ಮಾಡಿ
ಚಂದನ
ಈ ದಿನ ಚಂದನ ಅಥವಾ ಶ್ರೀಗಂಧದ ಸುಗಂಧ ದ್ರವ್ಯವನ್ನು ದಾನ ಮಾಡಿ.
ತೆಂಗಿನಕಾಯಿ
ಈ ದಿನ ಬ್ರಾಹ್ಮಣರಿಗೆ ತೆಂಗಿನಕಾಯಿ ದಾನ ಮಾಡಿದರೆ ನಮ್ಮ ಪೂರ್ವಜರಿಗೆ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಮಜ್ಜಿಗೆ
ಅಕ್ಷಯ ತೃತೀಯದಂದು ಮಜ್ಜಿಗೆ ದಾನ ಮಾಡಿದರೆ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.
ವೀಳ್ಯೆದೆಲೆ ಮತ್ತು ನೀರು
ಅಕ್ಷಯ ತೃತೀಯದಂದು ವೀಳ್ಯೆದೆಲೆ ಮತ್ತು ನೀರನ್ನು ದಾನ ಮಾಡುವುದರಿಂದ ಕೂಡ ಸಂಪತ್ತು ವೃದ್ಧಿಸುವುದು.



Click it and Unblock the Notifications