Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ನಿಧನ..! ನಟಿಗೆ ಆಗಿದ್ದೇನು?
ಇತ್ತೀಚಿಗೆ ಕಿರುತೆರೆ, ಸಿನಿಮಾ ನಟ ನಟಿಯರು ಆತ್ಮಹತ್ಯೆಯಂತಹ ಕೆಲಸಕ್ಕೆ ಕೈ ಹಾಕುತ್ತಿರುವುದು ಆತಂಕ ಹೆಚ್ಚಲು ಕಾಣವಾಗಿದೆ. ಈಗ ಬ್ರಹ್ಮಗಂಟು ಧಾರವಾಹಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವರದಿಯಾಗಿದೆ. ಅವರು ಕೆಲ ವರ್ಷದಿಂದ ಹೈದರಾಬಾದ್ನಲ್ಲಿ ನೆಲಸಿದ್ದರು ಅಲ್ಲಿಯೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಶೋಭಿತಾ ಶಿವಣ್ಣ, ಬ್ರಹ್ಮಗಂಟು, ನಿನ್ನಿಂದಲೆ ಸೇರಿ ಹಲವು ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಹಾಗೆ ಎರಡೊಂದ್ಲಾ ಮೂರು, ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಎಟಿಎಮ್ , ಅಪಾರ್ಟ್ಮಂಟ್ ಟು ಮರ್ಡರ್, ವಂದನಾ ಸೇರಿ ಇತ್ತಿಚಿಗೆ ತೆರೆಕಂಡಿದ್ದ ಫಸ್ಟ್ ಡೇ ಫಸ್ಟ್ ಶೋ ಸಿನಿಮಾಗಳಲ್ಲು ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹಾಸನ ಮೂಲದ ಸಕಲೇಶಪುರ ಅವರ ಮೂಲ ಜನ್ಮ ಸ್ಥಳ ಎಂದು ತಿಳಿದುಬಂದಿದೆ. ಅವರ ಸಾವಿನ ಸುದ್ದಿ ಕುಟುಂಬಸ್ಥರು, ಸ್ನೇಹಿತರಿಗೆ ಸಿಡಿಲಿನಂತೆ ಅಪ್ಪಳಿಸಿದೆ.
ಬ್ರಹ್ಮಗಂಟು ಸೀರಿಯಲ್ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಅವರು ಎಲ್ಲರ ಮನೆ ಮನೆಯ ಮಾತಾಗಿದ್ದರು, ಹೀಗಾಗಿ ಉತ್ತಮ ನಟನ ಕೌಶಲ್ಯದಿಂದಲೂ ಅವರು ಗಮನ ಸೆಳೆದಿದ್ದರು. ಕಳೆದ ವರ್ಷ 2023ರ ಮೇ 22ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅವರು ಹೃದರಾಬಾದ್ನಲ್ಲಿಯೇ ನೆಲೆಸಿದ್ದರು, ಆದರೆ ಅವರು ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.
ಇನ್ನು ಇದೇ ನವೆಂಬರ್ ತಿಂಗಳಲ್ಲಿ ನಟ, ನಿರ್ದೇಶಕ ಗುರು ಪ್ರಸಾದ್ ಕೂಡ ಸಾವಿಗೀಡಾಗಿದ್ದರು. ತಮ್ಮ ಅಪಾರ್ಟ್ಮೆಂಟ್ನಲ್ಲೇ ಅವರು ನೇಣಿಗೆ ಶರಣಾಗಿದ್ದರು. ಈಗ ನಟಿ ಶೋಭಿತಾ ಶಿವಣ್ಣ ಸುದ್ದಿ ಗಾಂಧಿನಗರದ ಮಂದಿ ಶಾಕ್ ನೀಡಿದೆ. ಹಾಗೆ ಯಾವ ಕಾರಣಕ್ಕೆ ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರಕ್ಕೆ ನಟ ನಟಿಯರು ಮುಂದಾಗುತ್ತಿದ್ದಾರೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿ ಎಲ್ಲರ ಕಾಡುತ್ತಿದೆ.
ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು ಗುರುಪ್ರಸಾದ್ ಪ್ರಕರಣ
ಅತ್ಯಂತ ಪ್ರತಿಭಾನ್ವಿತ ನಿರ್ದೇಶಕ ಎಂದೇ ಹೆಸರು ಮಾಡಿದ್ದ ಗುರು ಪ್ರಸಾದ್ ಅವರ ಸಾವು ಇಡೀ ಚಿತ್ರರಂಗಕ್ಕೆ ಶಾಕ್ ಕೊಟ್ಟಿತ್ತು. ಕೇವಲ 50 ವರ್ಷದ ಅವರು ಅಪಾರ್ಟ್ಮೆಂಟ್ನಲ್ಲಿ ಸಾವಿಗೀಡಾಗಿದ್ದರು. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಾಸನೆ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿತ್ತು.
ಸಿನಿಮಾಗಳಿಂದ ಅವರು ಸಾಲಕ್ಕೆ ಬಿದ್ದಿದ್ದರು, ಹಿಂದಿನ ಸಿನಿಮಾ ಸೋಲು ಅವರನ್ನು ಖಿನ್ನತೆಗೆ ತಳ್ಳಿತ್ತು ಎಂಬ ಅನುಮಾನ ಮೂಡಿತ್ತಲ್ಲದೆ, ಕೌಟುಂಬಿಕ ಸ್ಥಿತಿಗತಿಗಳು ಕೂಡ ಅವರನ್ನು ಈ ನಿರ್ಧಾರಕ್ಕೆ ತಳ್ಳಿದ್ದವು ಎಂಬ ಅನುಮಾನ ಮೂಡಿಸಿತ್ತು. ಆದ್ರೆ ಈಗ ಮತ್ತೋರ್ವ ಪ್ರತಿಭಾನ್ವಿತ ಯುವ ನಟಿಯ ದುರಂತ ಅಂತ್ಯ ಎಲ್ಲರಿಗೂ ಶಾಕ್ ನೀಡಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ- 9152987821



Click it and Unblock the Notifications