Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
ಆಕಾಶದಲ್ಲಿ ಯಾವಾಗಲು ಅಚ್ಚರಿಯ ವಿದ್ಯಮಾನಗಳು ನಡೆಯುತ್ತಲೇ ಇರುತ್ತವೆ. ಕೆಲವೊಮ್ಮೆ ಗ್ರಹಣಗಳು, ಉಲ್ಕೆಗಳ ಹಾರಾಟ, ವಿಚಿತ್ರ ವಸ್ತುಗಳು ಕಾಣಿಸಿಕೊಳ್ಳುವುದು, ವಿಚಿತ್ರ ಕಾಮನಬಿಲ್ಲು, ಸೂರ್ಯನಿಗೆ ಕೊಡೆ ಹಿಡಿದ ರೀತಿಯ ಆಕೃತಿಗಳು, ಈಗ ಈ ಸಾಲಿಗೆ ಶೂನ್ಯ ನೆರಳು ಸಹ ಸೇರಿಕೊಂಡಿದೆ.
ಈ ವಿದ್ಯಮಾನ ಆಕಾಶದಲ್ಲಿಯೇ ನಡೆದರು ಅದರ ಪರಿಣಾಮ ಭೂಮಿ ಮೇಲೆ ಬೀಳುತ್ತದೆ. ಇಂದು ಬೆಂಗಳೂರು ಈ ಶೂನ್ಯ ನೆರಳಿನ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಹೌದು ಬೆಂಗಳೂರಿನಲ್ಲಿ ಸುಮಾರು 12:17 ರಿಂದ 12:24ರ ವರೆಗೆ 6 ನಿಮಿಷಗಳ ಕಾಲ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿದೆ.

ಈ ಶೂನ್ಯ ನೆರಳಿನ ವೇಳೆ ನಿಮ್ಮ ನೆರಳು ಸಂಪೂರ್ಣವಾಗಿ ಮಾಯವಾಗುತ್ತದೆ. ನೀವು ಬಿಸಿಲಿನಲ್ಲಿ ಹೊರಬಂದರೆ ನಿಮ್ಮ ನೆರಳು ಭೂಮಿಯ ಮೇಲೆ ಬೀಳದೆ ಇರುವ ವಿದ್ಯಮಾನ ಇದಾಗಿದೆ. ಇದೊಂದು ಅಚ್ಚರಿಯ ವಿದ್ಯಮಾನವಾಗಿದ್ದು, ಕೆಲವು ಬಾರಿ ಮಾತ್ರ ಸಂಭವಿಸುತ್ತದೆ. ಅಂದರೆ ಬಹುತೇಕ ವರ್ಷದಲ್ಲಿ ಎರಡು ಬಾರಿ ಈ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸಲಿದೆ. ಸೂರ್ಯನು ನೇರವಾಗಿ ತಲೆಯೆ ಮೇಲೆ ಬಂದಾಗ ಈ ವಿದ್ಯಮಾನಕ್ಕೆ ನಾವು ಸಾಕ್ಷಿಯಾಗುತ್ತೇವೆ.
ಸೂರ್ಯನ ಕೋನವು ಭೂಮಿಯ ಮೇಲ್ಮೈಗೆ ಬಹುತೇಕ ಲಂಬವಾಗಿರುವಾಗ ಸಮಭಾಜಕ ವೃತ್ತದ ಪ್ರದೇಶದಲ್ಲಿರುವ ಎಲ್ಲಾ ಪ್ರದೇಶಗಳು ಶೂನ್ಯ ನೆರಳಿನ ವಿದ್ಯಮಾನಕ್ಕೆ ಸಾಕ್ಷಿಯಾಗಲಿವೆ. ಇಂದು (ಏಪ್ರಿಲ್ 24) ಬೆಂಗಳೂರು ಸೇರಿ ಸಮೀಪದ ಹಲವು ನಗರಗಳಲ್ಲಿ ಶೂನ್ಯ ನೆರಳು ಕಾಣಿಸಲಿದೆ.
ಶೂನ್ಯ ನೆರಳು ದಿನ ಎಂದರೇನು?
ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ (ASI) ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ಸಮೀಪ ಇರುವ ಪ್ರದೇಶಗಲ್ಲಿ ವರ್ಷಕ್ಕೆ ಎರಡು ಬಾರಿ ಈ ಶೂನ್ಯ ನೆರಳು ವಿದ್ಯಮಾನ ಘಟಿಸಲಿದೆ. ಈ ಸಮಯದಲ್ಲಿ ಸೂರ್ಯ ನೇರವಾಗಿ ತಲೆಯ ಮೇಲಿರುತ್ತಾನೆ. ಹೀಗಾದಾಗ ನಮ್ಮ ನೆರಳು ನೇರವಾಗಿ ಬೀಳಬೇಕಾಗುತ್ತದೆ. ಹೀಗೆ ಬಿದ್ದಾಗ ಭೂಮಿ ಮೇಲೆ ನೆರಳು ಮೂಡುವುದಿಲ್ಲ. ಈ ವೇಳೆ ನೆರಳು ಮಾಯವಾಗಿರುವಂತಹ ಅನುಭವವಾಗುತ್ತದೆ. ಇಂದು ಉತ್ತರಾಯಣದಲ್ಲಿ ಸೂರ್ಯ ಇರುವ ಕಾರಣದಿಂದ ಉಂಟಾಗುತ್ತಿದೆ. ಮುಂದೆ ಆಗಸ್ಟ್ ತಿಂಗಳಲ್ಲಿ ಸೂರ್ಯ ದಕ್ಷಿಣಾಯಣದಲ್ಲಿರುವಾಗಲು ಇದೇ ವಿದ್ಯಮಾನ ಮತ್ತೊಮ್ಮೆ ಎದುರಾಗಲಿದೆ.
ಕಳೆದ ವರ್ಷ ಅಂದರೆ ಸರಿಯಾಗಿ ಏಪ್ರಿಲ್ 25, 2023ರಂದು ಹಾಗೂ ಅದೇ ವರ್ಷ ಆಗಸ್ಟ್ 18ರಂದು ಸಹ ಈ ಘಟನೆಗೆ ಬೆಂಗಳೂರು ಸಾಕ್ಷಿಯಾಗಿತ್ತು. ಏಪ್ರಿಲ್ 25ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳಿನ ಅಪರೂಪದ ಘಟನೆ ನಡೆದಿತ್ತು. ಇದಾದ ಬಳಿಕ ಆಗಸ್ಟ್ 18ರಂದು ಸಹ ಶೂನ್ಯ ನೆರಳು ದಿನ ನಡೆದಿತ್ತು.
ಶೂನ್ಯ ನೆರಳು ವಿದ್ಯಮಾನ ವೀಕ್ಷಿಸಲು ಯಾವ ಉಪಕರಣವೂ ಬೇಕಿಲ್ಲ
ಇನ್ನು ಈ ವಿಶೇಷ ವಿದ್ಯಮಾನ ವೀಕ್ಷಿಸಲು ಯಾವ ಉಪಕರಣಗಳ ಅಗತ್ಯವಿರುವುದಿಲ್ಲ. ಗ್ರಹಣ, ಗ್ರಹ, ಉಲ್ಕೆ ನೋಡಲು ಕೆಲವು ಉಪಕರಣಗಳ ಅಗತ್ಯವಿದೆ. ಆದರೆ ಈ ಶೂನ್ಯ ನೆರಳಿನ ವಿದ್ಯಮಾನ ನಮ್ಮ ಕಣ್ಣ ಮುಂದೆಯೇ ಜರುಗುತ್ತದೆ. ಜೊತೆಗೆ ಇದರಿಂದ ಯಾವ ಹಾನಿಯಾಗಲಿದೆ ಅಥವಾ ಯಾವುದೇ ಕೆಟ್ಟದ್ದಾಗಲಿ ಆಗುವುದಿಲ್ಲ.



Click it and Unblock the Notifications