Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ಜೈಲು ಫಿಕ್ಸ್!! ಈ ನಿಯಮ ಏಕಿದೆ ಗೊತ್ತಾ?
ವಿಶ್ವದ ಅತಿದೊಡ್ಡ ರೈಲ್ವೆ ಜಾಲವಾಗಿರುವ ಭಾರತೀಯ ರೈಲ್ವೆಯು ನಿತ್ಯ ಲಕ್ಷಾಂತರ ಪ್ರಯಾಣಿಕರ ಹೊತ್ತು ಸಾಗುತ್ತದೆ. ಭಾರತದ ಬಹುತೇಕ ಕಡೆಗಳಿಗೆ ಈಗ ರೈಲ್ಬೆ ಸಂಪರ್ಕವಿದೆ. ಅದ್ರಲ್ಲೂ ಭಾರತದ ಹಲವು ಭಾಗದಲ್ಲಿ ರೈಲು ಬಿಟ್ಟು ಬೇರೆ ಯಾವುದೇ ಸಂಪರ್ಕ ಸೇತುವೆಗಳಿಲ್ಲ. ಹೀಗಾಗಿ ಭಾರತೀಯ ರೈಲ್ವೆಯು ಜನರ ಜೀವಾಳವಾಗಿದೆ. ಇನ್ನು ಬಹುತೇಕ ಎಲ್ಲಾ ನಗರಗಳಲ್ಲಿ ಹಾದು ಹೋಗುವ ರೈಲು ಮಾರ್ಗ ಜನರ ನಿತ್ಯದ ಬದುಕು ಕಟ್ಟಿಕೊಡುತ್ತದೆ.
ಹಾಗೆ ಈಗ ಆಧುನಿಕರಣಗೊಳ್ಳುತ್ತಿರುವ ರೈಲ್ವೆಯು ಹೊಸ ನಿಯಮಗಳು, ಸುರಕ್ಷತಾ ವಿಧಾನಗಳ ಜಾರಿ ಮಾಡುವುದು ನೋಡಬಹುದು. ರೈಲು ಅಪಘಾತಗಳ ತಡೆಯಲು ತಂತ್ರಜ್ಞಾನಗಳು, ಸುಧಾರಿತ ಸಿಗ್ನಲಿಂಗ್ ವ್ಯವಸ್ಥೆ, ಸೂಕ್ತ ತರಬೇತಿಯಂತಹ ಕ್ರಮಕ್ಕೂ ಅದು ಮುಂದಾಗುವುದು ನೋಡಬಹುದು. ಇನ್ನು ಈ ಸಮಯದಲ್ಲಿ ಅಪಘಾತ ತಡೆಯಲು ಸಾರ್ವಜನಿಕರ ಸಹಕಾರ ಕೂಡ ಅಷ್ಟೇ ಮುಖ್ಯ.

ಹಾಗೆ ಭಾರತೀಯ ರೈಲ್ವೆಯು ಪ್ರಯಾಣಿಕರ ಹಿತದೃಷ್ಟಿಯಿಂದ ಕೆಲವೊಂದು ವಸ್ತುಗಳನ್ನು ರೈಲು ಪ್ರಯಾಣದ ವೇಳೆ ಬಳಸದಂತೆ ಸೂಚಿಸುತ್ತದೆ. ಮತ್ತೆ ಕೆಲವು ವಸ್ತುಗಳನ್ನು ರೈಲಿನಲ್ಲಿ ತೆಗೆದುಕೊಂಡು ಹೋಗುವುದು ನಿಷಿದ್ಧಗೊಂಡಿದ್ದು, ದಂಡಕ್ಕೂ ಇದು ದಾರಿಯಾಗುತ್ತದೆ. ಅಂತಹ ಕೆಲವು ವಸ್ತುಗಳಲ್ಲಿ ಒಣ ಕೊಬ್ಬರಿ ಕೂಡ ಒಂದಾಗಿದೆ. ಕೊಬ್ಬರಿಯು ಅಪಾಯಗಳ ತರಬಹುದು ಎಂಬ ಕಾರಣದಿಂದ ಸಾಗಾಟ ನಿಷೇಧಿಸಲಾಗಿದೆ.
ನಿಮಗೆ ಅಚ್ಚರಿಯಾಗಬಹುದು ಭಾರತೀಯ ರೈಲ್ಬೆಯು ಪ್ರಯಾಣಿಕರು ಒಣ ಕೊಬ್ಬರಿಯನ್ನು ರೈಲಿನಲ್ಲಿ ಸಾಗಿಸುವುದನ್ನು ನಿಷೇಧಿಸುತ್ತದೆ. ರೈಲ್ವೆ ನಿಯಮಗಳ ಪ್ರಕಾರ ಈ ರೀತಿಯ ಒಣ ಕೊಬ್ಬರಿಯನ್ನು ತೆಗೆದುಕೊಂಡು ಹೋಗುವುದು ಅಪಾಯಕಾರಿ ಎಂದು ಹೇಳಿದೆ. ರೈಲ್ವೆಯ ಪ್ರಮುಖ ನಿಯಮಗಳ ಪ್ರಕಾರ ಸ್ಟೌವ್ಗಳು, ಗ್ಯಾಸ್ ಸಿಲಿಂಡರ್ಗಳು, ರಾಸಾಯನಿಕಗಳು, ಪಟಾಕಿ, ಚರ್ಮ ಅಥವಾ ಒದ್ದೆಯಾದ ಚರ್ಮ, ಗ್ರೀಸ್, ಸಿಗರೇಟ್ ಮತ್ತು ಸ್ಫೋಟಕಗಳಂತಹ ವಸ್ತುಗಳನ್ನು ರೈಲುಗಳಲ್ಲಿ ಸಾಗಿಸಬಾರದು.
ಅದರಲ್ಲೂ ಒಣ ಕೊಬ್ಬರಿಯು ಅದರ ಸುತ್ತಲೂ ಒಣಗಿರುವ ನಾರಿನ ಪದಾರ್ಥ ಹೊಂದಿರಲಿದೆ. ಒಮ್ಮೆ ಇದಕ್ಕೆ ಬೆಂಕಿ ತಗುಲಿದರೆ ಅದರನ್ನು ನಂದಿಸುವುದು ಬಹಳ ಕಷ್ಟ, ಹೀಗಾಗಿ ಒಣ ಕೊಬ್ಬರಿಯನ್ನ ತೆಗೆದುಕೊಂಡು ಹೋಗುವುದು ನಿಷೇಧವಾಗಿದೆ. ಯಾವುದೇ ಪ್ರಯಾಣಿಕನು ರೈಲಿನಲ್ಲಿ ನಿಷೇಧಿತ ವಸ್ತುಗಳೊಂದಿಗೆ ಪ್ರಯಾಣಿಸುತ್ತಿರುವುದು ಕಂಡುಬಂದರೆ, ರೈಲ್ವೆ ಅವನ ವಿರುದ್ಧ ಕ್ರಮ ಕೈಗೊಳ್ಳಬಹುದು. ಅಂತಹ ಸಂದರ್ಭದಲ್ಲಿ ಪ್ರಯಾಣಿಕನಿಗೆ 1,000 ರೂ. ದಂಡ ಇಲ್ಲವೆ 3 ವರ್ಷಗಳ ಕಾಲ ಜೈಲು ಶಿಕ್ಷೆ ಇಲ್ಲವೆ ಎರಡನ್ನೂ ವಿಧಿಸುವ ಅಧಿಕಾರ ಹೊಂದಿದೆ. ಹಾಗೆ ಈ ವಸ್ತುಗಳ ತೆಗೆದುಕೊಂಡು ಹೋಗುವಾಗ ಅಹಿತಕರ ಘಟನೆಗಳು ಸಂಭವಿಸಿದರೆ, ರೈಲ್ವೆಗೆ ಹಾನಿಯಾದರೆ ಆ ನಷ್ಟ ಕೂಡ ಪ್ರಯಾಣಿಕರೆ ಭರಿಸಬೇಕಾಗುತ್ತದೆ. ಇನ್ನು ಹಸಿ ತೆಂಗಿನಕಾಯಿಗಳನ್ನು ರೈಲಿನಲ್ಲಿ ತೆಗೆದುಕೊಂಡು ಹೋಗಬಹುದು.
ಹಾಗೆ ಭಾರತೀಯ ರೈಲ್ವೆ ನಿಯಮಗಳ ಪ್ರಕಾರ ರೈಲು ಪ್ರಯಾಣದ ವೇಳೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಕೂಡ ತೆಗೆದುಕೊಂಡು ಹೋಗುವಂತಿಲ್ಲ. ಆದ್ರೆ ವೈದ್ಯಕೀಯ ತುರ್ತು ಪರಿಸ್ಥಿತಿ, ಹಾಗೆ ಕೆಲವು ಮಾರ್ಗಸೂಚಿಗಳ ಅನುಸರಿಸುವ ಮೂಲಕ ತೆಗೆದುಕೊಂಡು ಹೋಗಬಹುದು. ಹಾಗೆ ಯಾವುದೇ ಪ್ರಯಾಣಿಕರು ರೈಲು ಅಥವಾ ರೈಲ್ವೆ ಆವರಣದಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿದರೆ ದಂಡ ವಿಧಿಸಲಾಗುತ್ತದೆ.
ಮದ್ಯಪಾನ ಮಾಡಿದ ನಂತರದಲ್ಲಿ ಅಥವಾ ಮದ್ಯದ ಬಾಟಲಿಯೊಂದಿಗೆ ರೈಲು ಪ್ರಯಾಣದಲ್ಲಿ ತೊಡಗುವಂತಿಲ್ಲ. ಹೀಗೆ ಮದ್ಯದೊಂದಿಗೆ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದರೆ 6 ತಿಂಗಳ ಜೈಲು ಶಿಕ್ಷೆ ಹಾಗೂ 500 ರೂಪಾಯಿ ದಂಡ ವಿಧಿಸಬಹುದು. ಹಾಗೆ ಅಸಭ್ಯ ವರ್ತನೆ, ಕಿರುಕುಳ, ಸಕಾರಾತ್ಮಕ ಉದ್ದೇಶವಿಲ್ಲದೆ ಚೈನ್ ಪುಲ್ಲಿಂಗ್, ಟಿಟಿಯೊಂದಿಗೆ ಸಹಕರಿಸದಿದ್ದರೂ ಕೂಡ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬಹುದು.



Click it and Unblock the Notifications
