Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
ಪ್ರತಿ ತಿಂಗಳು ಎರಡು ಏಕಾದಶಿ ಬರುತ್ತದೆ, ವರ್ಷದಲ್ಲಿ 24 ಏಕಾದಶಿ. ಈ ಏಕಾದಶಿ ಶ್ರೀ ವಿಷ್ಣುವಿಗೆ ಮೀಸಲಾದ ವಿಶೇಷ ದಿನ, ಆದರೆ ಪ್ರತಿಯೊಂದು ಏಕಾದಶಿಯನ್ನು ಭಿನ್ನವಾಗಿ ಆಚರಿಸಲಾಗುವುದು ಹಾಗೂ ಈ ಏಕಾದಶಿ ಅದರದ್ದೇ ಆದ ಮಹತ್ವ ಹೊಂದಿದೆ. ಈ ಮಾರ್ಚ್ 20ಕ್ಕೆ ಅಮಲಕಿ ಏಕಾದಶಿಯನ್ನು ಆಚರಿಸಲಾಗುವುದು.
ಈ ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ತುಂಬಾನೇ ಮಹತ್ವ ನೀಡಲಾಗಿದೆ, ಪೂಜಾ ಸಮಯ, ಪೂಜಾ ವಿಧಿ ಹಾಗೂ ಅಮಲಕಿ ಏಕಾದಶಿಯ ಮಹತ್ವವವೇನು ಎಂದು ನೋಡೋಣ ಬನ್ನಿ:

ಅಮಲಕಿ ಏಕಾದಶಿ
ದಿನಾಂಕ: ಮಾರ್ಚ್ 20
ಏಕಾದಶಿ ತಿಥಿ ಪ್ರಾರಂಭ: ಮಾರ್ಚ್ 19 ರಾತ್ರಿ 12:21
ಏಕಾದಶಿ ತಿಥಿ ಮುಕ್ತಾಯ: ಮಾರ್ಚ್ 21 ಮುಂಜಾನೆ 02:22ರವರೆಗೆ
ಪಾರಣ ಸಮಯ: ಮಾರ್ಚ್ 21, ಬೆಳಗ್ಗೆ 08:58ರ ನಂತರ
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ಪೂಜೆ
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ನೆಲ್ಲಿಕಾಯಿ ಗಿಡವನ್ನು ಮನೆ ತಂದು ನೆಟ್ಟು ಅಥವಾ ಮನೆಯಲ್ಲಿರುವ ನೆಲ್ಲಿಕಾಯಿ ಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುವುದು.
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಪೂಜಿಸುವುದು ಏಕೆ?
ನೆಲ್ಲಿಕಾಯಿ ಗಿಡವು ಶ್ರೀ ವಿಷ್ಣುವಿಗೆ ಪ್ರಿಯವಾದ ಗಿಡ, ಈ ಗಿಡದಲ್ಲಿ ಮಹಾಲಕ್ಷ್ಮಿ ಹಾಗೂ ಶ್ರೀ ವಿಷ್ಣು ನೆಲೆಸಿರುತ್ತಾರೆ ಎಂದು ಹೇಳಲಾಗುವುದು. ಹಾಗಾಗಿ ಅಮಲಕಿ ಏಕಾದಶಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು.
ಸಂತಾನ ಭಾಗ್ಯ ದೊರೆಯುವುದು
ಅಮಲಕಿ ಏಕಾದಶಿಯ ಮಹತ್ವವೆಂದರೆ ದಂಪತಿ ಸಂತಾನ ಭಾಗ್ಯಕ್ಕಾಗಿ ಉಪವಾಸವಿದ್ದು ಈ ಏಕಾದಶಿಯನ್ನು ಆಚರಿಸಲಾಗುವುದು. ಈ ಏಕಾದಶಿ ಆಚರಿಸುವುದರಿಂದ ಸಂತಾ ಭಾಗ್ಯ ಲಭಿಸುವುದು ಎಂದು ನಂಬಲಾಗಿದೆ. ಈ ದಿನ ಯಾರು ಶ್ರೀ ವಿಷ್ಣುವನ್ನು ಪೂಜಿಸುತ್ತಾರೆ ಅವರಿಗೆ ಪುಣ್ಯ ಕ್ಷೇತ್ರಗಳಿಗೆ ಹೋದಾಗ ಸಿಗುವ, ಯಜ್ಞ -ಯಾಗ ಮಾಡಿದಾಗ ಸಿಗುವ ಪುಣ್ಯ ಸಿಗಲಿದೆ.
