Latest Updates
-
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ!
ಆಷಾಢ ಶುಕ್ರವಾರದಲ್ಲಿ ಚಾಮುಂಡೇಶ್ವರಿ ಪೂಜೆ ಹಾಗೂ ಲಕ್ಷ್ಮಿ ಪೂಜೆಯ ಮಹತ್ವವೇನು?
ಆಷಾಢ ಮಾಸ ಶುರುವಾಗಿದೆ, ಜುಲೈ 7ರಿಂದ ಶುರುವಾದ ಆಷಾಢ ಮಾಸ ಆಗಸ್ಟ್ 4ಕ್ಕೆ ಮುಕ್ತಾಯವಾಗಲಿದೆ. ಆಷಾಢ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ. ಈ ಮಾಸದಲ್ಲಿ ಹಲವು ಧಾರ್ಮಿಕ ಕಾರ್ಯಗಳನ್ನು ಮಾಡಲಾಗುವುದು. ಪಿತೃ ತರ್ಪಣ, ವ್ರತಗಳಿಗೆ ತುಂಬಾನೇ ಪ್ರಾಮುಖ್ಯತೆ ಇದೆ, ಅದರಲ್ಲಿಯೂ ಆಷಾಢ ಶುಕ್ರವಾರವೆಂದರೆ ತುಂಬಾನೇ ವಿಶೇಷವಾಗಿದೆ:

ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ತಾಯಿ ಚಾಮುಂಡೇಶ್ವರಿ ತನ್ನ ಮಕ್ಕಳನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಆಕೆಯನ್ನು ನಂಬಿದ ಭಕ್ತರ ಬಲವಾದ ನಂಬಿಕೆ. ಪ್ರತಿ ಆಷಾಢ ಶುಕ್ರವಾರ ತಾಯಿ ಚಾಮುಂಡೇಶ್ವರಿ ಭಕ್ತ ಸಾಗರವೇ ಹರಿದು ಬರುತ್ತದೆ.
ಈಗಾಗಲೇ ಸಜ್ಜುಗೊಂಡಿದೆ ಚಾಮುಂಡಿ ಬೆಟ್ಟ
ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇಲ್ಲ, ಎಲ್ಲರೂ ಸಾಮಾನ್ಯ ಸರತಿ ಸಾಲಿನಲ್ಲಿ ಹೋಗಿ ದೇವಿಯ ದರ್ಶನ ಪಡೆಯಬೇಕು, ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಅನುಮತಿ ಇರಲ್ಲ, ಉಚಿತ ಪಾಸ್ ಮೂಲಕವೇ ಚಾಮುಂಡಿ ಬೆಟ್ಟಕ್ಕೆ ತೆರಳಬೇಕು. ಬೆಳಗ್ಗೆ 5ರಿಂದ ರಾತ್ರಿ 8ರವೆಗೆ ಬಸ್ನಲ್ಲಿ ಉಚಿತ ಪ್ರಯಾಣ ಮಾಡಿ ದೇವಿಯ ದರ್ಶನ ಪಡೆಯಬಹುದಾಗಿದೆ.
ಆಷಾಢ ಶುಕ್ರವಾರ ಲಕ್ಷ್ಮಿ ಪೂಜೆಗೂ ಶ್ರೇಷ್ಠ
ಆಷಾಢ ಶುಕ್ರವಾರದಂದು ಲಕ್ಷ್ಮಿ ಪೂಜೆ ಮಾಡುವುದರಿಂದ ಧನ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುವುದು.
ಆಷಾಢದಲ್ಲಿ ಲಕ್ಷ್ಮಿ ಪೂಜೆಯನ್ನು ಆಷಾಢ ಶುಕ್ಲ ದಶಮಿಯಂದು ಲಕ್ಷ್ಮಿ ಪೂಜೆ ಪ್ರಾರಂಭಿಸಿ ಶ್ರಾವಣ ಮಾಸದ ಶುಕ್ಲ ದಶಮಿವರೆಗೆ ಲಕ್ಷ್ಮಿ ಪೂಜೆಯ ವ್ರತ ಕೈಗೊಳ್ಳುತ್ತಾರೆ.
ಈ ದಿನ ಸಾತ್ವಿಕ ಆಹಾರ ಮಾತ್ರ ತೆಗೆದುಕೊಳ್ಳಬೇಕು. ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಲಕ್ಷ್ಮಿ ಸಹಸ್ರನಾಮ ಪಠಿಸುವುದರಿಂದ ಒಳಿತಾಗುವುದು.
ಈ ದಿನ ಈ ಮಂತ್ರ ಪಠಣೆ ಮಾಡಿ
ಲಕ್ಷ್ಮೀ ಬೀಜ ಮಂತ್ರ
ಓಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ
ಲಕ್ಷ್ಮೀರಾಗಚ್ಛಾಗಚ್ಚ
ಮಮ ಮಂದಿರೇ ತಿಷ್ಠ ತಿಷ್ಠ ಸ್ವಾಹಾ||
ಈ ವರ್ಷ ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 12
ಜುಲೈ 19
ಜುಲೈ 26
ಆಗಸ್ಟ್ 2



Click it and Unblock the Notifications