Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
ಪ್ರತಿ ತಿಂಗಳು ಎರಡು ಏಕಾದಶಿ ಬರುತ್ತದೆ, ವರ್ಷದಲ್ಲಿ 24 ಏಕಾದಶಿ. ಈ ಏಕಾದಶಿ ಶ್ರೀ ವಿಷ್ಣುವಿಗೆ ಮೀಸಲಾದ ವಿಶೇಷ ದಿನ, ಆದರೆ ಪ್ರತಿಯೊಂದು ಏಕಾದಶಿಯನ್ನು ಭಿನ್ನವಾಗಿ ಆಚರಿಸಲಾಗುವುದು ಹಾಗೂ ಈ ಏಕಾದಶಿ ಅದರದ್ದೇ ಆದ ಮಹತ್ವ ಹೊಂದಿದೆ. ಈ ಮಾರ್ಚ್ 20ಕ್ಕೆ ಅಮಲಕಿ ಏಕಾದಶಿಯನ್ನು ಆಚರಿಸಲಾಗುವುದು.
ಈ ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ತುಂಬಾನೇ ಮಹತ್ವ ನೀಡಲಾಗಿದೆ, ಪೂಜಾ ಸಮಯ, ಪೂಜಾ ವಿಧಿ ಹಾಗೂ ಅಮಲಕಿ ಏಕಾದಶಿಯ ಮಹತ್ವವವೇನು ಎಂದು ನೋಡೋಣ ಬನ್ನಿ:

ಅಮಲಕಿ ಏಕಾದಶಿ
ದಿನಾಂಕ: ಮಾರ್ಚ್ 20
ಏಕಾದಶಿ ತಿಥಿ ಪ್ರಾರಂಭ: ಮಾರ್ಚ್ 19 ರಾತ್ರಿ 12:21
ಏಕಾದಶಿ ತಿಥಿ ಮುಕ್ತಾಯ: ಮಾರ್ಚ್ 21 ಮುಂಜಾನೆ 02:22ರವರೆಗೆ
ಪಾರಣ ಸಮಯ: ಮಾರ್ಚ್ 21, ಬೆಳಗ್ಗೆ 08:58ರ ನಂತರ
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ಪೂಜೆ
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ನೆಲ್ಲಿಕಾಯಿ ಗಿಡವನ್ನು ಮನೆ ತಂದು ನೆಟ್ಟು ಅಥವಾ ಮನೆಯಲ್ಲಿರುವ ನೆಲ್ಲಿಕಾಯಿ ಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುವುದು.
ಅಮಲಕಿ ಏಕಾದಶಿಯಂದು ನೆಲ್ಲಿಕಾಯಿ ಪೂಜಿಸುವುದು ಏಕೆ?
ನೆಲ್ಲಿಕಾಯಿ ಗಿಡವು ಶ್ರೀ ವಿಷ್ಣುವಿಗೆ ಪ್ರಿಯವಾದ ಗಿಡ, ಈ ಗಿಡದಲ್ಲಿ ಮಹಾಲಕ್ಷ್ಮಿ ಹಾಗೂ ಶ್ರೀ ವಿಷ್ಣು ನೆಲೆಸಿರುತ್ತಾರೆ ಎಂದು ಹೇಳಲಾಗುವುದು. ಹಾಗಾಗಿ ಅಮಲಕಿ ಏಕಾದಶಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು.
ಸಂತಾನ ಭಾಗ್ಯ ದೊರೆಯುವುದು
ಅಮಲಕಿ ಏಕಾದಶಿಯ ಮಹತ್ವವೆಂದರೆ ದಂಪತಿ ಸಂತಾನ ಭಾಗ್ಯಕ್ಕಾಗಿ ಉಪವಾಸವಿದ್ದು ಈ ಏಕಾದಶಿಯನ್ನು ಆಚರಿಸಲಾಗುವುದು. ಈ ಏಕಾದಶಿ ಆಚರಿಸುವುದರಿಂದ ಸಂತಾ ಭಾಗ್ಯ ಲಭಿಸುವುದು ಎಂದು ನಂಬಲಾಗಿದೆ. ಈ ದಿನ ಯಾರು ಶ್ರೀ ವಿಷ್ಣುವನ್ನು ಪೂಜಿಸುತ್ತಾರೆ ಅವರಿಗೆ ಪುಣ್ಯ ಕ್ಷೇತ್ರಗಳಿಗೆ ಹೋದಾಗ ಸಿಗುವ, ಯಜ್ಞ -ಯಾಗ ಮಾಡಿದಾಗ ಸಿಗುವ ಪುಣ್ಯ ಸಿಗಲಿದೆ.
