Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಬಿಗ್ಬಾಸ್ ಸ್ಪರ್ಧಿಗಳು ರೆಸಾರ್ಟ್ಗೆ ಶಿಫ್ಟ್: ಅರ್ಧಕ್ಕೆ ಬಿಗ್ಬಾಸ್ ಬಾಗಿಲು ಹಾಕಿದ್ದು ಇದೇ ಮೊದಲಲ್ಲ!
ಕನ್ನಡ ಬಿಗ್ಬಾಸ್ ಆರಂಭಗೊಂಡು ವಾರಗಳು ಕಳೆದಿವೆ ಅದರ ನಡುವೆಯೇ ಈ ಸೀಸನ್ ಬಹಳಷ್ಟು ವಿಚಾರಗಳಿಂದ ವಿಶೇಷ ಎಂದು ಘೋಷಿಸಲಾಗಿತ್ತು. ಈಗ ಸೀಸನ್ 12 ಅರ್ಧದಲ್ಲಿಯೇ ಮನೆಗೆ ಬೀಗ ಬಿದ್ದಿದೆ. ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಡದಿಯ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಜಿಲ್ಲಾಧಿಕಾರಿಯ ಸಮ್ಮುಖದಲ್ಲೇ ಎಲ್ಲಾ ಸ್ಪರ್ಧಿಗಳನ್ನು ಮನೆಯಿಂದ ಹೊರ ಕಳುಹಿಸಲಾಗಿದ್ದು, ಮನೆಗೆ ಬೀಗ ಹಾಕಲಾಗಿದೆ. ಹಾಗೆ ವಾಹಿನಿ ಕೂಡ ಈ ಕುರಿತಾಗಿ ತಡವಾಗಿ ಸ್ಪಷ್ಟನೆ ನೀಡಿದೆ. ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿದ್ದು, ವಾಹಿನಿಯ ಕಡೆಯಿಂದ ಕೋರ್ಟ್ಗೆ ತೆರಳುವ ಸೂಚನೆ ಸಿಕ್ಕಿದೆ.

ಆದ್ರೆ ಸದ್ಯಕ್ಕಂತು ಬಿಗ್ ಬಾಸ್ ಎಂಬ ದೊಡ್ಡ ಮನೆಗೆ ಬೀಗ ಬಿದ್ದಿದೆ. ಆದ್ರೆ ಸ್ಪರ್ಧಿಗಳನ್ನು ಬಿಡದಿಯಲ್ಲಿನ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ. ಹೌದು ರಾಜಕಾರಣಿಗಳು, ಹಾಗೆ ಸಿನಿಮಾ ಮಂದಿಯ ಫೇವರಿಟ್ ಸ್ಪಾಟ್ ಎಂದೇ ಹೆಸರಾಗಿರುವ ಈಗಲ್ ಟನ್ ರೆಸಾರ್ಟ್ಗೆ ಎಲ್ಲಾ 17 ಸ್ಪರ್ಧಿಗಳು ಕೂಡ ಶಿಫ್ಟ್ ಮಾಡಲಾಗುತ್ತಿದೆ.
ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಹರಿಬಿಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದು ಜಲ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆ ಕಾಯ್ದೆ 1974ರ ಉಲ್ಲಂಘನೆ ಎಂದು ನೋಟಿಸ್ ಜಾರಿ ಮಾಡಲಾಗಿತ್ತು. ಹಾಗೆ ಈಗ ತಹಶೀಲ್ದಾರ್ಅ ವರ ಸಮ್ಮುಖದಲ್ಲಿ ಬೀಗ ಸಹ ಹಾಕಲಾಗಿದೆ.
ಈ ನೋಟಿಸ್ ನೀಡಿ ಒಂದು ವಾರವಾದರು ಯಾವುದೇ ಉತ್ತರ ಬಂದಿರಲಿಲ್ಲ ಎಂಬ ಆರೋಪ ಕೂಡ ಇದೆ. ಸದ್ಯಕ್ಕೆ ಸ್ಪರ್ಧಿಗಳನ್ನು ಪೊಲೀಸರ ಭದ್ರತೆಯಲ್ಲಿ ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.
ಬಿಗ್ಬಾಸ್ ಅರ್ಧದಲ್ಲೇ ನಿಂತಿದ್ದು ಇದು ಮೊದಲಲ್ಲ!
