Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಥೈಲ್ಯಾಂಡ್ನ ಆಕಾಶದಲ್ಲೂ ಜೈ ಶ್ರೀರಾಮ್ ಘೋಷಣೆ..! 10 ಸಾವಿರ ಅಡಿಯಿಂದ ಧುಮುಕಿದ ಸೈನಿಕ..!
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಹಿಂದೂ ಧಾರ್ಮಿಕ ವಿಧಿ ವಿಧಾನಗಳ ಅನುಸರಿಸುವ ಮೂಲಕ ಮಂದಿರ ಉದ್ಘಾಟನೆ ಮಾಡಿದ್ದಾರೆ. ಕೋಟಿ ಕೋಟಿ ರಾಮ ಭಕ್ತರು ಅಯೋಧ್ಯೆ ರಾಮನ ಕಣ್ತುಂಬಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡ ರಾಮ ಲಲ್ಲಾ ಮೂರ್ತಿಗೆ ಸಾವಿರಾರು ಉಡುಗೊರೆಗಳು ಬಂದಿವೆ. ಸಾವಿರಾರು ಮಂದಿ ಚಿನ್ನ, ವಜ್ರ ಸೇರಿ ಹಲವು ಉಡುಗೊರೆಗಳ ಕಾಣಿಕೆಯಾಗಿ ಅರ್ಪಿಸಿದ್ದಾರೆ. ದೇಶ ವಿದೇಶದಿಂದಲೂ ಭಕ್ತರು ರಾಮನ ದರ್ಶನಕ್ಕೆ ಆಗಮಿಸಿದ್ದರು. ಇನ್ನು ಅಯೋಧ್ಯೆ ಭಾರತದ ಪ್ರಮುಖ ಯಾತ್ರಾ ಸ್ಥಳವಾಗಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದರು.

ಆಕಾಶದಲ್ಲಿ ಹರಡಿದ 'ಜೈ ಶ್ರೀರಾಮ್' ಘೋಷಣೆ
ಇತ್ತ ದೂರದ ಥೈಲ್ಯಾಂಡ್ನಲ್ಲೂ ರಾಮ ಮಂದಿರ ಉದ್ಘಾಟನೆಯ ಸಂಭ್ರಮ ಮುಗಿಲು ಮುಟ್ಟಿತ್ತು. ಮಾಜಿ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ಸಿಡಿಆರ್ ರಾಜ್ಕುಮಾರ್ ಥಾಯ್ಲೆಂಡ್ನಲ್ಲಿ 'ಜೈ ಶ್ರೀ ರಾಮ್' ಧ್ವಜದೊಂದಿಗೆ ಸ್ಕೈಡೈವ್ ಮಾಡಿ ಗಮನ ಸೆಳೆದಿದ್ದಾರೆ.
ಸ್ಕೈಡೈವಿಂಗ್ ವಿಶ್ಲೇಷಕ ಮತ್ತು ಕ್ರೀಡಾ ಮತ್ತು ಮಿಲಿಟರಿ ಸಿಬ್ಬಂದಿಗೆ ಬೋಧಕರಾಗಿರುವ ಮಾಜಿ ಅಧಿಕಾರಿ, 10,000 ಅಡಿಗಳಿಂದ ಹಾರಿದ್ದಾರೆ. ಅವರ ಜೊತೆಗೆ ದೊಡ್ಡದಾದ ಜೈ ಶ್ರೀರಾಮ್ ಎಂಬ ಬಾವುಟವೂ ಇದೆ. ಲಘು ವಿಮಾನವು 10,000 ಅಡಿಗಳನ್ನು ತಲುಪಿದಾಗ, ಅವರು ಬಾವುಟದೊಂದಿಗೆ ಜಿಗಿದರು.
ಇದಕ್ಕೂ ಮುನ್ನ ಮತ್ತೊಬ್ಬರು ಬೆಂಕಿಕಡ್ಡಿಗಳನ್ನು ಬಳಸಿ ರಾಮಮಂದಿರದ ಪ್ರತಿಕೃತಿಯನ್ನು ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರು. ಶಿಲ್ಪಿ ಶಾಶ್ವತ್ ರಂಜನ್ ಎಂಬ ಕಲಾವಿದ ಅಯೋಧ್ಯೆಯ ರಾಮಮಂದಿರದ ಈ ಪ್ರತಿಕೃತಿಯನ್ನು ಬೆಂಕಿ ಕಡ್ಡಿಗಳಲ್ಲಿ ಪೂರ್ಣಗೊಳಿಸಲು ಆರು ದಿನಗಳನ್ನು ತೆಗೆದುಕೊಂಡಿದ್ದರು. ಈ ಯೋಜನೆಯನ್ನು ಪೂರ್ಣಗೊಳಿಸಲು ಒಟ್ಟು 936 ಬೆಂಕಿಕಡ್ಡಿಗಳನ್ನು ಬಳಸಿದ್ದರು.
ಇದೀಗ ಮಾಜಿ ಕಮಾಂಡರ್ ಮಾಡಿರುವ ಈ ಸಾಹಸದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ದೂರದ ಥೈಲ್ಯಾಂಡ್ನಲ್ಲೂ ರಾಮನ ಭಕ್ತಿ ಹರಡಿರುವುದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಅಯೋಧ್ಯೆಗೂ ಥಾಯ್ ದೇಶಕ್ಕೂ ಇದೆ ನಂಟು..!
