Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಜೈನ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿ ಪತ್ನಿ-ಪುತ್ರ..! ವಿಡಿಯೋ ವೈರಲ್
ಮನುಷ್ಯ ದೇಹದ ಅಂತಿಮ ಗುರಿ ಮೋಕ್ಷ ಹೊಂದುವುದು ಅಥವಾ ಆತ್ಮಕ್ಕೆ ಶಾಂತಿ ನೀಡುವುದು ಎಂಬುದಾಗಿದೆ. ಈ ಮೋಕ್ಷ ಪಡೆಯುವ ಮಾರ್ಗಗಳು ಮಾತ್ರ ಬೇರೆ ಬೇರೆ ರೂಪದಲ್ಲಿರುತ್ತದೆ. ಮೋಕ್ಷ ಪಡೆಯುವುದು ಎಂದರೆ ಸರ್ವಸ್ವ ತ್ಯಾಗ, ಎಲ್ಲ ಬಂಧಗಳಿಂದ ಮುಕ್ತಿ ಪಡೆದು ಆತ್ಮಾವಲೋಕನ.
ಈ ಮೋಕ್ಷ ಪಡೆಯುವ ಹಾದಿ ಅಷ್ಟೊಂದು ಸುಲಭವಾಗಿರುವುದಿಲ್ಲ. ಈ ದಾರಿಯ ಮೊದಲ ಹಂತವಾಗಿ ದೀಕ್ಷೆ ಪಡೆಯುವುದು ಎನ್ನಲಾಗುತ್ತದೆ. ಈಗ ಜೈನ ಧರ್ಮ ಸ್ವೀಕರಿಸಿ ಮೋಕ್ಷದ ಹಾದಿ ಹಿಡಿಯುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನ ತಾಯಿ ಹಾಗೂ ಆಕೆಯ ಮಗ ಜೈನ ದೀಕ್ಷೆ ಸ್ವೀಕರಿಸಿ ಸುದ್ದಿಯಾಗಿದ್ದಾರೆ.

30 ವರ್ಷದ ಸ್ವೀಟಿ ಮತ್ತು ಆಕೆಯ ಪುತ್ರ 11 ವರ್ಷದ ಹೃದನ್ ಈಗ ಸನ್ಯಾಸತ್ವ ಪಡೆದಿದ್ದಾರೆ. ಸ್ವೀಟಿ ಗರ್ಭಿಣಿಯಾಗಿದ್ದಾಗಲೇ ದೀಕ್ಷೆ ಪಡೆಯಬೇಕು ಎಂದುಕೊಂಡಿದ್ದರಂತೆ ಈಗ ಪುತ್ರನಿಗೆ 11 ವರ್ಷ ತುಂಬಿದ ವೇಳೆ ದೀಕ್ಷೆ ಪಡೆಯಲು ನಿರ್ಧರಿಸಿ ನೂರಾರು ಜೈನ ಮುನಿಗಳ ಸಾರತ್ಯದಲ್ಲಿ ಅವರು ದೀಕ್ಷೆ ಪಡೆದಿದ್ದಾರೆ.
ಉದ್ಯಮಿಯ ಪತ್ನಿಯಾಗಿರುವ ಸ್ವೀಟಿ ಈ ದೀಕ್ಷೆ ಬಳಿಕ ಬವಶುದ್ದಿ ರೇಖಾ ಶ್ರೀ ಎಂದು ಮರುನಾಮಕರಣ ಹೊಂದಿದ್ದಾರೆ. ಇತ್ತರ ಪುತ್ರ ಹೃದನ್ ಹಿತಷ್ಯ ರತನ್ವಿಜಯ್ ಜಿ ಆಗಿ ಬದಲಾಗಿದ್ದಾರೆ. ಅವರು ನೂರಾರು ಜೈನ ಸಂತರ ನಡುವೆ ದೀಕ್ಷೆ ಪಡೆಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವಿಡಿಯೋದಲ್ಲಿ ಪುತ್ರನಿಗೆ ತಾಯಿ ಭಾವನಾತ್ಮಕ ಬೀಳ್ಕೊಡುಗೆ ನೀಡುತ್ತಿರುವುದನ್ನು ನಾವು ನೋಡಬಹುದು. ಆಕೆ ಕೊನೆಯದಾಗಿ ತನ್ನ ಪುತ್ರನ ತಬ್ಬಿಕೊಂಡು ಆತ ತಲೆ ಸವರಿ ಬೀಳ್ಕುಡುತ್ತಿರುವುದು ನೋಡುಗರ ಕಣ್ಣಲ್ಲೂ ನೀರು ತರಿಸುವಂತಿದೆ. ಒಮ್ಮೆ ಜೈನ ದೀಕ್ಷೆ ಪಡೆದರೆ ಆತ/ಆಕೆ ಮನೆ, ಕುಟುಂಬ, ಆಸ್ತಿ, ಆಸೆ, ಬಯಕೆ, ಬೇಡಿಕೆ ಎಲ್ಲವನ್ನೂ ತ್ಯಜಿಸಬೇಕಾಗುತ್ತದೆ. ಕೇವಲ ಧ್ಯಾನ ಹಾಗೂ ಸಮಾಜ ಸೇವೆಯಂತಹ ಕಾರ್ಯದಲ್ಲಿ ತೊಡಗಬೇಕಾಗುತ್ತದೆ.