ಬಿಗ್ ಬಾಸ್ ಆರಂಭಗೊಂಡು 12ನೇ ಸೀಸನ್ ನಡೆಯುತ್ತಿದೆ. ಆದ್ರೆ ಪ್ರತಿ ಬಾರಿ ಬಿಗ್ ಬಾಸ್ ಆರಂಭಗೊಂಡಾಗಲು ಒಂದಲ್ಲಾ ಒಂದು ರೀತಿಯಲ್ಲಿ ವಿವಾದಗಳನ್ನ ಮೈ ಮೇಲೆ ಎಳೆದುಕೊಳ್ಳುತ್ತಲೇ ಇರಲಿದೆ. ಈ ವಾರಿ 2 ವಾರಗಳ ಹತ್ತಿರದಲ್ಲೇ ಮನೆಗೆ ಬೀಗ ಬಿದ್ದಿದೆ. ಆದ್ರೆ ಇದಕ್ಕೂ ಮೊದಲು 70 ದಿನ ಪೂರೈಸಿದ್ದ ಬಿಗ್ ಬಾಸ್ ಅರ್ಧದಲ್ಲೇ ಷೋ ನಿಲ್ಲಿಸಿತ್ತು.
2021ರಲ್ಲಿ ಕೊರೊನಾ ಆರಂಭಗೊಂಡಾಗ ಈ ರೀತಿ ಮಾಡಲಾಗಿತ್ತು. ಕೊರೊನಾದಲ್ಲಿ ಲಾಕ್ಡೌನ್ ಘೋಷಣೆಗೂ ಮುನ್ನ ಬಿಗ್ ಬಾಸ್ ಆರಂಭಗೊಂಡಿತ್ತು, ಆದ್ರೆ ಮಧ್ಯದಲ್ಲಿ ಕೊರೊನಾ ಹೆಚ್ಚಾದ ಪರಿಣಾಮ ಷೋ ನಿಲ್ಲಿಸಬೇಕಾಯಿತು. ಸಮಯದಲ್ಲಿ ಸುಮಾರು 70 ದಿನಗಳ ಕಾಲ ಷೋ ನಡೆದಿತ್ತು. ಬಳಿಕ ಅರ್ಧದಲ್ಲೇ ಸ್ಪರ್ಧಿಗಳು ಹೊರಬರಬೇಕಾಯಿತು.
ಈಗಲ್ ಟನ್ ರೆಸಾರ್ಟ್ ಬಗ್ಗೆ
ಈ ಸೀಸನ್ನ ಎಲ್ಲಾ ಸ್ಪರ್ಧಿಗಳನ್ನು ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ. ರೆಸಾರ್ಟ್ನಲ್ಲಿ ಶೂಟಿಂಗ್ ನಡೆಯುವುದಿಲ್ಲ. ಬದಲಿಗೆ ಈ ಎಲ್ಲಾ ವಿವಾದಗಳು ಸರಿಯಾಗುವವರೆಗೂ ಸ್ಪರ್ಧಿಗಳು ಅಲ್ಲಿಯೇ ಉಳಿಯಲಿದ್ದಾರೆ. ಬಿಡದಿಯಲ್ಲಿರುವ ಈ ರೆಸಾರ್ಟ್ ರಾಜಕೀಯ ನಾಯಕರಿಂದಲೇ ಹೆಸರಾಗಿದೆ. ಆಪರೇಷನ್ ಕಾರಣಗಳಿಂದಾಗಿ ಈ ರೆಸಾರ್ಟ್ ಸುದ್ದಿಯಾಗುತ್ತೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಈ ರೆಸಾರ್ಟ್ ಬಹಳ ಸುದ್ದಿಯಾಗಿತ್ತು.
ಸರ್ಕಾರ ಬೀಳಿಸಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಆಗಿದ್ದರು. ಆದ್ರೆ ಅಲ್ಲಿಯೂ ರೆಸಾರ್ಟ್ ಬೇರೆ ವಿಚಾರಗಳಿಂದ ಸುದ್ದಿಯಾಗಿತ್ತು, ಆಗ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹೊಸಪೇಟೆ ಶಾಸಕ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.



Click it and Unblock the Notifications