Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ವಾರದಲ್ಲಿ ಗುರುವಾರವನ್ನು ಅತ್ಯಂತ ಅದೃಷ್ಟದ ದಿನವೆಂದು ಹೇಳುತ್ತಾರೆ, ಏಕೆ?
ವಾರದ ಏಳೂ ದಿನಗಳಲ್ಲಿ ಅತ್ಯಂತ ಶುಭ ದಿನ ಗುರುವಾರ ಎಂದು ಹೇಳಲಾಗುವುದು. ಈ ಗುರುವಾರ ಏಕೆ ಇತರ 6 ದಿನಕ್ಕಿಂತ ವಿಶೇಷವಾದ ದಿನ ವೈದಿಕ ಶಾಸ್ತ್ರದಲ್ಲಿ ಏನು ಹೇಳಲಾಗಿದ ಎಂದು ನೋಡೋಣ ಬನ್ನಿ:

ವಾರದ ದಿನಗಳಲ್ಲಿ ಗ್ರಹಗಳ ಪ್ರಭಾವ
ಪ್ರತಿಯೊಂದು ದಿನವನ್ನು ಒಂದೊಂದು ಗ್ರಹ ಆಳುತ್ತದೆ, ಭಾನುವಾರರ ಅಧಿಪತಿ ಸೂರ್ಯ ದೇವ. ಸೋಮವಾರದ ಅಧಿಪತಿ ಚಂದ್ರ, ಮಂಗಳವಾರದ ಅಧಿಪತಿ ಮಂಗಳ ಗ್ರಹ, ಬುಧವಾರದ ಗ್ರಹ ಬುಧ, ಗುರುವಾರದ ಗ್ರಹ ಗುರು, ಶುಕ್ರವಾರದ ಅಧಿಪತಿ ಶುಕ್ರ, ಶನಿವಾರದ ಅದಿಪತಿ ಶನಿಯಾಗಿದೆ. ಗುರು ಅದೃಷ್ಟವನ್ನು ಬೆಂಬಲಿಸುವ ಗ್ರಹವಾಗಿದೆ.
ಗುರುವಾರ ಶ್ರೀವಿಷ್ಣುವಿನ ಪೂಜೆಗೆ ವಿಶೇಷವಾದ ದಿನ
ಗುರುವಾರ ಶ್ರೀ ವಿಷ್ಣುವಿನ ಪೂಜೆಗೆ ತುಂಬಾನೇ ವಿಶೇಷವಾದ ದಿನ, ಈ ದಿನ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ ಪೂಜಿಸಬೇಕು, ವಿಷ್ಣು ಸಹಸ್ರನಾಮ ಪಠಿಸಬೇಕು ಎಂದು ಹೇಳಲಾಗುವುದು. ಶ್ರೀ ವಿಷ್ಣುವನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗುವುದು.
ಗುರು ರಾಯರ ಪೂಜೆಯನ್ನು ಮಾಡಲಾಗುವುದು
ಗುರುವಾರದಂದು ಗುರು ರಾಯರ ಪೂಜೆಯನ್ನು ಮಾಡಲಾಗುವುದು. ಗುರುವಾರದ ದಿನ ಶ್ರೀ ರಾಯರ ಪೂಜೆಗೆ ಒಳ್ಳೆಯದು ಎಂದು ಹೇಳಲಾಗುವುದು. ಈ ದಿನ ಉಪವಾಸವಿದ್ದು ಗುರು ರಾಯರ ಪೂಜೆ ಮಾಡಲಾಗುವುದು. ಮಣೆಯನ್ನು ಸ್ವಚ್ಛ ಮಾಡಿ, ಅದರ ಮೇಲೆ ಶ್ರೀ ರಾಘವೇಂದ್ರ ಸ್ವಾಮಿಯ ಫೋಟೋ ಇಟ್ಟು ತುಳಸಿ ಮಾಲೆ, ಹೂವುಗಳನ್ನು ಅರ್ಪಿಸಿ, ದೀಪ ಹಚ್ಚಿ ಶ್ರೀ ರಾಘವೇಂದ್ರ ಸ್ವಾಮಿಯನ್ನು ಆರಾಧಿಸಿ.
ಪೂಜ್ಯಾಯಾ ರಾಘವೇಂದ್ರಾಯ
ಸತ್ಯಧರ್ಮ ರಧಾಯಚ
ಭಜತಾಂ ಕಲ್ಪವೃಕ್ಷಯಾ ನಮತಾಂ
ಶ್ರೀ ಕಾಮಧೇನುವೇ
ಈ ಮಂತ್ರ ಪಠಣೆ ಮಾಡಿ.
ಗುರುವಾರದಂದು ಈ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು?
ಗುರುವಾರದಂದು ಕೂದಲು ಕತ್ತರಿಸಬಾರದು, ಗಡ್ಡ-ಮೀಸೆ ಕತ್ತರಿಸಬಾರದು ಅಥವಾ ಶೇವ್ ಮಾಡಬಾರದು, ಬಟ್ಟೆ ಒಗೆಯಬಾರದು, ಕೂದಲು ತೊಳೆಯಬಾರದು ಎಂದು ಹೇಳಲಾಗುವುದು, ಇದನ್ನು ತುಂಬಾ ಜನರು ಆಚರಿಸುತ್ತಾರೆ.
ಗುರುವಾರ ವ್ರತದ ಮಹತ್ವವೇನು?
- ಗುರುವಾರ ಉಪವಾಸ ಮಾಡುವುದರಿಂದ ಈ ಪ್ರಯೋಜನಗಳಿವೆ
- ಗುರುವಾರ ಉಪವಾಸ ಮಾಡುವುದರಿಂದ ನಿಮ್ಮ ಸಂತೋಷ, ಸಮೃದ್ಧಿ ಹೆಚ್ಚಾಗಲಿದೆ
- ಶ್ರೀವಿಷ್ಣುವಿನ, ರಾಯರ ಕೃಪೆಗೆ ಪಾತ್ರರಾಗಬಹುದು.
- ಈ ದಿನ ಉಪವಾಸ ಮಾಡುವಾಗ ಹಾಲು, ಹಣ್ಣುಗಳನ್ನು ಸೇವಿಸಬಹುದು.
- ಗುರುವಾರ ಉಪವಾಸ ಮಾಡುವಾಗ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ ಉಪವಾಸ ಸಂಕಲ್ಪ ತೆಗೆದುಕೊಳ್ಳಬೇಕು.



Click it and Unblock the Notifications