Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications
