Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಆ್ಯಂಕರ್ ಅನುಶ್ರೀ ವಿವಾಹ: ಆಕೆಯ ಆಸ್ತಿ ಎಷ್ಟು ಗೊತ್ತಾ?
ನಟಿ, ನಿರೂಪಕಿಯಾಗಿರುವ ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆಗೆ ಸದ್ಯ ಬ್ರೇಕ್ ಬಿದ್ದಿದೆ. ಅವರು ಮದುವೆಯಾಗುವುದಾಗಿ ಹರಿದಾಡುತ್ತಿದ್ದ ಸುದ್ದಿಗೆ ಸಾಕ್ಷಿಯಾಗಿ ಈಗ ಅವರ ವಿವಾಹ ಆಮಂತ್ರಣ ಪತ್ರಿಕೆ ಹೊರಬಿದ್ದಿದೆ. ಆ್ಯಂಕರ್ ಅನುಶ್ರೀ ವಿವಾಹವಾಗುವುದಾಗಿ ತಿಳಿಸಿದ್ದು, ಇದೇ ಆಗಸ್ಟ್ 28ರಂದು ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದ ರೆಸಾರ್ಟ್ಲ್ಲಿ ಅವರ ವಿವಾಹ ನೆರವೇರುತ್ತಿದೆ.
ಕೊಡಗು ಮೂಲದ ಉದ್ಯಮಿಯಾಗಿರುವ ರೋಷನ್ ಎಂಬುವರ ಜೊತೆಗೆ ಅವರ ವಿವಾಹ ನಿಶ್ಚಯವಾಗಿದೆ. ಮೊದಲೇ ಇಬ್ಬರಿಗೂ ಪರಿಚಯವಿತ್ತು ಎಂದು ಕೂಡ ತಿಳಿದುಬಂದಿದೆ. ಅನಂತರ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವಿವಾಹವಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಅವರ ವಿವಾಹ ಆಹ್ವಾನ ಪತ್ರಿಕೆ ಕೂಡ ಬಹಳ ಸರಳತೆಯಿಂದ ಕೂಡಿದೆ. ಅದರಲ್ಲಿ 'ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ' ಎಂದು ಲಗ್ನ ಪತ್ರಿಕೆಯಲ್ಲಿ ಅನುಶ್ರೀ ಬರೆಸಿದ್ದಾರೆ. ಮಂಗಳೂರಿನ ಸುರತ್ಕಲ್ನಲ್ಲಿ ಜನಿಸಿದ್ದ ಅನುಶ್ರೀ ನಿರೂಪಣೆಯಿಂದ ಕಿರುತೆರೆಯಲ್ಲಿ ಪ್ರಸಿದ್ಧಿ ಪಡೆದರು.
ಆರಂಭದ ದಿನದಲ್ಲಿ ಅವರು ಹಲವು ವೇದಿಕೆಗಳಲ್ಲಿ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದರು. ಇದೆಲ್ಲದರ ನಡುವೆ ಸಿನಿಮಾಗಳಲ್ಲು ಕೂಡ ನಟಿಸಿದ್ದರು. ಬೆಂಕಿಪಟ್ನ ಎಂಬ ಸಿನಿಮಾದಲ್ಲಿನ ಅವರ ನಟನೆ ಎಲ್ಲರ ಗಮನ ಸೆಳೆದಿತ್ತು. ಹಾಗೆ ಖಾಸಗಿ ಕಾರ್ಯಕ್ರಮಗಳಲ್ಲೂ ಅವರು ಕಾಣಿಸಿಕೊಳ್ಳುತ್ತಿದ್ದರು. ಹಾಗೆ ಅವರು ಕನ್ನಡ ನಂಬರ್ ಒನ್ ನಿರೂಪಕಿಯಾಗಿಯೂ ಹೆಸರು ಗಳಿಸಿದರು. ಹಾಗೆ ಬಿಗ್ ಬಾಸ್ ಸ್ಪರ್ಧಿಯಾಗಿಯೂ ಅವರು ಕಾಣಿಸಿಕೊಂಡಿದ್ದರು.
ನಿರೂಪಕಿ ಅನುಶ್ರೀ ಅವರು ಮದುವೆಯಾಗುತ್ತಿರುವ ಹುಡುಗ ರೋಷನ್ ಅವರು ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಕೊಡಗು ಮೂಲದ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ.
ಆ್ಯಂಕರ್ ಅನುಶ್ರೀ ಆಸ್ತಿ ಎಷ್ಟಿದೆ?
ನಟಿ, ನಿರೂಪಕಿಯಾಗಿ ಅನುಶ್ರೀ ಹಲವು ವರ್ಷಗಳಿಂದಲು ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆ ಸಿನಿಮಾಗಳಲ್ಲು ನಟಿಸಿದ್ದಾರೆ. ಆದ್ರೆ ಅವರ ಆಸ್ತಿ ಸಂಬಂಧವಾಗಿ ಆವರು ಎಲ್ಲಿಯೂ ಬಹಿರಂಗ ಪಡಿಸಿಲ್ಲ. ಮೂಲಗಳ ಪ್ರಕಾರ ಆಸ್ತಿ ಸುಮಾರು 50 ಕೋಟಿ ರೂಪಾಯಿ ಇರಬಹುದು ಎಂದು ಹೇಳಲಾಗುತ್ತದೆ. ಹಾಗೆ ಬೆಂಗಳೂರಿನಲ್ಲಿ ಮನೆ, ಹಾಗೂ ಹುಟ್ಟೂರಿನಲ್ಲಿ ಒಂದು ಮನೆ ಇದೆ. ಹಾಗೆ ಇತ್ತೀಚಿಗೆ ದುಬಾರಿ ಬೆಲೆಯ ಕಾರು ಕೂಡ ಖರೀದಿಸಿದ್ದರು.
ಆಮಂತ್ರಣ ಪತ್ರಿಕೆಯಲ್ಲಿ ಏನಿದೆ?
ಅನುಶ್ರೀ ವಿವಾಹ ಆಮಂತ್ರಣ ಪತ್ರಿಕೆ ಸರಳವಾಗಿದೆ. ಹಾಗೆ ಇಂಗ್ಕೀಷ್ ಹಾಗೂ ಕನ್ನಡದಲ್ಲೂ ಮುದ್ರಿಸಲಾಗಿದೆ. 'ನೀವೆಲ್ಲ ಕೇಳುತ್ತಿದ್ದ ಪ್ರಶ್ನೆಗೆ ಈಗ ಉತ್ತರ, ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ' ಎಂದು ಆರಂಭದಲ್ಲಿ ನೋಡಬಹುದು. ಸರಳವಾಗಿ ಮುಹೂರ್ಥ, ಸಮಯದ ಮಾಹಿತಿ ನೀಡಲಾಗಿದೆ. ಹಾಗೆ ನಿಮ್ಮ ಆಗಮನವೇ ಉಡುಗೊರೆ ಎಂದು ಸಹ ಮುದ್ರಿಸಲಾಗಿದೆ.



Click it and Unblock the Notifications