Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications