Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಆಷಾಢದ ಮಹತ್ವವೇನು..? ಜುಲೈನಲ್ಲಿ ಆಷಾಢ ಆಚರಿಸೋದ್ಯಾಕೆ..?
ಹಿಂದೂ ಕ್ಯಾಲೆಂಡರ್ನ 4ನೇ ತಿಂಗಳು ಆಷಾಢ ಮಾಸವಾಗಿರಲಿದೆ. ಈ ತಿಂಗಳಿನಲ್ಲಿ ಕುಮಾರ ಷಷ್ಠಿ, ಶಮಿ ಗೌರಿ ವ್ರತ, ಭಾನು ಸಪ್ತಮಿ, ಚಾತುರ್ಮಾಸ ವ್ರತ, ಭೀಮನ ಅಮವಾಸ್ಯೆ ಹೀಗೆ ಪ್ರಮುಖ ಆಚರಣೆಗಳು ಸಹ ಬರುತ್ತವೆ. 2024ರಂದು ಜುಲೈ ತಿಂಗಳಿನಲ್ಲಿ ಆಷಾಢ ಮಾಸ ಆರಂಭಗೊಳ್ಳುತ್ತಿದೆ. ಹಾಗಾದ್ರೆ ಯಾವಾಗ ಆಷಾಢ ಮಾಸ ಆರಂಭವಾಗುತ್ತದೆ. ಯಾವ ತಿಂಗಳಿನಲ್ಲಿ ಕೊನೆಯಾಗಲಿದೆ ಎಂಬುದನ್ನು ನಾವಿಂದು ತಿಳಿಯೋಣ.
ಆಷಾಢ ಮಾಸ ಆರಂಭಗೊಂಡರೆ ಶುಭ ಕಾರ್ಯಗಳು ಕಡಿಮೆಯಾಗುತ್ತವೆ. ಹಿಂದೂಗಳ ಈ ಮಾಸದಲ್ಲಿ ಯಾವ ಶುಭ ಕಾರ್ಯಕ್ಕೂ ಮುಂದಾಗುವುದಿಲ್ಲ. ಜೊತೆಗೆ ಹಲವು ಕಠಿಣ ನಿಯಮಗಳನ್ನು ಅನುಸರಿಸುತ್ತಾರೆ. ಪ್ರತಿ ವಾರದಲ್ಲಿ ಒಂದು ದಿನ ಉಪವಾಸ, ಮಾಂಸಾಹಾರ ತ್ಯಜಿಸುವುದು, ದೇವರಲ್ಲಿ ಕಠಿಣ ವ್ರತಾಚರಣೆಯಂತಹ ಕಾರ್ಯದಲ್ಲಿ ಅವರು ತೊಡಗುತ್ತಾರೆ.

ಆಷಾಢ ಮಾಸ 2024
ಹಿಂದೂ ಕ್ಯಾಲೆಂಡರ್ ಪ್ರಕಾರ ಹುಣ್ಣಿಮೆಯ ದಿನ ಚಂದ್ರನು ಉತ್ತರಾಷಾಢ ಅಥವಾ ಪೂರ್ವಾಷಾಢ ನಕ್ಷತ್ರಗಳಲ್ಲಿ ಇರುವಾಗ ಆಷಾಢ ಮಾಸ ಎಂದು ಕರೆಯಲಾಗುತ್ತದೆ. ಸೂರ್ಯ ಮಿಥುನ ರಾಶಿಯಿಂದ ಕರ್ಕಾಟಕಕ್ಕೆ ಪ್ರವೇಶಿಸುತ್ತಾನೆ. ಇದರೊಂದಿಗೆ ಉತ್ತರಾಯಣ ಪುಣ್ಯಕಾಲ ಮುಗಿದು ದಕ್ಷಿಣಾಯಣ ಪ್ರಾರಂಭವಾಗುತ್ತದೆ.
ಈ ವರ್ಷ ಆಷಾಢ ಮಾಸವು ಜುಲೈ 6 ರಿಂದ ಆರಂಭಗೊಂಡು ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ತಿಂಗಳು ಶೂನ್ಯ ತಿಂಗಳು ಅಂತಲೂ ಕರೆಯಲಾಗುತ್ತದೆ.
ಆಷಾಢ ಮಾಸದ ಮಹತ್ವವೇನು?
