Latest Updates
-
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ನಿಧನ..! ನಟಿಗೆ ಆಗಿದ್ದೇನು?
ಇತ್ತೀಚಿಗೆ ಕಿರುತೆರೆ, ಸಿನಿಮಾ ನಟ ನಟಿಯರು ಆತ್ಮಹತ್ಯೆಯಂತಹ ಕೆಲಸಕ್ಕೆ ಕೈ ಹಾಕುತ್ತಿರುವುದು ಆತಂಕ ಹೆಚ್ಚಲು ಕಾಣವಾಗಿದೆ. ಈಗ ಬ್ರಹ್ಮಗಂಟು ಧಾರವಾಹಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ. ಅವರು ಕೆಲ ವರ್ಷದಿಂದ ಹೈದರಾಬಾದ್ನಲ್ಲಿ ನೆಲಸಿದ್ದರು ಅಲ್ಲಿಯೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಶೋಭಿತಾ ಶಿವಣ್ಣ, ಬ್ರಹ್ಮಗಂಟು, ನಿನ್ನಿಂದಲೆ ಸೇರಿ ಹಲವು ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಹಾಗೆ ಎರಡೊಂದ್ಲಾ ಮೂರು, ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಎಟಿಎಮ್ , ಅಪಾರ್ಟ್ಮಂಟ್ ಟು ಮರ್ಡರ್, ವಂದನಾ ಸೇರಿ ಇತ್ತಿಚಿಗೆ ತೆರೆಕಂಡಿದ್ದ ಫಸ್ಟ್ ಡೇ ಫಸ್ಟ್ ಶೋ ಸಿನಿಮಾಗಳಲ್ಲು ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹಾಸನ ಮೂಲದ ಸಕಲೇಶಪುರ ಅವರ ಮೂಲ ಜನ್ಮ ಸ್ಥಳ ಎಂದು ತಿಳಿದುಬಂದಿದೆ. ಅವರ ಸಾವಿನ ಸುದ್ದಿ ಕುಟುಂಬಸ್ಥರು, ಸ್ನೇಹಿತರಿಗೆ ಸಿಡಿಲಿನಂತೆ ಅಪ್ಪಳಿಸಿದೆ.
ಬ್ರಹ್ಮಗಂಟು ಸೀರಿಯಲ್ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಅವರು ಎಲ್ಲರ ಮನೆ ಮನೆಯ ಮಾತಾಗಿದ್ದರು, ಹೀಗಾಗಿ ಉತ್ತಮ ನಟನ ಕೌಶಲ್ಯದಿಂದಲೂ ಅವರು ಗಮನ ಸೆಳೆದಿದ್ದರು. ಕಳೆದ ವರ್ಷ 2023ರ ಮೇ 22ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅವರು ಹೃದರಾಬಾದ್ನಲ್ಲಿಯೇ ನೆಲೆಸಿದ್ದರು, ಆದರೆ ಅವರು ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಇನ್ನು ಇದೇ ನವೆಂಬರ್ ತಿಂಗಳಲ್ಲಿ ನಟ, ನಿರ್ದೇಶಕ ಗುರು ಪ್ರಸಾದ್ ಕೂಡ ಸಾವಿಗೀಡಾಗಿದ್ದರು. ತಮ್ಮ ಅಪಾರ್ಟ್ಮೆಂಟ್ನಲ್ಲೇ ಅವರು ನೇಣಿಗೆ ಶರಣಾಗಿದ್ದರು. ಈಗ ನಟಿ ಶೋಭಿತಾ ಶಿವಣ್ಣ ಸುದ್ದಿ ಗಾಂಧಿನಗರದ ಮಂದಿ ಶಾಕ್ ನೀಡಿದೆ. ಹಾಗೆ ಯಾವ ಕಾರಣಕ್ಕೆ ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರಕ್ಕೆ ನಟ ನಟಿಯರು ಮುಂದಾಗುತ್ತಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿ ಎಲ್ಲರ ಕಾಡುತ್ತಿದೆ.
ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು ಗುರುಪ್ರಸಾದ್ ಪ್ರಕರಣ
ಅತ್ಯಂತ ಪ್ರತಿಭಾನ್ವಿತ ನಿರ್ದೇಶಕ ಎಂದೇ ಹೆಸರು ಮಾಡಿದ್ದ ಗುರು ಪ್ರಸಾದ್ ಅವರ ಸಾವು ಇಡೀ ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು. ಕೇವಲ 50 ವರ್ಷದ ಅವರು ಅಪಾರ್ಟ್ಮೆಂಟ್ನಲ್ಲಿ ಸಾವಿಗೀಡಾಗಿದ್ದರು. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಾಸನೆ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿತ್ತು.
ಸಿನಿಮಾಗಳಿಂದ ಅವರು ಸಾಲಕ್ಕೆ ಬಿದ್ದಿದ್ದರು, ಹಿಂದಿನ ಸಿನಿಮಾ ಸೋಲು ಅವರನ್ನು ಖಿನ್ನತೆಗೆ ತಳ್ಳಿತ್ತು ಎಂಬ ಅನುಮಾನ ಮೂಡಿತ್ತಲ್ಲದೆ, ಕೌಟುಂಬಿಕ ಸ್ಥಿತಿಗತಿಗಳು ಕೂಡ ಅವರನ್ನು ಈ ನಿರ್ಧಾರಕ್ಕೆ ತಳ್ಳಿದ್ದವು ಎಂಬ ಅನುಮಾನ ಮೂಡಿಸಿತ್ತು. ಆದ್ರೆ ಈಗ ಮತ್ತೋರ್ವ ಪ್ರತಿಭಾನ್ವಿತ ಯುವ ನಟಿಯ ದುರಂತ ಅಂತ್ಯ ಎಲ್ಲರಿಗೂ ಶಾಕ್ ನೀಡಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ- 9152987821



Click it and Unblock the Notifications
