ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪುರಸ್ಕೃತೆ ಬಾನು ಮುಷ್ತಾಕ್ : ಯಾರು ಈ ಲೇಖಕಿ ಗೊತ್ತಾ?

ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ದಸರಾ ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಾರಿಯ ದಸರಾ ಉದ್ಘಾಟನೆ ಯಾರು ನೆರವೇರಿಸಲಿದ್ದಾರೆ ಎಂಬುದು ಬಹಳ ಕುತೂಹಲ ಮೂಡಿಸಿತ್ತು. ಆದ್ರೆ ಈಗ ಈ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ.

ಈ ಬಾರಿಯ ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದೆ, ದಸರಾ ಆನೆಗಳು ಕೂಡ ತಾಲೀಮು ನಡೆಸುತ್ತಿವೆ. ಹಾಗೆ ಸೆ. 22ರಂದು ದಸರಾಗೆ ಅಧಿಕೃತವಾಗಿ ಚಾಲನೆ ಸಿಗಲಿದೆ.

Booker Prize Winner Banu Mushtaq To Inaugurate Dussehra

ಯಾರು ಈ ಬಾನು ಮುಷ್ತಾಕ್

ಬಾನು ಮುಷ್ತಾಕ್ ಹಾಸನದಲ್ಲಿ ಹುಟ್ಟಿ ಬೆಳೆದವರು ಅಲ್ಲಿಯೇ ಶಿಕ್ಷಣ ಪಡೆದವರು. ಆರಂಭದಲ್ಲಿ ಶಾಲಾ ಜೀವನದಲ್ಲಿಯೇ ಅವರು ಸಾಹಿತ್ಯದ ಕಡೆಗೆ ಒಲವು ಹೊಂದಿದ್ದರು, ಈ ಸಮಯದಲ್ಲಿ ಅವರು ಸಣ್ಣ ಕಥೆಗಳ ಬರೆದು ಶಿಕ್ಷಕರಿಂದ ಪ್ರಶಂಸೆ ಗಳಿಸಿದ್ದರು. ತಮ್ಮ 26ನೇ ವಯಸ್ಸಿನಲ್ಲಿ ಅವರು ಪ್ರಜಾಮತ ಎಂಬ ಕನ್ನಡ ನಿಯತಕಾಲಿಕೆಗೆ ಕಥೆಯೊಂದನ್ನು ಬರೆದಿದ್ದರು. ಇದು ಎಲ್ಲರ ಗಮನ ಸೆಳೆದಿದ್ದಲ್ಲದೆ ಅವರ ಸಣ್ಣ ಕಥೆಗಳು ಈ ಸಮಯದಲ್ಲಿ ಜನಪ್ರಿಯವಾಗಲು ಕಾರಣವಾಯಿತು.

ಹಾಗೆ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಹಸೀನಾ ಚಿತ್ರಕ್ಕೂ ಮುಷ್ತಾಕ್ ಅವರು ಬರೆದಿರುವ ಕರಿ ನಾಗರಗಳು ಎಂಬ ಕೃತಿ ಸ್ಪೂರ್ತಿಯಾಗಿತ್ತು. ಹಾರ್ಟ್ ಆಫ್ ಲ್ಯಾಂಪ್ ಕೃತಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿರುವ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತದ ಮಹಿಳಾ ಬರಹಗಾರ್ತಿ ಆಗಿದ್ದಾರೆ. ಇದಿಷ್ಟೇ ಅಲ್ಲ ಅವರು ಹಾಸನ ನಗರ ಪುರಸಭೆಯಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

1990ರಿಂದ 2023ರ ವರೆಗಿನ ಮುಸ್ಲಿಂ ಮಹಿಳೆಯರ ಹೋರಾಟಗಳ ಕುರಿತು ಅವರ ಹಾರ್ಟ್ ಆಫ್ ಲ್ಯಾಂಪ್ ಕೃತಿಯಲ್ಲಿ ನೋಡಬಹುದು. ಹಾಗೆ ಈಗ ದಸರಾ ಉದ್ಘಾಟನೆಗೂ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ತಂದಿದೆ. ಅವರು ಕೂಡ ಬಹಳ ಹೋರಾಟದ ಹಿನ್ನೆಲೆಯಲ್ಲಿ ಬಂದವರು, ಮುಸ್ಲಿ ಮಹಿಳೆಯರ ಹಕ್ಕುಗಳಿಗೆ ಹೋರಾಡಿದವರು, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದಿದ್ದಾರೆ. ಮೈಸೂರು ಜಿಲ್ಲಾಡಳಿತವು ಲೇಖಕಿ ಬಾನು ಮುಷ್ತಾಕ್ ಅವರಿಗೆ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ದಸರಾ ಉದ್ಘಾಟಿಸಿದ್ದು ಯಾರು?

2024ನೇ ಸಾಲಿನ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ನೆರವೇರಿಸಿದ್ದರು. ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ನೆರವೇರಿಸಿದ್ದರು.

2025ರ ದಸರಾ ಆರಂಭ ಯಾವಾಗ?

2025 ಸೆಪ್ಟೆಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಆಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ವಾರಗಳ ಕಾಲ ದಸರಾ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಈ ಸಮಯದಲ್ಲಿ ಮೈಸೂರು ಪ್ರವಾಸಗರಿಂದ ತುಂಬಿರಲಿದೆ.

English summary

Booker Prize Winner Banu Mushtaq To Inaugurate Dussehra

It is learnt that this year's Dasara inauguration will be performed by Booker Prize-winning Kannada author Banu Mushtaq.
Story first published: Friday, August 22, 2025, 19:37 [IST]
X
Desktop Bottom Promotion