ಅಮಲಕಿ ಏಕಾದಶಿಯ ಪೂಜಾ ವಿಧಿಗಳೇನು?
- ಅಮಲಕಿ ಏಕಾದಶಿಯಂದು ಸೂರ್ಯೋದಯಕ್ಕೆ ಮುನ್ನ ಎದ್ದು ಸ್ನಾನ ಮಾಡಿ, ಪೂಜೆಗೆ ಸಿದ್ಧತೆಗಳನ್ನು ಮಾಡಿ ಉಪವಾಸಕ್ಕೆ ಸಂಕಲ್ಪ ಮಾಡಬೇಕು.
- ನಂತರ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ
- ನೆಲ್ಲಿಕಾಯಿ ಹಾಗೂ ತುಳಸಿ ಗಿಡವನ್ನು ಹೂವುಗಳಿಂದ ಅಲಂಕರಿಸಿ, ಶ್ರೀ ವಿಷ್ಣುವಿನ ಫೋಟೋ ಬಳಿ ನೆಲ್ಲಿಕಾಯಿ ಇರುವ ಕೊಂಬೆಗಳನ್ನು ಅರ್ಪಿಸಲಾಗುವುದುನೆಲ್ಲಿಕಾಯಿ ಗಿಡದ ಕೆಳಗಡೆ ಕಲಶ ಸ್ಥಾಪಿಸಿ
- ಈ ದಿನ ನೈವೇದ್ಯ ಮಾಡಿದ ಮೇಲೆ ಅದರಲ್ಲಿ ನೆಲ್ಲಿಕಾಯಿ ಇಟ್ಟು ದೇವರಿಗೆ ಅರ್ಪಿಸಿ
- ಶ್ರೀ ವಿಷ್ಣು ಜೊತೆಗೆ ಲಕ್ಷ್ಮಿಗೂ ಪೂಜೆ ಸಲ್ಲಿಸಿ, ಸಂಜೆ ಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ
- ದೇವರಿಗೆ ಇಟ್ಟ ನೈವೇದ್ಯವನ್ನು ಬಡವರಿಗೆ ದಾನ ಮಾಡಿ.
- ನಂತರ ಪಾರಣ ಸಮಯದಲ್ಲಿ ಸ್ವಲ್ಪ ಪ್ರಸಾದ ಬಾಯಿಗೆ ಹಾಕಿ ಉಪವಾಸ ಮುರಿಯಿರಿ.
- ಈ ದಿನ ಬಡವರಿಗೆ ನಿಮ್ಮ ಶಕ್ತಿಗೆ ಅನುಸಾರ ದಾನ ಮಾಡಿ.
ವಿಷ್ಣು ಮಂತ್ರ
ಓಂ ನಮೋ ಭಗವತೇ ವಾಸುದೇವಾಯ
ಅರ್ಥ: ಓ ವಾಸುದೇವನೇ ನಿನಗೆ ನನ್ನ ಪ್ರಣಾಮಗಳು
ವಿಷ್ಣು ಗಾಯತ್ರಿ ಮಂತ್ರ:
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ಒಬ್ಬರ ಜೀವನದ ಅಡೆತಡೆಗಳು ದೂರಾಗುತ್ತದೆ.
ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ ವಿಶ್ವಧಾರಂ ಗಗನಸದ್ರಿಶಂ,
ಮೇಘವರ್ಣಂ ಶುಭಾಂಗಂ ಲಕ್ಷ್ಮಿಂಕಾತಂ ಕಮಲಾನಯನಂ,
ಯೋಗಿಭಿರ್ಧ್ಯಾನಗಮ್ಯಂ ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
ವಿಷ್ಣು ಮಂಗಳಂ ಮಂತ್ರ:
ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡಾಧ್ವಜಾ |
ಮಂಗಳಂ ಪುಂಡರೀಕಾಕ್ಷಾ, ಮಂಗಳಂ ತನ್ನೋಂ ಹರಿಹೀ ||



Click it and Unblock the Notifications