ಆಷಾಢ ಮಾಸ ದಕ್ಷಿಣಾಯನದಿಂದ ಪ್ರಾರಂಭವಾಗುತ್ತದೆ. ಸೂರ್ಯ ದಕ್ಷಿಣಾಭಿಮುಖವಾಗಿ ಚಲಿಸಲು ಆರಂಭಿಸುತ್ತಾನೆ. ಉತ್ತರಾಯಣ ಪ್ರಾರಂಭವಾಗಿ 6 ತಿಂಗಳ ನಂತರ ದಕ್ಷಿಣಾಯನ ಪ್ರಾರಂಭವಾಗುತ್ತದೆ. ಆಷಾಢ ಮಾಸದಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಲು ಮುಂದಾಗುತ್ತಾರೆ. ಈ ತಿಂಗಳಿನಲ್ಲಿ ಮದುವೆ, ಗೃಹ ಪ್ರವೇಶ ಮುಂತಾದ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಗಂಡ-ಹೆಂಡತಿ ಜೊತೆಗೆ ಇರುವುದಿಲ್ಲ. ಈ ತಿಂಗಳಿನಲ್ಲಿ ನವ ವಿವಾಹಿತೆ ತನ್ನ ತವರು ಮನೆಗೆ ಹೋಗಿ ಆಷಾಢ ಮುಗಿದ ಬಳಿಕ ಗಂಡನ ಮನೆಗೆ ಮರಳುವ ಆಚರಣೆಯು ಇದೆ.
ಮೈಸೂರು ಚಾಮುಂಡೇಶ್ವರಿ ದೇವಿಯ ಜನ್ಮ ದಿನವು ಆಷಾಡ ಮಾಸದಲ್ಲೇ ಬರುತ್ತದೆ. ಆಷಾಡ ಮಾಸದಲ್ಲಿ ಗುರುವಿನ ಪೂಜೆಯನ್ನು ಮಾಡಿದರೆ ಹೆಚ್ಚು ಫಲ ಸಿಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅಲ್ಲದೇ ದೇವಿಯ ಪೂಜೆ ಮಾಡುವುದು ಕೂಡ ತುಂಬಾ ಮಂಗಳಕರ ಮತ್ತು ಶ್ರೇಯಸ್ಕರ ಎಂದು ನಂಬಲಾಗಿದೆ.
ಆಷಾಢ ಮಾಸದಲ್ಲಿ ಕೆಲವು ವಿಶೇಷ ವ್ರತ ಹಾಗೂ ಪೂಜೆಗಳನ್ನು ಕೈಗೊಳ್ಳಲಾಗುವುದು. ಅವುಗಳು ಅತ್ಯಂತ ಮಹತ್ವ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡಿವೆ. ದೇವರ ಈ ಶುಭ ಕಾರ್ಯವನ್ನು ಕೈಗೊಳ್ಳುವುದರಿಂದ ಅನೇಕ ಉತ್ತಮ ಫಲಗಳು ದೊರೆಯುತ್ತವೆ. ಜೀವನವೂ ಸುಂದರವಾಗಿರುತ್ತದೆ ಎಂದು ಹೇಳಲಾಗುವುದು. ಈ ಮಾಸದಲ್ಲೇ ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ.
ಇಂದ್ರನು ಗೌತಮರಿಂದ ಸಹಸ್ರಾಕ್ಷನಾಗು ಎಂಬ ಶಾಪ ಪಡೆದ, ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ 'ಸೋಮೇಶ್ವರ ಜಯಂತಿ' ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದ ಎಂದು ಹೇಳಲಾಗುತ್ತದೆ.
ವರ್ಷ ಪೂರ್ತಿ ನಮ್ಮ ಜೀವನದ ಬಗ್ಗೆ ಸಾಕಷ್ಟು ಕನಸು ಹಾಗೂ ಅದರ ಗುಂಗಿನಲ್ಲಿಯೇ ಇರುತ್ತೇವೆ. ವರ್ಷದ ಒಂದು ಸಮಯವಾದರೂ ನಮ್ಮ ಒಳಿತಿಗಾಗಿ ಇರುವ ದೇವತೆಗಳ ಆರಾಧನೆ ಮಾಡಬೇಕು. ಒಂದು ತಿಂಗಳನ್ನು ದೇವರಿಗಾಗಿ ಮೀಸಲಾಗಿಟ್ಟರೆ, ಎಲ್ಲರೂ ತಮ್ಮ ಸ್ವಾರ್ಥಗಳನ್ನು ತೊರೆದು, ದೇವರ ನಾಮವನ್ನು ಸ್ಮರಿಸುತ್ತಾ ಪೂಜೆ, ವ್ರತ ಹಾಗೂ ಹವನಗಳನ್ನು ಕೈಗೊಳ್ಳುತ್ತಾರೆ. ಇದರಿಂದ ದೇವಾನು ದೇವತೆಗಳು ಸಂತೃಪ್ತರಾಗುತ್ತಾರೆ ಎಂದು ನಂಬಲಾಗಿದೆ.



Click it and Unblock the Notifications
