Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications