Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಅಕ್ಷಯ ತೃತೀಯಯಂದು ಸಂಪತ್ತು ವೃದ್ಧಿಗೆ ಚಿನ್ನದ ಬದಲಿಗೆ ಈ ಆಹಾರ ವಸ್ತುಗಳನ್ನು ಖರೀದಿಸಬಹುದು
ಏಪ್ರಿಲ್ 22ಕ್ಕೆ ಅಕ್ಷಯ ತೃತೀಯ. ಈ ಶುಭ ದಿನಕ್ಕಾಗಿ ತುಂಬಾ ಜನ ಕಾಯುತ್ತಿರುತ್ತಾರೆ. ಏಕೆಂದರೆ ಈ ದಿನ ಶುಭ ದಿನದಂದು ಚಿನ್ನ, ಆಸ್ತಿ, ಮನೆ ಖರೀದಿಗೆ ತುಂಬಾನೇ ಶ್ರೇಷ್ಠವಾಗಿದೆ. ಈ ದಿನ ಈ ವಸ್ತುಗಳನ್ನು ಖರೀದಿಸಿದರೆ ನಮ್ಮ ಸಂಪತ್ತು ವೃದ್ಧಿಸುವುದು ಎಂಬ ನಂಬಿಕೆ.
ಅಕ್ಷಯ ಪಾತ್ರದಂತೆ ನಮ್ಮ ಸಂಪತ್ತು ವೃದ್ಧಿಸಲಿ ಎಂದು ಅಕ್ಷಯ ತೃತೀಯ ಶುಭ ದಿನದಂದು ಒಂದು ಗ್ರಾಂ ಚಿನ್ನವನ್ನು ಖರೀದಿಸೋಣ ಎಂದು ಜನರು ಯೋಚಿಸುತ್ತಾರೆ. ಆದರೆ ಈಗ ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಒಂದು ಗ್ರಾಂ ಚಿನ್ನ ಖರೀದಿಸಲು ಮಧ್ಯಮವರ್ಗದವರು ಯೋಚಿಸಬೇಕಾಗಿದೆ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ ತೊಂದರೆಯಿಲ್ಲ ನೀವು ಕೆಲವೊಂದು ಆಹಾರ ವಸ್ತುಗಳನ್ನು ಖರೀದಿಸಿದರೂ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.

ಅಕ್ಷಯ ತೃತೀಯ ದಿನದಂದು ಧಾನ್ಯಗಳನ್ನು ಖರೀದಿಸಿ:
ಈ ದಿನ ಧಾನ್ಯಗಳನ್ನು ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಸಂಪತ್ತು ವೃದ್ಧಿಸುವುದು, ಇದರಿಂದ ಮನೆಯ ಆರ್ಥಿಕ ಸುಧಾರಣೆಯಾಗುವುದು ಎಂಬ ನಂಬಿಕೆ ಇದೆ.
ಸೊಪ್ಪು
ಈ ದಿನ ಮನೆಗೆ ಹಸಿರು ಸೊಪ್ಪು ತರುವುದು ಶುಭ, ಹಸಿರು ಶುಭದ ಸಂಕೇತ, ಈ ದಿನ ಸೊಪ್ಪು, ಹಸಿರು ತರಕಾರಿ, ಹಸಿರು ಬಣ್ಣದ ಕಾಳುಗಳನ್ನು ತನ್ನಿ.
ಅಕ್ಕಿ, ರಾಗಿ, ನವಣೆ ಖರೀದಿಸಿ
ಅಕ್ಷಯ ತೃತೀಯದಂದು ಮನೆಯ ಅಡುಗೆ ಮನೆಯಲ್ಲಿ ಯಾವ ವಸ್ತುವಿಗೂ ಕೊರತೆ ಇಲ್ಲದಂತೆ ನೋಡಿಕೊಳ್ಳಿ. ಈ ದಿನ ಮನೆ ಅಕ್ಕಿ, ರಾಗಿ, ನವಣೆ, ಬೇಳೆ-ಕಾಳುಗಳನ್ನು ತನ್ನಿ.
ತುಪ್ಪ
ಹಿಂದೂ ನಂಬಿಕೆ ಪ್ರಕಾರ ತುಪ್ಪ ದುಷ್ಟ ಶಕ್ತಿ, ನಕಾರಾತ್ಮಕ ಶಕ್ತಿ ಹೊರಗಿಡುತ್ತದೆ ಎಂದು ನಂಬಲಾಗಿದೆ. ಈ ದಿನ ಮನೆಗೆ ತುಪ್ಪ ತನ್ನ ಅಲ್ಲದೆ ಈ ದಿನ ತುಪ್ಪದ ದೀಪ ಹಚ್ಚಿ ಶ್ರೀ ವಿಷ್ಣು ಹಾಗೂ ಲಕ್ಷ್ಮಿಯನ್ನು ಆರಾಧಿಸಿ.
ಇವುಗಳನ್ನು ದಾನ ಮಾಡಿ
ಚಂದನ
ಈ ದಿನ ಚಂದನ ಅಥವಾ ಶ್ರೀಗಂಧದ ಸುಗಂಧ ದ್ರವ್ಯವನ್ನು ದಾನ ಮಾಡಿ.
ತೆಂಗಿನಕಾಯಿ
ಈ ದಿನ ಬ್ರಾಹ್ಮಣರಿಗೆ ತೆಂಗಿನಕಾಯಿ ದಾನ ಮಾಡಿದರೆ ನಮ್ಮ ಪೂರ್ವಜರಿಗೆ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಮಜ್ಜಿಗೆ
ಅಕ್ಷಯ ತೃತೀಯದಂದು ಮಜ್ಜಿಗೆ ದಾನ ಮಾಡಿದರೆ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.
ವೀಳ್ಯೆದೆಲೆ ಮತ್ತು ನೀರು
ಅಕ್ಷಯ ತೃತೀಯದಂದು ವೀಳ್ಯೆದೆಲೆ ಮತ್ತು ನೀರನ್ನು ದಾನ ಮಾಡುವುದರಿಂದ ಕೂಡ ಸಂಪತ್ತು ವೃದ್ಧಿಸುವುದು.



Click it and Unblock the Notifications