Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ಅಕ್ಷಯ ತೃತೀಯ 2023: ಈ ದಿನ ಈ ಕುಬೇರ ಮಂತ್ರ ಪಠಿಸಿ ಸಮೃದ್ಧಿ ಹೆಚ್ಚುತ್ತೆ
ಹಿಂದೂಗಳಿಗೆ ಅಕ್ಷಯ ತೃತೀಯ ದಿನವೆಂದರೆ ಅತ್ಯಂತ ಮಂಗಳಕರವಾದ ದಿನ. ಯಾವುದೇ ಶುಭ ಸಮಾರಂಭಕ್ಕೆ ಅಥವಾ ಹೂಡಿಕೆಗೆ ಈ ದಿನ ತುಂಬಾನೇ ಪ್ರಾಶಸ್ತ್ಯ ಎಂದು ಹೇಳಲಾಗುವುದು.ಅಕ್ಷಯ ತೃತೀಯ ನಾವು ಏನಾದರೂ ಹೂಡಿಕೆ ಮಾಡಿದರೆ ನಮ್ಮ ಸಂಪತ್ತು ವೃದ್ಧಿಸುವುದು ಎಂಬ ನಂಬಿಕೆಯಿದೆ.
ಈ ಕಾರಣಕ್ಕೆ ಅಕ್ಷಯ ತೃತೀಯ ಶುಭ ಮುಹೂರ್ತದ ಸಮಯವನ್ನು ಕಾಯುತ್ತಿರುತ್ತೇವೆ. 2023ರಲ್ಲಿ ಅಕ್ಷಯ ತೃತೀಯವನ್ನು ಏಪ್ರಿಲ್ 22ರಂದು ಆಚರಿಸಲಾಗುವುದು. ಅಕ್ಷಯ ತೃತೀಯ ಪೂಜಾ ಮುಹೂರ್ತ ಯಾವಾಗ? ಅಕ್ಷಯ ತೃತೀಯ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ:

ಅಕ್ಷಯ ತೃತೀಯ ಈ ಕಾರ್ಯಗಳಿಗೆ ತುಂಬಾನೇ ಶುಭ ನೋಡಿ
* ದಾನ-ಧರ್ಮ ಮಾಡಲು
* ಬಡವರಿಗೆ ಸಹಾಯ ಮಾಡಲು
* ಯಜ್ಞ-ಪೂಜೆಯನ್ನು ಮಾಡಲು
* ಚಿನ್ನ ಖರೀದಿಗೆ
* ಹೊಸ ಆಸ್ತಿ ಖರೀದಿಗೆ
* ಮನೆ ಖರೀದಿಗೆ
* ಗಾಡಿ ಖರೀದಿಗೆ
* ಹೂಡಿಕೆ ಮಾಡಲು
ಈ ದಿನ ನಾವು ಮಾಡುವ ಒಳ್ಳೆಯ ಕಾರ್ಯದ ಫಲ ಹೆಚ್ಚಾಗುವುದು ಎಂಬ ನಂಬಿಕೆಯಿದೆ.
ಅಕ್ಷಯ ತೃತೀಯಾ ಯಾವಾಗ ಆಚರಿಸಲಾಗುವುದು?
ಅಕ್ಷಯ ತೃತೀಯವನ್ನು ಅಕ್ಷಯ ತೃತೀಯ ತಿಥಿಯಂದು ಪುನರ್ವಸು ಕಾಲದಲ್ಲಿ ಆಚರಿಸಲಾಗುವುದು. ಒಂದು ವೇಳೆ ಅಕ್ಷಯ ತೃತೀಯ ತಿಥಿ ಸೋಮವಾರ ಅಥವಾ ಬುಧವಾರ ರೋಹಿಣಿ ನಕ್ಷತ್ರದಲ್ಲಿ ಬಂದರೆ ತುಂಬಾನೇ ಶುಭ ಎಂದು ಪರಿಗಣಿಸಲಾಗುವುದು.
ಅಕ್ಷಯ ತೃತೀಯ ಪೂಜಾ ಮುಹೂರ್ತ: ಶನಿವಾರ ಬೆಳಗ್ಗೆ 07:51:19 ರಿಂದ 12:19:56ರವರೆಗೆ
ಒಟ್ಟು ಅವಧಿ: 4 ಗಂಟೆ 28 ನಿಮಿಷ
ಅಕ್ಷಯ ತೃತೀಯ ಪೂಜಾ ವಿಧಿಗಳೇನು?
* ಅಕ್ಷಯ ತೃತೀಯ ದಿನದಂದು ಸ್ನಾನಮಾಡಿ ಹಳದಿ ಬಟ್ಟೆಯನ್ನು ಧರಿಸಿದರೆ ತುಂಬಾ ಶುಭ ಎಂದು ಪರಿಗಣಿಸಲಾಗಿದೆ.
* ನಂತರ ಶ್ರೀ ವಿಷ್ಣು ಮೂರ್ತಿಯನ್ನು ತೊಳೆದು ಗಂಗಾಜಲದಿಂದ ಶುದ್ಧಗೊಳಿಸಿ ನಂತರ ತುಳಸಿ, ಹಳದಿ ಹೂಗಳು, ಹಳದಿ ಹಣ್ಣುಗಳನ್ನು ಅರ್ಪಿಸಿ.
* ನಂತರ ದೇವರಿಗೆ ತುಪ್ಪದ ದೀಪ ಹಚ್ಚಿ ಹಳದಿ ವಸ್ತ್ರ ಹಾಸಿ ಕೂರಿ,
* ನಂತರ ವಿಷ್ಣು ಸಹಸ್ರನಾಮ ಪಠಿಸಿ.
