Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ!
ಆಷಾಢದ ಮಹತ್ವವೇನು..? ಜುಲೈನಲ್ಲಿ ಆಷಾಢ ಆಚರಿಸೋದ್ಯಾಕೆ..?
ಹಿಂದೂ ಕ್ಯಾಲೆಂಡರ್ನ 4ನೇ ತಿಂಗಳು ಆಷಾಢ ಮಾಸವಾಗಿರಲಿದೆ. ಈ ತಿಂಗಳಿನಲ್ಲಿ ಕುಮಾರ ಷಷ್ಠಿ, ಶಮಿ ಗೌರಿ ವ್ರತ, ಭಾನು ಸಪ್ತಮಿ, ಚಾತುರ್ಮಾಸ ವ್ರತ, ಭೀಮನ ಅಮವಾಸ್ಯೆ ಹೀಗೆ ಪ್ರಮುಖ ಆಚರಣೆಗಳು ಸಹ ಬರುತ್ತವೆ. 2024ರಂದು ಜುಲೈ ತಿಂಗಳಿನಲ್ಲಿ ಆಷಾಢ ಮಾಸ ಆರಂಭಗೊಳ್ಳುತ್ತಿದೆ. ಹಾಗಾದ್ರೆ ಯಾವಾಗ ಆಷಾಢ ಮಾಸ ಆರಂಭವಾಗುತ್ತದೆ. ಯಾವ ತಿಂಗಳಿನಲ್ಲಿ ಕೊನೆಯಾಗಲಿದೆ ಎಂಬುದನ್ನು ನಾವಿಂದು ತಿಳಿಯೋಣ.
ಆಷಾಢ ಮಾಸ ಆರಂಭಗೊಂಡರೆ ಶುಭ ಕಾರ್ಯಗಳು ಕಡಿಮೆಯಾಗುತ್ತವೆ. ಹಿಂದೂಗಳ ಈ ಮಾಸದಲ್ಲಿ ಯಾವ ಶುಭ ಕಾರ್ಯಕ್ಕೂ ಮುಂದಾಗುವುದಿಲ್ಲ. ಜೊತೆಗೆ ಹಲವು ಕಠಿಣ ನಿಯಮಗಳನ್ನು ಅನುಸರಿಸುತ್ತಾರೆ. ಪ್ರತಿ ವಾರದಲ್ಲಿ ಒಂದು ದಿನ ಉಪವಾಸ, ಮಾಂಸಾಹಾರ ತ್ಯಜಿಸುವುದು, ದೇವರಲ್ಲಿ ಕಠಿಣ ವ್ರತಾಚರಣೆಯಂತಹ ಕಾರ್ಯದಲ್ಲಿ ಅವರು ತೊಡಗುತ್ತಾರೆ.

ಆಷಾಢ ಮಾಸ 2024
ಹಿಂದೂ ಕ್ಯಾಲೆಂಡರ್ ಪ್ರಕಾರ ಹುಣ್ಣಿಮೆಯ ದಿನ ಚಂದ್ರನು ಉತ್ತರಾಷಾಢ ಅಥವಾ ಪೂರ್ವಾಷಾಢ ನಕ್ಷತ್ರಗಳಲ್ಲಿ ಇರುವಾಗ ಆಷಾಢ ಮಾಸ ಎಂದು ಕರೆಯಲಾಗುತ್ತದೆ. ಸೂರ್ಯ ಮಿಥುನ ರಾಶಿಯಿಂದ ಕರ್ಕಾಟಕಕ್ಕೆ ಪ್ರವೇಶಿಸುತ್ತಾನೆ. ಇದರೊಂದಿಗೆ ಉತ್ತರಾಯಣ ಪುಣ್ಯಕಾಲ ಮುಗಿದು ದಕ್ಷಿಣಾಯಣ ಪ್ರಾರಂಭವಾಗುತ್ತದೆ.
ಈ ವರ್ಷ ಆಷಾಢ ಮಾಸವು ಜುಲೈ 6 ರಿಂದ ಆರಂಭಗೊಂಡು ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ತಿಂಗಳು ಶೂನ್ಯ ತಿಂಗಳು ಅಂತಲೂ ಕರೆಯಲಾಗುತ್ತದೆ.
ಆಷಾಢ ಮಾಸದ ಮಹತ್ವವೇನು?