ಅಮಲಕಿ ಏಕಾದಶಿಯ ಪೂಜಾ ವಿಧಿಗಳೇನು?
- ಅಮಲಕಿ ಏಕಾದಶಿಯಂದು ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡಿ, ಪೂಜೆಗೆ ಸಿದ್ಧತೆಗಳನ್ನು ಮಾಡಿ ಉಪವಾಸಕ್ಕೆ ಸಂಕಲ್ಪ ಮಾಡಬೇಕು.
- ನಂತರ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ
- ನೆಲ್ಲಿಕಾಯಿ ಹಾಗೂ ತುಳಸಿ ಗಿಡವನ್ನು ಹೂವುಗಳಿಂದ ಅಲಂಕರಿಸಿ, ಶ್ರೀ ವಿಷ್ಣುವಿನ ಫೋಟೋ ಬಳಿ ನೆಲ್ಲಿಕಾಯಿ ಇರುವ ಕೊಂಬೆಗಳನ್ನು ಅರ್ಪಿಸಲಾಗುವುದುನೆಲ್ಲಿಕಾಯಿ ಗಿಡದ ಕೆಳಗಡೆ ಕಲಶ ಸ್ಥಾಪಿಸಿ
- ಈ ದಿನ ನೈವೇದ್ಯ ಮಾಡಿದ ಮೇಲೆ ಅದರಲ್ಲಿ ನೆಲ್ಲಿಕಾಯಿ ಇಟ್ಟು ದೇವರಿಗೆ ಅರ್ಪಿಸಿ
- ಶ್ರೀ ವಿಷ್ಣು ಜೊತೆಗೆ ಲಕ್ಷ್ಮಿಗೂ ಪೂಜೆ ಸಲ್ಲಿಸಿ, ಸಂಜೆ ಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ
- ದೇವರಿಗೆ ಇಟ್ಟ ನೈವೇದ್ಯವನ್ನು ಬಡವರಿಗೆ ದಾನ ಮಾಡಿ.
- ನಂತರ ಪಾರಣ ಸಮಯದಲ್ಲಿ ಸ್ವಲ್ಪ ಪ್ರಸಾದ ಬಾಯಿಗೆ ಹಾಕಿ ಉಪವಾಸ ಮುರಿಯಿರಿ.
- ಈ ದಿನ ಬಡವರಿಗೆ ನಿಮ್ಮ ಶಕ್ತಿಗೆ ಅನುಸಾರ ದಾನ ಮಾಡಿ.
ವಿಷ್ಣು ಮಂತ್ರ
ಓಂ ನಮೋ ಭಗವತೇ ವಾಸುದೇವಾಯ
ಅರ್ಥ: ಓ ವಾಸುದೇವನೇ ನಿನಗೆ ನನ್ನ ಪ್ರಣಾಮಗಳು
ವಿಷ್ಣು ಗಾಯತ್ರಿ ಮಂತ್ರ:
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ಒಬ್ಬರ ಜೀವನದ ಅಡೆತಡೆಗಳು ದೂರಾಗುತ್ತದೆ.
ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ ವಿಶ್ವಧಾರಂ ಗಗನಸದ್ರಿಶಂ,
ಮೇಘವರ್ಣಂ ಶುಭಾಂಗಂ ಲಕ್ಷ್ಮಿಂಕಾತಂ ಕಮಲಾನಯನಂ,
ಯೋಗಿಭಿರ್ಧ್ಯಾನಗಮ್ಯಂ ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
ವಿಷ್ಣು ಮಂಗಳಂ ಮಂತ್ರ:
ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡಾಧ್ವಜಾ |
ಮಂಗಳಂ ಪುಂಡರೀಕಾಕ್ಷಾ, ಮಂಗಳಂ ತನ್ನೋಂ ಹರಿಹೀ ||



Click it and Unblock the Notifications