* ಕೊನೆಗೆ ದೇವರಿಗೆ ಆರತಿ ಎತ್ತಿ, ನೈವೇದ್ಯ ಅರ್ಪಿಸಿ.
* ಈ ದಿನ ಸಂಪೂರ್ಣವಾಗಿ ಉಪವಾಸವಿರಲು ಸಾಧ್ಯವಾಗದವರು ಹಾಲು, ಹಣ್ಣುಗಳನ್ನು ಸೇವಿಸಬಹುದು.
ಪೌರಾಣಿಕ ಮಹತ್ವ
ಮಹಾಭಾರತದಲ್ಲಿ ಯುಧಿಷ್ಠರ ಅಕ್ಷಯ ತೃತೀಯ ಮಹತ್ವದ ಬಗ್ಗೆ ತಿಳಿಯ ಬಯಸುತ್ತಾನೆ. ಆಗ ಶ್ರೀಕೃಷ್ಣನು ಅಕ್ಷಯ ತೃತೀಯ ಮಹತ್ವದ ಬಗ್ಗೆ ಹೇಳುತ್ತಾ ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಜಪ, ತಪ, ಯಜ್ಞ, ಬರೆಯುವುದು, ಪಿತೃ ತರ್ಪಣ, ದಾನ ಈ ಕಾರ್ಯಗಳನ್ನು ಮಾಡಿದರೆ ತುಂಬಾನೇ ಪ್ರಯೋಜನ ಪಡೆಯುತ್ತಾರೆ ಎಂದು ಹೇಳುತ್ತಾನೆ.
ಪೌರಾಣಿಕ ಕತೆ:
ಒಬ್ಬ ಬಡ ವ್ಯಕ್ತಿ ಇರುತ್ತಾನೆ. ಅವನಿಗೆ ದೇವರ ಮೇಲೆ ತುಂಬಾನೇ ನಂಬಿಕೆ, ಆದರೆ ತನ್ನ ಬಡದಿಂದ ಬೇಸತ್ತು ಹೋಗಿರುತ್ತಾನೆ. ಆವಾಗ ಅವನು ದೇವರೇ ಈ ಬಡತನದಿಂದ ಮುಕ್ತಿ ನೀಡು ಎಂದು ಪ್ರಾರ್ಥಿಸುತ್ತಾನೆ. ಆವಾಗ ಯಾರೋ ಒಬ್ಬರು ಆತನಿಗೆ ಅಕ್ಷಯ ತೃತೀಯ ಪೂಜೆ ಮಹತ್ವದ ಬಗ್ಗೆ ಹೇಳುತ್ತಾರೆ. ಅದರಂತೆ ಆ ಬಡವ ಬೆಳಗ್ಗೆ ಎದ್ದು ಗಂಗಾ ನದಿಯಲ್ಲಿ ಸ್ನಾನ ಮಾಡಿ ಅಕ್ಷಯ ತೃತೀಯ ಆಚರಿಸುತ್ತಾನೆ. ಇದರಿಂದಾಗಿ ಆತ ಮುಂದಿನ ಜನ್ಮದಲ್ಲಿ ಕುಶಾವತಿಯ ರಾಜನಾಗುತ್ತಾನೆ.
ಅಕ್ಷಯ ತೃತೀಯದ ಮಹತ್ವ
* ವರ್ಷದಲ್ಲಿ ತುಂಬಾ ಶುಭ ಮುಹೂರ್ತವಿರುವ ದಿನ ಇದಾಗಿದೆ.
*ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡುವುದರಿಮದ ಕೆಟ್ಟದ್ದು ದೂರಾಗುತ್ತದೆ.
*ಪಿತೃ ತರ್ಪಣ ಮಾಡಿ ಪಿತೃದೋದಿಂದ ಮುಕ್ತರಾಗಲು ಈ ದಿನ ಶ್ರೇಷ್ಠವಾಗಿದೆ.
* ಈ ದಿನ ಚಿನ್ನ ಖರೀದಿಗೆ ತುಂಬಾನೇ ಒಳ್ಳೆಯದು
* ತ್ರೇತಾ ಯುಗ ಈ ದಿನದಿಂದ ಪ್ರಾರಂಭವಾಯಿತು ಎನ್ನಲಾಗುವುದು
* ಬದ್ರಿನಾಥ ದೇವಾಲಯದ ಬಾಗಿಲು ಈ ದಿನ ತೆರೆಯಲಿದೆ.
* ಶ್ರೀ ವಿಷ್ಣು ಹಯಗ್ರೀವನ ಅವತಾರ ತಾಳಿದ ದಿನವಾಗಿದೆ.
ಈ ದಿನ ಈ ಕುಬೇರ ಮಂತ್ರ ಪಠಿಸಿ
ಕುಬೇರ ಮಂತ್ರ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಶನಧಾನ್ಯಧೀಪತಯೇ
ಧನಧಾನ್ಯಸಮೃದ್ಧಿಮ್ ಮೇದೇಹಿ ದಾಪಯ ಸ್ವಾಹಾ||
ಧನ ಪಾಪ್ತಿಗೆ ಮಂತ್ರ
ಓಂ ಶ್ರೀಮ್ ಹ್ರೀಮ್ ಕ್ಲೀಮ್ ಶ್ರೀಮ್ ಕ್ಲೀಮ್ ವಿತ್ತೇಶ್ವರಾಯ ನಮಃ
ಕುಬೇರ ಅಷ್ಟಲಕ್ಷ್ಮಿ ಮಂತ್ರ
ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ ಅಷ್ಟ-ಲಕ್ಷ್ಮಿ
ಮಾಮಾ ಗ್ರಿಹೆ ಧನಂ ಪುರಾಯ ಪುರಾಯ ನಮಃ



Click it and Unblock the Notifications












