Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಷಯ ತೃತೀಯಯಂದು ಸಂಪತ್ತು ವೃದ್ಧಿಗೆ ಚಿನ್ನದ ಬದಲಿಗೆ ಈ ಆಹಾರ ವಸ್ತುಗಳನ್ನು ಖರೀದಿಸಬಹುದು
ಏಪ್ರಿಲ್ 22ಕ್ಕೆ ಅಕ್ಷಯ ತೃತೀಯ. ಈ ಶುಭ ದಿನಕ್ಕಾಗಿ ತುಂಬಾ ಜನ ಕಾಯುತ್ತಿರುತ್ತಾರೆ. ಏಕೆಂದರೆ ಈ ದಿನ ಶುಭ ದಿನದಂದು ಚಿನ್ನ, ಆಸ್ತಿ, ಮನೆ ಖರೀದಿಗೆ ತುಂಬಾನೇ ಶ್ರೇಷ್ಠವಾಗಿದೆ. ಈ ದಿನ ಈ ವಸ್ತುಗಳನ್ನು ಖರೀದಿಸಿದರೆ ನಮ್ಮ ಸಂಪತ್ತು ವೃದ್ಧಿಸುವುದು ಎಂಬ ನಂಬಿಕೆ.
ಅಕ್ಷಯ ಪಾತ್ರದಂತೆ ನಮ್ಮ ಸಂಪತ್ತು ವೃದ್ಧಿಸಲಿ ಎಂದು ಅಕ್ಷಯ ತೃತೀಯ ಶುಭ ದಿನದಂದು ಒಂದು ಗ್ರಾಂ ಚಿನ್ನವನ್ನು ಖರೀದಿಸೋಣ ಎಂದು ಜನರು ಯೋಚಿಸುತ್ತಾರೆ. ಆದರೆ ಈಗ ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಒಂದು ಗ್ರಾಂ ಚಿನ್ನ ಖರೀದಿಸಲು ಮಧ್ಯಮವರ್ಗದವರು ಯೋಚಿಸಬೇಕಾಗಿದೆ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ ತೊಂದರೆಯಿಲ್ಲ ನೀವು ಕೆಲವೊಂದು ಆಹಾರ ವಸ್ತುಗಳನ್ನು ಖರೀದಿಸಿದರೂ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.

ಅಕ್ಷಯ ತೃತೀಯ ದಿನದಂದು ಧಾನ್ಯಗಳನ್ನು ಖರೀದಿಸಿ:
ಈ ದಿನ ಧಾನ್ಯಗಳನ್ನು ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಇದರಿಂದ ಸಂಪತ್ತು ವೃದ್ಧಿಸುವುದು, ಇದರಿಂದ ಮನೆಯ ಆರ್ಥಿಕ ಸುಧಾರಣೆಯಾಗುವುದು ಎಂಬ ನಂಬಿಕೆ ಇದೆ.
ಸೊಪ್ಪು
ಈ ದಿನ ಮನೆಗೆ ಹಸಿರು ಸೊಪ್ಪು ತರುವುದು ಶುಭ, ಹಸಿರು ಶುಭದ ಸಂಕೇತ, ಈ ದಿನ ಸೊಪ್ಪು, ಹಸಿರು ತರಕಾರಿ, ಹಸಿರು ಬಣ್ಣದ ಕಾಳುಗಳನ್ನು ತನ್ನಿ.
ಅಕ್ಕಿ, ರಾಗಿ, ನವಣೆ ಖರೀದಿಸಿ
ಅಕ್ಷಯ ತೃತೀಯದಂದು ಮನೆಯ ಅಡುಗೆ ಮನೆಯಲ್ಲಿ ಯಾವ ವಸ್ತುವಿಗೂ ಕೊರತೆ ಇಲ್ಲದಂತೆ ನೋಡಿಕೊಳ್ಳಿ. ಈ ದಿನ ಮನೆ ಅಕ್ಕಿ, ರಾಗಿ, ನವಣೆ, ಬೇಳೆ-ಕಾಳುಗಳನ್ನು ತನ್ನಿ.
ತುಪ್ಪ
ಹಿಂದೂ ನಂಬಿಕೆ ಪ್ರಕಾರ ತುಪ್ಪ ದುಷ್ಟ ಶಕ್ತಿ, ನಕಾರಾತ್ಮಕ ಶಕ್ತಿ ಹೊರಗಿಡುತ್ತದೆ ಎಂದು ನಂಬಲಾಗಿದೆ. ಈ ದಿನ ಮನೆಗೆ ತುಪ್ಪ ತನ್ನ ಅಲ್ಲದೆ ಈ ದಿನ ತುಪ್ಪದ ದೀಪ ಹಚ್ಚಿ ಶ್ರೀ ವಿಷ್ಣು ಹಾಗೂ ಲಕ್ಷ್ಮಿಯನ್ನು ಆರಾಧಿಸಿ.
ಇವುಗಳನ್ನು ದಾನ ಮಾಡಿ
ಚಂದನ
ಈ ದಿನ ಚಂದನ ಅಥವಾ ಶ್ರೀಗಂಧದ ಸುಗಂಧ ದ್ರವ್ಯವನ್ನು ದಾನ ಮಾಡಿ.
ತೆಂಗಿನಕಾಯಿ
ಈ ದಿನ ಬ್ರಾಹ್ಮಣರಿಗೆ ತೆಂಗಿನಕಾಯಿ ದಾನ ಮಾಡಿದರೆ ನಮ್ಮ ಪೂರ್ವಜರಿಗೆ ಮೋಕ್ಷ ಸಿಗುವುದು ಎಂದು ಹೇಳಲಾಗುವುದು.
ಮಜ್ಜಿಗೆ
ಅಕ್ಷಯ ತೃತೀಯದಂದು ಮಜ್ಜಿಗೆ ದಾನ ಮಾಡಿದರೆ ಲಕ್ಷ್ಮಿ ಕೃಪೆಗೆ ಪಾತ್ರರಾಗುವಿರಿ.
ವೀಳ್ಯೆದೆಲೆ ಮತ್ತು ನೀರು
ಅಕ್ಷಯ ತೃತೀಯದಂದು ವೀಳ್ಯೆದೆಲೆ ಮತ್ತು ನೀರನ್ನು ದಾನ ಮಾಡುವುದರಿಂದ ಕೂಡ ಸಂಪತ್ತು ವೃದ್ಧಿಸುವುದು.



Click it and Unblock the Notifications