Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications