Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
15-20 ದಿನ ಅಯೋಧ್ಯೆ ರಾಮನ ದರ್ಶನಕ್ಕೆ ಬರಬೇಡಿ ಎಂದ ಟ್ರಸ್ಟ್..! ಏಕೆ ಗೊತ್ತಾ?
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ವಿಶ್ವದ ಅತೀ ದೊಡ್ಡ ಧಾರ್ಮಿಕ ಸಮ್ಮೇಳನ ಮಹಾ ಕುಂಭಮೇಳೆ ನಡೆಯುತ್ತಿದೆ. ಈಗಾಗಲೇ ಕೋಟಿ ಕೋಟಿ ಭಕ್ತರು ತಿವ್ರೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಮುಖ ನಾಯಕರು ಕೂಡ ಅಲ್ಲಿಗೆ ಭೇಟಿ ನೀಡಿದ್ದಾರೆ. ನಿತ್ಯ ಕೋಟಿ ಕೋಟಿ ಮಂದಿ ಪ್ರಯಾಗ್ರಾಜ್ ತಲುಪುತ್ತಿದ್ದಾರೆ. ಹಾಗೆ ಈ ವರ್ಷದ ವಿಶೇಷ ಕುಂಭ ಆಗಿರುವುದರಿಂದ ದೇಶದ ಮೂಲೆ ಮೂಲೆಯಿಂದ ಹಿಡಿದು ವಿದೇಶಿ ಪ್ರಜೆಗಳು ಕೂಡ ಆಗಮಿಸಿದ್ದಾರೆ.
ಆದ್ರೆ ಪ್ರಯಾಗ್ರಾಜ್ನಲ್ಲಿ ಇಂದು ಕಾಲ್ತುಳಿತ ಉಂಟಾಗಿರುವ ಕುರಿತು ವರದಿಯಾಗಿದೆ. ಭಕ್ತರ ಶಿಬಿರದ ಬಳಿ ಭಾರಿ ಪ್ರಮಾಣದಲ್ಲಿ ಕಾಲ್ತುಳಿತ ಉಂಟಾಗಿದೆ. ಸೆಕ್ಟರ್ 2 ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನಕ್ಕಾಗಿ ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ಸೇರಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಘಟನೆಯಲ್ಲಿ ಹಲವರು ಗಾಯೊಂಡಿದ್ದು, ಸಾವಿನ ಕುರಿತು ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ಆದ್ರೆ ಇದೆಲ್ಲದರ ನಡುವೆ ಅಯೋಧ್ಯೆಯಲ್ಲಿಯೂ ಭಕ್ತರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ರಾಮಜನ್ಮ ಭೂಮಿ ಟ್ರಸ್ಟ್ ಭಕ್ತರಿಗೆ ಎಚ್ಚರಿಕೆ ನೀಡಿದ್ದು, 15ರಿಂದ 20 ದಿನಗಳ ಕಾಲ ಭಕ್ತರು ರಾಮನ ದರ್ಶನಕ್ಕೆ ಬರುವುದನ್ನು ಮೂಂದೂಡುವಂತೆ ಸೂಚಿಸಲಾಗಿದೆ.
ಪ್ರಯಾಗ್ರಾಜ್ನಲ್ಲಿ ಕುಂಭ ಮೇಳ ಹಿನ್ನೆಲೆ ಹಾಗೆ ಇಂದು ಮೌನಿ ಅಮವಾಸ್ಯೆಯ ಕಾರಣಕ್ಕೆ ಸಾವಿರಾರು ಮಂದಿ ಒಂದೇ ಬಾರಿಗೆ ಅಯೋಧ್ಯೆ ತಲುಪಿದ್ದಾರೆ, ಇದರಿಂದ ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ 15ರಿಂದ 20 ದಿನಗಳ ಕಾಲ ಶ್ರೀರಾಮನ ದರ್ಶನಕ್ಕೆ ಬರುವುದನ್ನು ಮುಂದೂಡುವಂತೆ ಭಕ್ತರಿಗೆ ಟ್ರಸ್ಟ್ ಮನವಿ ಮಾಡಿಕೊಂಡಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಉಂಟಾಗಿರುವ ಒತ್ತಡದ ಪರಿಸ್ಥಿತಿಯ ಬಗ್ಗೆ ಬೆಳಕು ಚೆಲ್ಲಲು ರಾಮ ಮಂದಿರ ಟ್ರಸ್ಟ್ ಮಂಗಳವಾರವೇ ತಿಳಿಸಿದೆ. ಹಾಗೆ ರಾಮಮಂದಿರಕ್ಕೆ ಆಗಮಿಸಲು ಯೋಚಿಸಿದ್ದರೆ ಕೆಲದಿನಗಳ ಕಾಲ ಮುಂದೂಡುವಂತೆ ಹೇಳಲಾಗಿದೆ. ಅಯೋಧ್ಯೆಯಲ್ಲಿ ಭಕ್ತರ ಸಾಲು, ನಿಲ್ಲಲ್ಲು ಕೂಡ ಜಾಗವಿಲ್ಲದೆ ಭಕ್ತರು ಓಡಾಡಲು ಆಗದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಕಳೆದ ಮೂರು ದಿನಗಳಲ್ಲಿ ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಅಭೂತಪೂರ್ವ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ಭಕ್ತರು ಆಗಮಿಸಿರುವುದು, ದೊಡ್ಡ ಜನಸಂಖ್ಯೆಯನ್ನು ತಡೆಯಲಾಗುವುದಿಲ್ಲ. ಹೀಗಾಗಿ ಭಕ್ತರು ಹಲವು ರೀತಿ ಸಮಸ್ಯೆ ಎದುರಿಸಬೇಕಾಗಿದೆ. ಹೀಗಾಗಿ 20 ದಿನಗಳ ಕಾಲ ನಿಮ್ಮ ಪ್ರವಾಸ ಮುಂದೂಡುವುದು ಉತ್ತಮ ಎಂದು ರಾಮಜನ್ಮ ಭೂಮಿ ಟ್ರಸ್ಟ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.
ಹಾಗೆ ವಸಂತ ಪಂಚಮಿಯ ಸಮಯದಲ್ಲೂ ರಾಮ ಭಕ್ತರು ಹೆಚ್ಚಾಗಿ ಅಯೋಧ್ಯೆಗೆ ಆಗಮಿಸುವುದರಿಂದ ಈ ಸಮಯದಲ್ಲೂ ಕೂಡ ರಾಮನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಹರಿದು ಬರುವುದರಿಂದಾಗಿ ನೂಕು ನುಗ್ಗಲು ಹೆಚ್ಚಾಗಬಹುದು ಎಂಬ ಕಾರಣಕ್ಕೆ ಈ ದಿನಗಳಲ್ಲಿ ಭಕ್ತರು ಬರುವುದನ್ನು ನಿಯಂತ್ರಿಸಲು ಹೇಳಲಾಗಿದೆ.
ಅಯೋಧ್ಯೆಯಲ್ಲಿ ಈಗಗಾಲೇ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲು ಕುಂಭ ಮೇಳ ಆರಂಭವಾದಾಗಿನಿಂದ ಅಯೋಧ್ಯೆಯಲ್ಲಿ ಭಕ್ತರ ಸಂಖ್ಯೆ ದುಪ್ಪಟ್ಟು ಏರಿಕೆಯಾಗಿದೆ. ದರ್ಶನಕ್ಕೆ ಸಾಲು ಗಟ್ಟಿ ನಿಲ್ಲುವ ಜೊತೆಗೆ ಅಲ್ಲಿನ ಸೌಲಭ್ಯಗಳ ಬಳಸುವುದು ಕೂಡ ಕಷ್ಟಕರವಾಗುತ್ತಿದೆ. ಹಾಗೆ ಭಕ್ತರನ್ನು ನಿಯಂತ್ರಿಸುವುದು ಅಲ್ಲಿನ ಸಿಬ್ಬಂದಿ, ಟ್ರಸ್ಟ್ಗೆ ಹೊಸ ತಲೆನೋವು ತಂದಿದೆ.



Click it and Unblock the Notifications