ಆಷಾಢ ಮಾಸ ದಕ್ಷಿಣಾಯನದಿಂದ ಪ್ರಾರಂಭವಾಗುತ್ತದೆ. ಸೂರ್ಯ ದಕ್ಷಿಣಾಭಿಮುಖವಾಗಿ ಚಲಿಸಲು ಆರಂಭಿಸುತ್ತಾನೆ. ಉತ್ತರಾಯಣ ಪ್ರಾರಂಭವಾಗಿ 6 ತಿಂಗಳ ನಂತರ ದಕ್ಷಿಣಾಯನ ಪ್ರಾರಂಭವಾಗುತ್ತದೆ. ಆಷಾಢ ಮಾಸದಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಲು ಮುಂದಾಗುತ್ತಾರೆ. ಈ ತಿಂಗಳಿನಲ್ಲಿ ಮದುವೆ, ಗೃಹ ಪ್ರವೇಶ ಮುಂತಾದ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಗಂಡ-ಹೆಂಡತಿ ಜೊತೆಗೆ ಇರುವುದಿಲ್ಲ. ಈ ತಿಂಗಳಿನಲ್ಲಿ ನವ ವಿವಾಹಿತೆ ತನ್ನ ತವರು ಮನೆಗೆ ಹೋಗಿ ಆಷಾಢ ಮುಗಿದ ಬಳಿಕ ಗಂಡನ ಮನೆಗೆ ಮರಳುವ ಆಚರಣೆಯು ಇದೆ.
ಮೈಸೂರು ಚಾಮುಂಡೇಶ್ವರಿ ದೇವಿಯ ಜನ್ಮ ದಿನವು ಆಷಾಡ ಮಾಸದಲ್ಲೇ ಬರುತ್ತದೆ. ಆಷಾಡ ಮಾಸದಲ್ಲಿ ಗುರುವಿನ ಪೂಜೆಯನ್ನು ಮಾಡಿದರೆ ಹೆಚ್ಚು ಫಲ ಸಿಗುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಅಲ್ಲದೇ ದೇವಿಯ ಪೂಜೆ ಮಾಡುವುದು ಕೂಡ ತುಂಬಾ ಮಂಗಳಕರ ಮತ್ತು ಶ್ರೇಯಸ್ಕರ ಎಂದು ನಂಬಲಾಗಿದೆ.
ಆಷಾಢ ಮಾಸದಲ್ಲಿ ಕೆಲವು ವಿಶೇಷ ವ್ರತ ಹಾಗೂ ಪೂಜೆಗಳನ್ನು ಕೈಗೊಳ್ಳಲಾಗುವುದು. ಅವುಗಳು ಅತ್ಯಂತ ಮಹತ್ವ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡಿವೆ. ದೇವರ ಈ ಶುಭ ಕಾರ್ಯವನ್ನು ಕೈಗೊಳ್ಳುವುದರಿಂದ ಅನೇಕ ಉತ್ತಮ ಫಲಗಳು ದೊರೆಯುತ್ತವೆ. ಜೀವನವೂ ಸುಂದರವಾಗಿರುತ್ತದೆ ಎಂದು ಹೇಳಲಾಗುವುದು. ಈ ಮಾಸದಲ್ಲೇ ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ.
ಇಂದ್ರನು ಗೌತಮರಿಂದ ಸಹಸ್ರಾಕ್ಷನಾಗು ಎಂಬ ಶಾಪ ಪಡೆದ, ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ 'ಸೋಮೇಶ್ವರ ಜಯಂತಿ' ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದ ಎಂದು ಹೇಳಲಾಗುತ್ತದೆ.
ವರ್ಷ ಪೂರ್ತಿ ನಮ್ಮ ಜೀವನದ ಬಗ್ಗೆ ಸಾಕಷ್ಟು ಕನಸು ಹಾಗೂ ಅದರ ಗುಂಗಿನಲ್ಲಿಯೇ ಇರುತ್ತೇವೆ. ವರ್ಷದ ಒಂದು ಸಮಯವಾದರೂ ನಮ್ಮ ಒಳಿತಿಗಾಗಿ ಇರುವ ದೇವತೆಗಳ ಆರಾಧನೆ ಮಾಡಬೇಕು. ಒಂದು ತಿಂಗಳನ್ನು ದೇವರಿಗಾಗಿ ಮೀಸಲಾಗಿಟ್ಟರೆ, ಎಲ್ಲರೂ ತಮ್ಮ ಸ್ವಾರ್ಥಗಳನ್ನು ತೊರೆದು, ದೇವರ ನಾಮವನ್ನು ಸ್ಮರಿಸುತ್ತಾ ಪೂಜೆ, ವ್ರತ ಹಾಗೂ ಹವನಗಳನ್ನು ಕೈಗೊಳ್ಳುತ್ತಾರೆ. ಇದರಿಂದ ದೇವಾನು ದೇವತೆಗಳು ಸಂತೃಪ್ತರಾಗುತ್ತಾರೆ ಎಂದು ನಂಬಲಾಗಿದೆ.



Click it and Unblock the Notifications