ಈ ಥೈಲ್ಯಾಂಡ್ ಕಥೆಗೂ ಮೊದಲು ನಾವು ಥೈಲ್ಯಾಂಡ್ ಸರ್ಕಾರ ಅಯೋಧ್ಯೆ ರಾಮಮಂದಿರಕ್ಕೆ ಕಳುಹಿಸುತ್ತಿರುವ ಉಡುಗೊರೆ ಕುರಿತು ತಿಳಿಯೋಣ. ಇದೇ ಮೊದಲ ಬಾರಿಗೆ ಥೈಲ್ಯಾಂಡ್ ರಾಮಮಂದಿರಕ್ಕೆ ಉಡುಗೊರೆಯಾಗಿ ಮಣ್ಣನ್ನು ಕಳುಹಿಸುತ್ತಿದೆ. ಥೈಲ್ಯಾಂಡ್ನಲ್ಲಿರುವ ಪವಿತ್ರ ರಾಮನ ಸ್ಥಳದಿಂದ ಈ ಮಣ್ಣನ್ನು ಕಳುಹಿಸಲಾಗುತ್ತಿದೆ. ಇದಕ್ಕೂ ಮೊದಲು ಥೈಲ್ಯಾಂಡ್ನ ಎರಡು ಪವಿತ್ರ ನದಿಗಳಿಂದ ರಾಮನ ದೇವಾಲಯಕ್ಕೆ ನೀರನ್ನು ಕಳುಹಿಸಿತ್ತು.
ಥೈಲ್ಯಾಂಡ್ನಲ್ಲಿ ಅಯುಥೆಯಾ ಎಂಬ ನಗರವಿದೆ. ಅಲ್ಲಿನ ರಾಜರಿಗೆ 'ರಾಮತಿಬೋಧಿ' (ಲಾರ್ಡ್ ರಾಮ) ಎಂದು ಬಿರುದು ನೀಡಲಾಗುತ್ತದೆ ಮತ್ತು ರಾಮಾಯಣದಲ್ಲಿ ಅಯೋಧ್ಯೆಯನ್ನು ರಾಮನ ರಾಜಧಾನಿ ಎಂದು ಉಲ್ಲೇಖಿಸಿರುವ ಸಂದರ್ಭಕ್ಕೆ ಇದು ಸಂಬಂಧ ಹೊಂದಿದೆ. ಇದಲ್ಲದೆ, ರಾಮ್ಕೀನ್ ಎಂದು ಕರೆಯಲ್ಪಡುವ ಥಾಯ್ ಧಾರ್ಮಿಕ ಪಠ್ಯವು ಥಾಯ್ ರಾಮಾಯಣಕ್ಕೆ ಹೋಲಿಸಬಹುದಾದ ಸ್ಥಾನಮಾನವನ್ನು ಹೊಂದಿದೆ.
ರಾಮಾನುಜನ್ ಅವರ ಕೃತಿ '300 ರಾಮಾಯಣ'ದಲ್ಲಿ ಈ ಪಠ್ಯವನ್ನು ವಾಲ್ಮೀಕಿಯ ರಾಮಾಯಣಕ್ಕೆ ಹೋಲಿಸಲಾಗಿದೆ.
ಸಾಂಪ್ರದಾಯಿಕವಾಗಿ 18 ನೇ ಶತಮಾನದಲ್ಲಿ ಕಿಂಗ್ ರಾಮ I ಅವರು ಹೊಸದಾಗಿ ರಚಿಸಿದ್ದಾರೆ ಎಂದು ನಂಬಲಾಗಿದೆ, ರಾಮ್ಕೀನ್ ಹಿಂದೂ ಪಠ್ಯದಲ್ಲಿ ರಾವಣನನ್ನು ಪ್ರತಿಬಿಂಬಿಸುವಂತೆ ಅಲ್ಲಿ ಥೋಟ್ಸಕ್ನನ್ನು ಕಾಣಬಹುದಾಗಿದೆ. ಹಾಗಾಗಿ ಎರಡೂ ದೇಶಗಳಲ್ಲಿ ರಾಮ ಮತ್ತು ರಾಮಾಯಣದ ಉಲ್ಲೇಖಗಳಿವೆ.
ಥಾಯ್ನಲ್ಲಿರುವ ಅಯುಥೆಯಾ ನಗರವು ಯುನೆಸ್ಕೋ ಪಾರಂಪರಿಕ ತಾಣವಾಗಿ ರಕ್ಷಿಸಲ್ಪಟ್ಟಿದೆ. ಭಾರತ ಮತ್ತು ಥೈಲ್ಯಾಂಡ್ ನಡುವೆ ಬಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಾಂಧವ್ಯವಿದೆ. ಥೈಲ್ಯಾಂಡ್ನ ರಾಜರು ಭಗವಾನ್ ರಾಮನ ವಂಶಸ್ಥರಿಗೆ ಸೇರಿದವರು, ಅವರ ಹೆಸರಿನಲ್ಲಿ ರಾಮನ ಬಿರುದನ್ನು ಹೊಂದಿದ್ದಾರೆ ಅವರದ್ದು ಸನಾತನ ಸಂಸ್ಕೃತಿ ಅಂತಲೂ ನಂಬಲಾಗಿದೆ.



Click it and Unblock the Notifications