Latest Updates
-
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications