Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಲ್ಲು ಅರ್ಜುನ್ ವಿರುದ್ಧ ಒಂದೇ ವರ್ಷದಲ್ಲಿ 2 ಕೇಸ್..! 10 ವರ್ಷ ಶಿಕ್ಷೆಯಾಗುತ್ತಾ?
ಪುಷ್ಪಾ 2 ಸಿನಿಮಾ ಯಶಸ್ಸಿನಲ್ಲಿರುವ ನಟ ಅಲ್ಲು ಅರ್ಜುನ್ಗೆ ಇಂದು ಪೊಲೀಸರು ಶಾಕ್ ನೀಡಿದ್ದರು. ಮಧ್ಯಾಹ್ನದ ವೇಳೆಗೆ ಪೋಲೀಸರು ಅವರನ್ನು ಬಂಧಿಸಿರುವುದು ಇಡೀ ಚಿತ್ರರಂಗ ಮಾತ್ರವಲ್ಲದೆ ದೇಶದಾದ್ಯಂತ ಸುದ್ದಿಯಾಗಿದೆ. ದೇಶದಲ್ಲೆಡೆ ಅಭಿಮಾನಿ ಬಳಗ ಹೊಂದಿರುವ ಅವರು, ಬಂಧನದ ಸುದ್ದಿ ಹೊರಬೀಳುತ್ತಿದ್ದಂತೆ ಎಲ್ಲರಲ್ಲೂ ಆಘಾತ ಮೂಡಿಸಿತ್ತು.
ಅಲ್ಲು ಅರ್ಜುನ್ ಸದ್ಯಕ್ಕೆ ಪಾನ್ ಇಂಡಿಯಾದಲ್ಲಿ ಯಶಸ್ವಿ ನಾಯಕ ನಟರಾಗಿ ಗುರುತಿಸಿಕೊಂಡಿದ್ದಾರೆ. ಪುಷ್ಪಾ 2 ಸಿನಿಮಾ ಬಿಡುಗಡೆಯಾಗಿ ಸಾವಿರ ಕೋಟಿಗೂ ಅಧಿಕ ಹಣ ಲೂಟಿ ಮಾಡಿದೆ. ಈಗಲೂ ಹಲವು ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇತ್ತ ನಟ ಅಲ್ಲು ಅರ್ಜುನ್ ಬಂಧನ ಈಗ ಅಭಿಮಾನಿಗಳಲ್ಲಿ ಆತಂಕ ಹುಟ್ಟಲು ಕಾರಣವಾಗಿದೆ.

ನಟನ ಬಂಧನಕ್ಕೆ ಕಾರಣವೇನು?
ಪುಷ್ಪಾ 2 ಸಿನಿಮಾ ಬಿಡುಗಡೆಯಾದ ದಿನ ಅಭಿಮಾನಿಗಳ ಸುನಾಮಿಯೇ ಎದ್ದಿತ್ತು. ಬಿಡುಗಡೆಯಾದ ದಿನ ಅವರು ಸಂಧ್ಯಾ ಚಿತ್ರಮಂದಿರಕ್ಕೆ ದಿಢೀರ್ ಭೇಟಿ ನೀಡಿದ್ದರು. ಈ ನಡುವೆ ತಮ್ಮ ನೆಚ್ಚಿನ ನಟನ ನೋಡಲು ಅಭಿಮಾನಿಗಳ ನೂಕುನುಗ್ಗಲು ಆರಂಭವಾಗಿತ್ತು. ಈ ಘಟನೆ ಕಾಲ್ತುಳಿತಕ್ಕೆ ಕಾರಣವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಹಾಗೆ ಮಹಿಳೆಯ ಪುತ್ರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಈ ಘಟನೆ ಅಲ್ಲಿ ಗೊಂದಲಕ್ಕೆ ಕಾರಣವಾಗಿತ್ತಲ್ಲದೆ ಜನರನ್ನು ತಡೆಯಲು ಪೊಲೀಸರು ಹರ ಸಾಹಸಪಟ್ಟಿದ್ದರು. ಬಳಿಕ ನಟ ಅಲ್ಲು ಅರ್ಜುನ್ ಮೃತ ಮಹಿಳೆಯ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿ ಪರಿಹಾರ ಕೂಡ ನೀಡಿದ್ದರು, ಆದರೆ ಈ ಘಟನೆ ಸಂಬಂಧ ಅಲ್ಲು ಅರ್ಜುನ್ ಸೇರಿ ನಾಲ್ವರ ವಿರುದ್ಧ ಚಿಕ್ಕಡಪಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು, ಆದರೆ ಅಲ್ಲು ಅರ್ಜುನ್ ಈ ನೋಟಿಸ್ಗೆ ಉತ್ತರಿಸದ ಕಾರಣ ಇಂದು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದಕ್ಕೂ ಮೊದಲು ಸಹ ಬಿದ್ದಿತ್ತು ಪ್ರಕರಣ
ಅಲ್ಲು ಅರ್ಜುನ್ ಇದೇ ಮೊದಲ ಬಾರಿಗೆ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿಲ್ಲ ಬದಲಿಗೆ. ಈ ಮೊದಲು ಇತ್ತೀಚಿಗೆ ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕೂಡ ಅವರ ಮೇಲಿತ್ತು. ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ನಂದ್ಯಾಲ ಕ್ಷೇತ್ರದ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪಾ ರವಿ ಚಂದ್ರ ಕಿಶೋರ್ ರೆಡ್ಡಿ ಅವರ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ ಅವರ ಅಭಿಮಾನಿಗಳು ನಿವಾಸ ಎದುರು ಜಮಾಯಿಸಿದ್ದರು. ಆ ಸಮಯದಲ್ಲಿ 144 ಸೆಕ್ಷನ್ ಕೂಡ ಜಾರಿಯಲ್ಲಿದ್ದ ಕಾರಣ ಅವರು ಈ ನಿಯಮ ಉಲ್ಲಂಘಟನೆ ಆರೋಪಕ್ಕೆ ಒಳಗಾದರು. ಹಾಗೆ ಈ ಪ್ರಕರಣವನ್ನು ಆಂಧ್ರ ಪ್ರದೇಶ ಹೈಕೋರ್ಟ್ ವಿಚಾರಣೆ ಕೂಡ ನಡೆಸಿ ಅರ್ಜಿ ವಜಾ ಮಾಡಿತ್ತು.
ಈಗ ಮತ್ತೊಂದು ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನವಾಗಿದೆ. ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ವಿಚಾರಣೆ ಇನ್ನು ನಡೆಯುವುದು ಬಾಕಿ ಉಳಿದಿರುವಾಗಲೇ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಅವರು ರೂಮ್ನಲ್ಲಿದ್ದಾಗ ಪೊಲೀಸರು ಮನೆಯೊಳಗೆ ಬಂದು ಜೀಪ್ಗೆ ಹತ್ತಿಸಿಕೊಂಡು ಹೋಗಿದ್ದಾರೆ.
ಅಲ್ಲು ಅರ್ಜುನ್ ವಿರುದ್ಧ ಈ ಪ್ರಕರಣದಲ್ಲಿ 105, 118 (1) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 105 ಒಬ್ಬ ವ್ಯಕ್ತಿಯ ಸಾವಿಗೆ ಆರೋಪಿ ಕಾರಣವಾಗಿರುವುದು ಸಾಬೀತಾದರೆ, ಸಾವಿನ ಉದ್ದೇಶ ಇಟ್ಟುಕೊಂಡು ಕೆಲಸ ಮಾಡಿದರೆ, ಗರಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಲಾಗುತ್ತದೆ. ಸದ್ಯ ಅಲ್ಲು ಅರ್ಜುನ್ ಪ್ರಕರಣದಲ್ಲೂ ಈ ಸೆಕ್ಷನ್ ಹಾಕಲಾಗಿದೆ.



Click it and Unblock the Notifications