200 ಕೋಟಿ ಆಸ್ತಿ ತ್ಯಜಿಸಿದ್ದ ಉದ್ಯಮಿ
ಇದಕ್ಕೂ ಮೊದಲು ಉದ್ಯಮಿಯೊಬ್ಬರು ದೀಕ್ಷೆ ಪಡೆದು ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು, ಅವರು ತಮ್ಮ 200 ಕೋಟಿ ರೂಪಾಯಿ ಆಸ್ತಿಯನ್ನೇ ತ್ಯಜಿಸಿ ಇಡೀ ಕುಟುಂಬ ಸನ್ಯಾಸತ್ವ ಪಡೆದಿತ್ತು. ಗುಜರಾತ್ನ ಈ ಶ್ರೀಮಂತ ಉದ್ಯಮಿ ಮತ್ತು ಅವರ ಪತ್ನಿ ತಮ್ಮ ಗಳಿಕೆ ಮತ್ತು 200 ಕೋಟಿ ಮೌಲ್ಯದ ಆಸ್ತಿಯನ್ನು ತ್ಯಜಿಸಿ ಸನ್ಯಾಸಿತ್ವವನ್ನು ಸ್ವೀಕರಿಸಿದ್ದಾರೆ.
ಭವೇಶ್ ಭಾಯ್ ಬಂಡಾರಿ ಹಾಗೂ ಅವರ ಪತ್ನಿ ಇಬ್ಬರು ಮಕ್ಕಳು ಜೈನ ಸನ್ಯಾಸತ್ವ ಸ್ವಕರಿಸಿದ್ದರು. ಜೊತೆಗೆ ಮೆರವಣಿಗೆ ಮೂಲಕ ತಮ್ಮ ಆಸ್ತಿಯನ್ನು ಜನರಿಗೆ ಹಂಚಿದರು. ಅವರು ಸಾಗಿದ ದಾರಿಯಲ್ಲಿ ನೋಟುಗಳ ಹಂಚಿದರು, ಮೊಬೈಲ್, ಬಂಗಾರದ ಆಭರಣ ಸೇರಿ ಎಲ್ಲವನ್ನು ತ್ಯಜಿಸಿದ್ದರು.
ಮಕ್ಕಳ ಆಸೆಯಂತೆ ದಂಪತಿ ಇಲ್ಲಿ ಸನ್ಯಾಸತ್ವ ಪಡೆದಿದ್ದರು. ಮಕ್ಕಳು ಮೊದಲು ದೀಕ್ಷೆ ಪಡೆದು ತಂದೆ ತಾಯಿ ಸಹ ನಮ್ಮಂತೆ ದೀಕ್ಷೆ ಪಡೆಯಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು. ಮಕ್ಕಳ ಆಸೆಗಿಂತ ಆಸ್ತಿ ಪಾಸ್ತಿ ಹೊಂದುವುದು ದೊಡ್ಡದಲ್ಲ ಎಂದು ಭಾವಿಸಿದ ದಂಪತಿ ತಮ್ಮ 200 ಕೋಟಿಗೂ ಅಧಿಕ ಆಸ್ತಿ ತ್ಯಜಿಸಿ ದೀಕ್ಷೆ ಪಡೆದಿದ್ದರು.
ಗುಜರಾತ್ನಲ್ಲಿ ವಜ್ರದ ವ್ಯಾಪಾರಿಯಾಗಿದ್ದ ಭವೇಶ್ ಭಾಯ್ ಬಂಡಾರಿ ನೂರಾರು ಜೈನ ಸನ್ಯಾಸಿಗಳ ಸಮ್ಮುಖದಲ್ಲೇ ದೀಕ್ಷೆ ಪಡೆದಿದ್ದರು. 19 ವರ್ಷದ ಮಗಳು ಮತ್ತು 16 ವರ್ಷದ ಮಗ 2022ರಲ್ಲಿ ಸನ್ಯಾಸತ್ವವನ್ನು ಸ್ವೀಕರಿಸಿದ್ದಾರೆ. ಮಕ್ಕಳಿಂದಲೇ ಸ್ಪೂರ್ತಿ ಪಡೆದು ದಂಪತಿ ಈ ಕಾರ್ಯಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದರು.



Click it and Unblock the Notifications