Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications
