Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಉತ್ತರದವರು ಬೆಂಗಳೂರು ತೊರೆದರೆ ನಗರ ಖಾಲಿಯಾಗುತ್ತೆ ಎಂದ ಯುವತಿ..! ಜಾಗ ಖಾಲಿ ಮಾಡಿ ಎಂದ ನೆಟ್ಟಿಗರು
ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲು ಸದ್ದು ಮಾಡುವ ವಿಚಾರ ಅಂದರೆ ಅಂದು ಉತ್ತರ ಹಾಗೂ ದಕ್ಷಿಣ ಭಾರತ ಎಂಬ ಎರಡು ಟಾಪಿಕ್ಗಳು, ಅದರಲ್ಲೂ ಬೆಂಗಳೂರು ಹಾಗೂ ಕನ್ನಡಿಗರು ಮತ್ತು ಹಿಂದಿ ವಿಚಾರವಾಗಿ ಯಾವಾಗಲು ಒಂದಲ್ಲಾ ಒಂದು ಘಟನೆ ವರದಿಯಾಗುತ್ತಲೇ ಇರುತ್ತೆ.
ಇತ್ತೀಚಿಗೆ ಹಿಂದಿ ಹೇರಿಕೆಯ ವಿರುದ್ಧ ಧ್ವನಿ ಹೆಚ್ಚಾಗುತ್ತಿದ್ದರೆ ಬೆಂಗಳೂರಲ್ಲಿ ನೆಲೆಸಿರುವ ಉತ್ತರ ಭಾರತೀಯರು ಈ ನಡೆ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕುವುದು, ಇಡೀ ಕನ್ನಡಿಗರನ್ನು ತೆಗಳುವುದು ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆಯಾಗಿ ನಿತ್ಯವೂ ಹತ್ತಾರು ಘಟನೆಗಳು ನಡೆಯುತ್ತಿರುತ್ತವೆ.

ಹಾಗೆ ಇಲ್ಲೊಬ್ಬಾಕೆ ತನ್ನ ಇನ್ಸ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೂ ಕಾರಣವಾಗಿದೆ. ಬಹುದಿನಗಳಿಂದ ಆಕೆ ಬೆಂಗಳೂರು ಕುರಿತಂತೆ ಹಲವು ವಿಡಿಯೋಗಳ ಹಂಚಿಕೊಂಡಿದ್ದು ಈ ವಿಡಿಯೋ ಈಗ ವೈರಲ್ ಆಗಿದೆ.
ಆಕೆಯ ಪ್ರಕಾರ ಉತ್ತರ ಭಾರತೀಯರು ಬೆಂಗಳೂರು ಬಿಟ್ಟು ಹೋದರೆ ಬೆಂಗಳೂರು ನಗರ ಖಾಲಿಯಾಗಲಿದೆಯಂತೆ, ಹಾಗೆ ಪಿಜಿಗಳು ಮೊದಲು ಖಾಲಿಯಾಗುತ್ತವೆ ಎಂದು ಆಕೆ ಹೇಳುತ್ತಿದ್ದಾಳೆ. ಹೀಗಾಗಿ ಮಾತನಾಡುವಾಗ ಸ್ವಲ್ಪ ಆಲೋಚನೆ ಮಾಡಿ ಮಾತನಾಡಿ ಎಂದು ಆಕೆ ಹೇಳುತ್ತಿರುವುದು ವಿಡಿಯೋದಲ್ಲಿ ನೋಡಬಹುದು.
ಸುಗಂಧ್ ಶರ್ಮಾ ಎಂಬಾಕೆ ವಿಡಿಯೋದಲ್ಲಿ ಬೆಂಗಳೂರಿನ ಕೋರಮಂಗಲದ ಪಬ್ಗಳ ಉದಾಹರಣೆಯಾಗಿ ನೀಡಿದ್ದಾರೆ. ಉತ್ತರ ಭಾರತೀಯರು ಬೆಂಗಳೂರು ತೊರೆದರೆ, ಪಾವತಿಸುವ ಅತಿಥಿ ವಸತಿಗಳು (ಪಿಜಿಗಳು) ಖಾಲಿಯಾಗುತ್ತವೆ . ಕೋರಮಂಗಲದ ನೂರಾರು ಪಬ್ಗಳು ಖಾಲಿಯಾಗುತ್ತವೆ. ಪಬ್ಗಳಿಗೆ ಸುಂದರ ಹುಡುಗಿಯರು ನೋಡಲು ಸಿಗಲ್ಲ, ಅಲ್ಲಿ ಹುಡುಗಿಯರು ಪಂಜಾಬಿ ಹಾಡಿಗೆ ಡ್ಯಾನ್ಸ್ ಮಾಡುವುದು ನೋಡಲು ಸಿಗಲ್ಲ. ಹೀಗಾಗಿ ನೀವು ಮಾತನಾಡುವಾಗ ಸ್ವಲ್ಪ ಆಲೋಚಿಸಿ ಮಾತನಾಡಿ ಎಂದು ಏಕೆ ಹೇಳುತ್ತಿದ್ದಾಳೆ.
ಆಕೆಯ ವಿಡಿಯೋ ವಿವಾದ ಹುಟ್ಟುಹಾಕಿದೆ, ಹಾಗೆ ಹಲವರು ಆಕೆಯ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ, ಇದು ಹಿಂದು ಹಾಗೂ ಕನ್ನಡ ಹಾಗೆ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಎಂದು ನಡೆಯುತ್ತಿರುವ ಚರ್ಚಯ ಬೆಂಕಿಗೆ ಮತ್ತಷ್ಟು ತುಪ್ಪಸುರಿದಿದೆ. ಹೀಗಾಗಿ ಆಕೆಯ ವಿಡಿಯೋ ಕೆಳಗೆ ಕನ್ನಡಿಗರು ಕಮೆಂಟ್ಗಳ ಸುರಿಮಳೆಗೈದಿದ್ದಾರೆ.
ನೀವು ಹೇಳುತ್ತಿರುವುದನ್ನು ಕೇಳಲು ಇಷ್ಟೊಂದು ಚೆನ್ನಾಗಿದೆ, ದಯವಿಟ್ಟು ನೀವೆಲ್ಲಾ ಯಾವಾಗ ಬೆಂಗಳೂರು ತೊರೆಯುತ್ತೀರಿ ಎಂಬುದನ್ನು ಖಚಿತ ಪಡಿಸಿ ಎಂದು ಬಳಕೆದಾರರೊಬ್ಬರು ಬರೆದುಕೊಂಡಿರುವುದು ನೋಡಬಹುದು. ಈ ಕಮೆಂಟ್ಗೆ ಅತ್ಯಧಿಕ ಲೈಕ್ಸ್ ಸಹ ಬಂದಿದೆ.
ನೀವು ಹುಟ್ಟುವ ಮುನ್ನವೇ ಬೆಂಗಳೂರು ನಗರವಿತ್ತು, ನೀವು ಇಲ್ಲಿಂದ ಬಿಟ್ಟು ಹೋದರು ಬೆಂಗಳೂರು ನಗರ ಇರಲಿದೆ. ಭ್ರಮೆಯಲ್ಲಿ ಬದುಕಬೇಡಿ, ಆದಷ್ಟು ಬೇಗ ನಮ್ಮ ನಗರ ಬಿಟ್ಟು ಹೊರಡಿ ಎಂದು ಮತ್ತೊಬ್ಬರು ಬರೆದಿದ್ದಾರೆ.
ಕನ್ನಡ ಅಣಕಿಸಿ ಪೊಲೀಸರ ಕಣ್ಣಿಗೆ ಬಿದ್ದ
ಇನ್ನೋರ್ವ ಯುವಕ ಇನ್ಸ್ಸ್ಟಾಗ್ರಾಮ್ನಲ್ಲಿ ಕನ್ನಡಿಗರ ಅವಮಾನಿಸುವಂತಹ ವಿಡಿಯೋ ಹಂಚಿಕೊಂಡು ಪೊಲೀಸರ ಕಣ್ಣಿಗೂ ಬಿದ್ದಿದ್ದಾನೆ, ಆತನ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ. ಆತ ಮಗುವೊಂದು ಹಿಂದಿಯಲ್ಲಿ ಮಾತನಾಡುತ್ತಿದೆ ಎಂದು ಇದು ಕರ್ನಾಟಕ ಕನ್ನಡದಲ್ಲಿ ಮಾತನಾಡು ಎಂದು ಹೇಳಿ ಗೊಂಬೆಯನ್ನು ಹೊರಗೆ ಎಸೆಯುವ ವಿಡಿಯೋ ಮಾಡಿದ್ದಾನೆ.
ಸದ್ಯ ಇದು ಆನ್ಲೈನ್ನಲ್ಲಿ ಕನ್ನಡಿಗರ ಕೆಣಕಿದೆ. ರೀಜನಲ್ ಸೆಂಟಿಮೆಂಟ್ ಹಾಗೂ ಕನ್ನಡಿಗರನ್ನು ಪ್ರವೋಕ್ ಮಾಡುತ್ತಿರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿತ್ತು ವಿಡಿಯೋ ನೋಡಿದ ಬೆಂಗಳೂರು ಪೊಲೀಸರು ಆತನ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ. ಸದ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಇಂತಹ ಹತ್ತಾರು ವಿಡಿಯೋಗಳು ಹರಿದಾಡುತ್ತಿದ್ದು, ಕನ್ನಡಿಗರು ಹಾಗೂ ಬೆಂಗಳೂರನ್ನು ತೆಗಳುವ ಮೂಲಕ ಒಂದಿಷ್ಟು ಮಂದಿ ವಿವಾದ ಹುಟ್ಟುಹಾಕುತ್ತಿದ್ದಾರೆ.



Click it and Unblock the Notifications