Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications