Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭಾದ್ರಪದ ಮಾಸ ಯಾವಾಗ ಶುರು: ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು
ಭಾದ್ರಪದ ಮಾಸ ನಮಗೆಲ್ಲಾ ಸಡಗರದ ಮಾಸ, ಏಕೆಂದರೆ ಈ ಮಾಸದಲ್ಲಿ ತಾನೆ ಗಣಪ ಮನೆ ಮನೆಗೆ ಬರುವುದು, ಈ ಭಾದ್ರಪದ ಮಾಸ ಮೂರ್ತಿ ಸಂಭ್ರಮವೋ ಸಂಭ್ರಮ, ಉತ್ತರ ಭಾರತದ ಕಡೆ ಭಾದ್ರಪದ ಮಾಸ ಆಗಸ್ಟ್ 23ರಿಂದ ಶುರುವಾದರೆ ಕರ್ನಾಟಕದಲ್ಲಿ ಸೆಪ್ಟೆಂಬರ್ 4ರಿಂದ ಶುರುವಾಗುವುದು.
ಭಾದ್ರಪದ ಮಾಸ ಎಲ್ಲಿಂದ ಎಲ್ಲಿಯವರೆಗೆ ಇರಲಿದೆ? ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು ಹಾಗೂ ವ್ರತ ನಿಯಮಗಳೇನು ಎಂದು ನೋಡೋಣ ಬನ್ನಿ:

ಭಾದ್ರಪದ ಮಾಸದಲ್ಲಿ ಬರುವ ಹಬ್ಬಗಳುಗಳು ಹಾಗೂ ಶುಭ ದಿನಗಳು
ಸೆಪ್ಟೆಂಬರ್ 5: ಬಲರಾಮ ಜಯಂತಿ, ಧನ್ವಂತರಿ ಜಯಂತಿ
ಸೆಪ್ಟೆಮಬರ್ 6: ವರಹ ಜಯಂತಿ
ಸೆಪ್ಟೆಂಬರ್ 6: ಸ್ವರ್ಣಗೌರಿ ವ್ರತ
ಸೆಪ್ಟೆಂಬರ್ 7: ಗಣೇಶ ಚತುರ್ಥಿ
ಸೆಪ್ಟೆಂಬರ್ 8: ರಿಷಿ ಪಂಚಮಿ
ಸೆಪ್ಟೆಂಬರ್ 15: ವಾಮನ ಜಯಂತಿ
ಸೆಪ್ಟೆಂಬರ್ 17: ಅನಂತ ಚತುರ್ದಶಿ
ಸೆಪ್ಟೆಂಬರ್ 18-ಅಕ್ಟೋಬರ್ 2ರವರೆಗೆ ಪಿತೃಪಕ್ಷ
ಸೆಪ್ಟೆಂಬರ್ 24: ಕಾಲಾಷ್ಟಮಿ
ಅಕ್ಟೋಬರ್ 14: ಮಹಾಲಯ ಶ್ರಾದ್ಧ
ಭಾದ್ರಪದ ಮಾಸದಲ್ಲಿ ಸಂಕಷ್ಟಹರ ಚತುರ್ಥಿ
ಸೆಪ್ಟೆಂಬರ್ 21ರಂದು ಆಚರಿಸಲಾಗುವುದು.
ಚಂದ್ರೋದಯ ಸಮಯ: ರಾತ್ರಿ 8:43
ಭಾದ್ರಪದದಲ್ಲಿ ಏಕಾದಶಿ ದಿನಗಳು
ಪರಿವರ್ತನಿ ಏಕಾದಶಿ: ಸೆಪ್ಟೆಂಬರ್ 14
ಇಂದಿರಾ ಏಕಾದಶಿ: ಸೆಪ್ಟೆಂಬರ್ 28
ಭಾದ್ರಪದ ಮಾಸದಲ್ಲಿ ಪ್ರದೋಷ ವ್ರತದ ದಿನಗಳು
ಸೆಪ್ಟೆಂಬರ್ 15, ಸೆಪ್ಟೆಂಬರ್ 30
ಭಾದ್ರಪದ ಮಾಸದ ಮಹತ್ವ
ಭಾದ್ರಪದ ಮಾಸವೆಂದರೆ ಗಣಪತಿಯನ್ನು ಶಾಸ್ತ್ರೋಕ್ತವಾಗಿ ಪೂಜಿಸಲು ಇರುವ ಮಾಸವಾಗಿದೆ. ಭಾದ್ರಪದ ಮಾಸದಲ್ಲಿ ಪೂಜೆ ಮತ್ತು ಭಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
ಭಾದ್ರಪದ ಮಾಸದಲ್ಲಿ ದಾನಕ್ಕೆ ತುಂಬಾನೇ ಮಹತ್ವವಿದೆ
ಈ ಮಾಸದಲ್ಲಿ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಬಡವರಿಗೆ ದಾನ ಮಾಡಬೇಕು, ಗೋಧಿ, ಅಕ್ಕಿ, ಬೇಳೆಕಾಳು ಇತ್ಯಾದಿಗಳನ್ನು ದಾನ ಮಾಡುವುದು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆಹಾರವಸ್ತುಗಳನ್ನು, ಬಟ್ಟೆಗಳನ್ನು ದಾನ ಮಾಡುವುದರಿಂದ ಶ್ರೀ ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಶ್ರೀ ಗಣೇಶನ ಕೃಪೆಯಿದ್ದರೆ ಬದುಕಿನಲ್ಲಿನ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗಿದೆ.
ಓಂ ಗಮ್ ಗಣಪತಯೇ ನಮಃ
ಈ ಬೀಜ ಮಂತ್ರ ಪ್ರತಿದಿನ ಪಠಿಸಿ
ಓಂ ಶ್ರೀ ಗಣೇಶಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications