Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಬಿಗ್ಬಾಸ್ಗೆ ಬೀಗ ಮುಂದೇನು? ಗೊಂದಲದ ನಡುವೆಯೇ ಹೊರಬಂತು ಪ್ರೋಮೋ!
Bigg Boss Kannada: ಬಿಗ್ಬಾಸ್ ಸೀಸನ್ 12ಗೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. 10 ದಿನಗಳ ಷೋ ಪ್ರಸಾರದ ಬಳಿಕ ಈಗ ಬೀಗ ಬಿದ್ದಿದೆ. ಅತ್ಯಂತ ದೊಡ್ಡ ಮನೆಯಾಗಿದ್ದ ಬಿಗ್ಬಾಸ್ ಮನೆ ಈಗ ಜನರಿಲ್ಲದೆ, ಸ್ಪಧಿಗಳಿಲ್ಲದೆ ಖಾಲಿಯಾಗಿದೆ. ನಿನ್ನೆ ರಾತ್ರಿ ಪೊಲೀಸರು ಹಾಗೂ ಸಿಬ್ಬಂದಿಯ ನೇತೃತ್ವದಲ್ಲಿ ಮನೆಗೆ ಬೀಗ ಹಾಕಲಾಗಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಸ್ಟುಡಿಯೋ, ಕೊಳಚೆ ನೀರನ್ನು ಸಂಸ್ಕರಿಸದೆ ನೇರವಾಗಿ ಮೋರಿಗೆ ಹರಿಬಿಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸದ್ಯ ಬಿಗ್ ಬಾಸ್ ಅಭಿಮಾನಿಗಳಲ್ಲಿ ಷೋ ಮುಂದುವರೆಯಲಿದ್ಯಾ? ಅಥವಾ ಅರ್ಧಕ್ಕೆ ನಿಲ್ಲಲಿದ್ಯಾ ಎಂಬ ಗೊಂದಲ ಮೂಡಿದೆ. ತಡರಾತ್ರಿ ಸಿಬ್ಬಂದಿ ಮನೆಗೆ ಬೀಗ ಹಾಕಿದ್ದಾರೆ. ಹೀಗಾಗಿ ಹೊಸ ಎಪಿಸೋಡ್ಗಳು ಶೂಟ್ ಹೇಗೆ ಮಾಡಲಾಗುತ್ತಿದೆ ಎಂಬ ಕುತೂಹಲದವಿದೆ. ಆದ್ರೆ ಬಿಗ್ ಬಾಸ್ ಮತ್ತೆ ಆರಂಭಗಾಗುವುದು ಕಷ್ಟಕರವಾಗಿದೆ.

ಈಗಾಗಲೇ ಕೋರ್ಟ್ ಮೆಟ್ಟಿಲೇರಲಾಗಿದೆ. ಜಾಲಿವುಡ್ ಸ್ಟುಡಿಯೋ ಪರಿಸರ ಇಲಾಖೆಯ ನಿಯಮಗಳ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಸ್ಫರ್ಧಿಗಳೆಲ್ಲರು ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ. ಹಾಗೆ 12ಕ್ಕೂ ಹೆಚ್ಚು ರೂಮ್ಗಳು ಬುಕ್ ಆಗಿವೆ ಎಂದು ವರದಿಯಾಗಿದೆ. ಬಿಗ್ ಬಾಸ್ ಮನೆಗೆ ಬೀಗ ಬೀಳುತ್ತಿದ್ದಂತೆ ವೀಕ್ಷಕರಿಗೆ ಶಾಕ್ ಆಗಿತ್ತು. ಹಾಗೆ ಅಡಚಣೆಗಾಗಿ ಕ್ಷಮೆ ಕೋರುತ್ತೇವೆ ಎಂದು ಕಲರ್ಸ್ ಕನ್ನಡ ವಿಷಾದ ವ್ಯಕ್ತಪಡಿಸಿದೆ.
ಆದ್ರೆ ಈಗ ಷೋ ಮತ್ತೆ ಮುಂದುವರೆಯಲಿದ್ಯಾ? ಅಥವಾ ಅಂತ್ಯವಾಗಲಿದ್ಯಾ ಎಂಬ ಕುತೂಹಲದ ಜೊತೆಗೆ ಪ್ರಶ್ನೆಗಳು ಕೂಡ ಎದುರಾಗಿವೆ. ಈ ವಿಚಾರವಾಗಿ ಜಾಲಿವುಡ್ ಸ್ಟುಡಿಯೋಸ್ ಕೋರ್ಟ್ ಮೆಟ್ಟಿಲೇರಿದೆ. ಅಲ್ಲಿನ ನಿರ್ಧಾರದ ಮೇಲೆ ಬಿಗ್ಬಾಸ್ ಭವಿಷ್ಯ ನಿರ್ಧಾರವಾಗಲಿದೆ.
ವಿವಾದದ ನಡುವೆ ಬಂತು ಪ್ರೋಮೋ
ನಿನ್ನೆ ಮನೆಗೆ ಬೀಗ ಬಿದ್ದಿದೆ. ಸ್ಪರ್ಧಿಗಳು ಬಿಡದಿಯ ಈಗಲ್ ಟನ್ ರೆಸಾರ್ಟ್ನಲ್ಲಿದ್ದಾರೆ. ಆದ್ರೆ ಕಲರ್ಸ್ ಕನ್ನಡ ಈ ದಿನದ ಸಂಚಿಕೆಯ ಪ್ರೋಮೋ ರಿಲೀಸ್ ಮಾಡಿದೆ. ಈ ಮೂಲಕ ಬಿಗ್ಬಾಸ್ ಎಂದಿನಂತೆ ಮುಂದುವರೆಯಲಿದೆ ಎಂಬ ಸೂಚನೆ ನೀಡಿದೆ. ಇದರಿಂದ ಶೋ ಅಂತ್ಯವಾಗಲಿದೆ ಎಂಬ ಅನುಮಾನಕ್ಕೆ ತೆರೆ ಬಿದ್ದಿದೆ. ಶೋ ನಿಲ್ಲಿಸುವುದಿಲ್ಲ ಎಂಬ ಸೂಚನೆಯನ್ನು ನೀಡಲಾಗಿದೆ.
ಪ್ರೋಮೋದಲ್ಲಿ ಮತ್ತೆ ಊಟದ ವಿಚಾರವಾಗಿ ಗಲಾಟೆ ಆಗಿರುವುದನ್ನು ತೋರಿಸಲಾಗಿದೆ. ಕಿಚನ್ ವಿಚಾರವಾಗಿ ಹಾಗೆ ಊಟದ ವಿಷಯದಲ್ಲಿ ರಕ್ಷಿತಾ ಶೆಟ್ಟಿ ಗಲಾಟೆ ಮಾಡುತ್ತಿರುವುದು ಪ್ರೋಮೋದಲ್ಲಿದೆ. ಇದು ಅಭಿಮಾನಿಗಳಿಗೆ ನೆಮ್ಮದಿ ತಂದಿದೆ. ಈ ವಾರ ಕೂಡ ಬಿಗ್ ಬಾಸ್ ಸಂಚಿಕೆಗಳು ಪ್ರಸಾರವಾಗಲಿದೆ ಎಂದು ಹೇಳಲಾಗಿದೆ.
ಸದ್ಯ ಈಗ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನಲೆಯಲ್ಲಿ ರಾಮನಗರ ಜಿಲ್ಲಾಡಳಿತದ ನೋಟಿಸ್ ವಿರುದ್ಧವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಅರ್ಜಿಯ ಜೊತೆಗೆ ತುರ್ತು ವಿಚಾರಣೆಗೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ. ಕೆಲ ದಿನದಲ್ಲಿ ಬಿಗ್ಬಾಸ್ ಪುನರ್ ಆರಂಭಿಸಲು ಅನುಮತಿ ಸಿಗದಿದ್ದರೆ ಶೋ ನಡೆಯಲು ಬೇರೊಂದು ಮಾರ್ಗ ಕಂಡುಕೊಳ್ಳಬೇಕಾಗುತ್ತದೆ. ಇಲ್ಲವೆ ಶೋ ಅನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು.



Click it and Unblock the Notifications
